ಐಟಿ ಕಂಪೆನಿಗಳಿಗೆ ಉಗ್ರರಿಂದ ಬೆದರಿಕೆ ಪತ್ರ
ಬೆಂಗಳೂರು, ಜ. 4 : ಸಾಫ್ಟವೇರ್ ಉದ್ಯಮದ ಸ್ವರ್ಗ ಎಂದೇ ಖ್ಯಾತಿಯಾಗಿರುವ ಬೆಂಗಳೂರಿನ ಮೇಲೆ ಉಗ್ರ ದೃಷ್ಟಿ ನೆಟ್ಟಿದ್ದು, ನಗರದ ಪ್ರತಿಷ್ಠಿತ ಕಂಪನಿಗಳಾದ ವಿಪ್ರೋ, ಇನ್ಫೋಸಿಸ್, ಅಕ್ಸೆಂಚರ್, ಕ್ಯಾಪ್ ಜೆಮಿನಿ ಹಾಗೂ ಕ್ರೆನ್ಸ್ ಕಂಪನಿಗಳು ಸೇರಿದಂತೆ ಅನೇಕ ಐಟಿ ಕಂಪನಿಗಳಿಗೆ ಉಗ್ರರಿಂದ ಇಮೇಲ್ ಬೆದರಿಕೆ ಪತ್ರ ಬಂದಿರುವುದು ಬೆಳಕಿಗೆ ಬಂದಿದೆ.
ಅಮೆರಿಕದಿಂದ ಈ ಇಮೇಲ್ ರವಾನಿಸಲಾಗಿದೆ. ಶನಿವಾರ ಬೆಳಗ್ಗೆ ಕಂಪನಿಗಳ ಇನ್ ಬಾಕ್ಸ್ ನಲ್ಲಿ ಈ ಬೆದರಿಕೆ ಇರುವ ಇಮೇಲ್ ಪತ್ರ ಕಂಪನಿಯ ಮುಖ್ಯಸ್ಥರ ಕೈಸೇರಿದೆ. ಬೆಂಗಳೂರು ನಗರದ ವಿವಿಧೆಡೆ ಅತೀ ಶೀಘ್ರದಲ್ಲಿ ಭಯೋತ್ಪಾದನೆ ನಡೆಸುವುದಾಗಿ ಇಮೇಲ್ ಪತ್ರದಲ್ಲಿ ಬರೆಯಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಗೋಪಾಲ್ ಬಿ ಹೂಸೂರು ಖಚಿತಪಡಿಸಿದ್ದಾರೆ. ನಾವು ಈಗಾಗಲೇ ಕಂಪನಿಯ ಮುಖ್ಯಸ್ಥರೊಂದಿಗೆ ಮಾತುಕತೆ ನಡೆಸಿದ್ದೇವೆ. ಬೆದರಿಕೆಯ ಹಿನ್ನೆಲೆಯಲ್ಲಿ ಖಾಸಗಿ ಭದ್ರತೆ ಹಾಗೂ ಪೊಲೀಸ್ ಭದ್ರತೆಯನ್ನು ಭಾರಿ ಪ್ರಮಾಣದಲ್ಲಿ ನಿಯೋಜಿಸಲು ಕ್ರಮಕೈಗೊಳ್ಳಲಾಗಿದೆ ಎಂದು ಹೊಸೂರು ಹೇಳಿದರು.
ಮುಂಬೈ ಭಯೋತ್ಪಾದನೆ ನಂತರ ಅಮೆರಿಕದಿಂದ ಉಗ್ರರು ಇಮೇಲ್ ಪತ್ರ ರವಾನಿಸಿರುವುದು ಕಂಪನಿಯ ಮುಖ್ಯಸ್ಥರನ್ನು ಚಿಂತೆಗೀಡು ಮಾಡಿದೆ. ಈ ಹಿಂದೆ ಅನೇಕ ಸಲ ಇಂತಹ ಬೆದರಿಕೆ ಪತ್ರ ಬಂದಿತ್ತಾದರೂ ಈ ಬಾರಿ ಬಂದಿರುವ ಈಮೇಲ್ ಬೆದರಿಕೆಯನ್ನು ನಾವು ಲಘುವಾಗಿ ಪರಿಗಣಿಸುವುದಿಲ್ಲ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ತಿಳಿಸಿದ್ದಾರೆ. ಅಮೆರಿಕದಿಂದ ಇಮೇಲ್ ಬಂದಿದೆಯಾದರೂ ಇದನ್ನು ಶಂಕರ ಬಿದರಿ ಬಲವಾಗಿ ತಳ್ಳಿಹಾಕಿದ್ದಾರೆ. ಉಗ್ರರ ನಮ್ಮ ಗಮನ ಬೇರೆಡೆ ಸೆಳೆಯಲು ಸಂಚು ರೂಪಿಸಿರುವ ಸಾಧ್ಯತೆ ಇದೆ. ಈ ಬಗ್ಗೆ ಸ್ಪಷ್ಟವಾಗಿ ಏನನ್ನೂ ಹೇಳಲು ಸಾಧ್ಯವಿಲ್ಲ ಎಂದು ಹೇಳಿದರು. ಪಾಕಿಸ್ತಾನದಲ್ಲಿರುವ ಉಗ್ರ ಸಂಘಟನೆ ಇಮೇಲ್ ರವಾನಿಸಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಸಿಮಿ ಸಂಘಟನೆ ಕೆಲವು ಕಾರ್ಯಕರ್ತರು ಲಷ್ಕರ್ ಇ ತೊಯ್ಬಾ ಸಂಘಟನೆ ಜತೆ ಗುರುತಿಸಿಕೊಂಡಿರುವುದು ಬೆಳಕಿದೆ ಬಂದಿದೆ. ಸಿಮಿ ಸಂಘಟನೆಯ ಕೆಲವರು ಕರ್ನಾಟಕದ ವಿವಿಧ ಭಾಗಗಳಲ್ಲಿ ಕಾರ್ಯಾಚರಣೆ ನಡೆಸುವ ವೇಳೆ ಪೊಲೀಸರಿಗೆ ಸೆರೆಸಿಕ್ಕಿದ್ದರು. ಬೆಂಗಳೂರಿಗೆ ಆಗಾಗ್ಗೆ ಇಂತಹ ಬೆದರಿಕೆ ಬರುವುದು ಸಾಮಾನ್ಯವಾಗಿಬಿಟ್ಟಿದೆ. ಅವ್ಯಾಹತವಾಗಿ ಬೀಡುಬಿಟ್ಟಿರುವ ಸಾಫ್ಟವೇರ್ ಉದ್ಯಮದ ಉಗ್ರರ ಕಣ್ಣು ಕುಕ್ಕಿದೆ ಎನ್ನಲಾಗಿದೆ. ಅಲ್ಲಿರುವ ಸಾಫ್ಟವೇರ್ ಕಂಪನಿಗಳ ಮೇಲೆ ದಾಳಿ ನಡೆಸಿದರೆ ಭಾರತ ಸೇರಿ ಅಮೆರಿಕದ ಅರ್ಥಿಕತೆ ಮೇಲೆ ನೇರ ಪರಿಣಾಮ ಬೀರುತ್ತದೆ ಎನ್ನುವುದು ಉಗ್ರರ ಲೆಕ್ಕಾಚಾರವಾಗಿದೆ ಎನ್ನಲಾಗಿದೆ.
(ದಟ್ಸ್ ಕನ್ನಡ ವಾರ್ತೆ)
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications