ಐಟಿ ಕಂಪೆನಿಗಳಿಗೆ ಉಗ್ರರಿಂದ ಬೆದರಿಕೆ ಪತ್ರ
ಬೆಂಗಳೂರು, ಜ. 4 : ಸಾಫ್ಟವೇರ್ ಉದ್ಯಮದ ಸ್ವರ್ಗ ಎಂದೇ ಖ್ಯಾತಿಯಾಗಿರುವ ಬೆಂಗಳೂರಿನ ಮೇಲೆ ಉಗ್ರ ದೃಷ್ಟಿ ನೆಟ್ಟಿದ್ದು, ನಗರದ ಪ್ರತಿಷ್ಠಿತ ಕಂಪನಿಗಳಾದ ವಿಪ್ರೋ, ಇನ್ಫೋಸಿಸ್, ಅಕ್ಸೆಂಚರ್, ಕ್ಯಾಪ್ ಜೆಮಿನಿ ಹಾಗೂ ಕ್ರೆನ್ಸ್ ಕಂಪನಿಗಳು ಸೇರಿದಂತೆ ಅನೇಕ ಐಟಿ ಕಂಪನಿಗಳಿಗೆ ಉಗ್ರರಿಂದ ಇಮೇಲ್ ಬೆದರಿಕೆ ಪತ್ರ ಬಂದಿರುವುದು ಬೆಳಕಿಗೆ ಬಂದಿದೆ.
ಅಮೆರಿಕದಿಂದ ಈ ಇಮೇಲ್ ರವಾನಿಸಲಾಗಿದೆ. ಶನಿವಾರ ಬೆಳಗ್ಗೆ ಕಂಪನಿಗಳ ಇನ್ ಬಾಕ್ಸ್ ನಲ್ಲಿ ಈ ಬೆದರಿಕೆ ಇರುವ ಇಮೇಲ್ ಪತ್ರ ಕಂಪನಿಯ ಮುಖ್ಯಸ್ಥರ ಕೈಸೇರಿದೆ. ಬೆಂಗಳೂರು ನಗರದ ವಿವಿಧೆಡೆ ಅತೀ ಶೀಘ್ರದಲ್ಲಿ ಭಯೋತ್ಪಾದನೆ ನಡೆಸುವುದಾಗಿ ಇಮೇಲ್ ಪತ್ರದಲ್ಲಿ ಬರೆಯಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಗೋಪಾಲ್ ಬಿ ಹೂಸೂರು ಖಚಿತಪಡಿಸಿದ್ದಾರೆ. ನಾವು ಈಗಾಗಲೇ ಕಂಪನಿಯ ಮುಖ್ಯಸ್ಥರೊಂದಿಗೆ ಮಾತುಕತೆ ನಡೆಸಿದ್ದೇವೆ. ಬೆದರಿಕೆಯ ಹಿನ್ನೆಲೆಯಲ್ಲಿ ಖಾಸಗಿ ಭದ್ರತೆ ಹಾಗೂ ಪೊಲೀಸ್ ಭದ್ರತೆಯನ್ನು ಭಾರಿ ಪ್ರಮಾಣದಲ್ಲಿ ನಿಯೋಜಿಸಲು ಕ್ರಮಕೈಗೊಳ್ಳಲಾಗಿದೆ ಎಂದು ಹೊಸೂರು ಹೇಳಿದರು.
ಮುಂಬೈ ಭಯೋತ್ಪಾದನೆ ನಂತರ ಅಮೆರಿಕದಿಂದ ಉಗ್ರರು ಇಮೇಲ್ ಪತ್ರ ರವಾನಿಸಿರುವುದು ಕಂಪನಿಯ ಮುಖ್ಯಸ್ಥರನ್ನು ಚಿಂತೆಗೀಡು ಮಾಡಿದೆ. ಈ ಹಿಂದೆ ಅನೇಕ ಸಲ ಇಂತಹ ಬೆದರಿಕೆ ಪತ್ರ ಬಂದಿತ್ತಾದರೂ ಈ ಬಾರಿ ಬಂದಿರುವ ಈಮೇಲ್ ಬೆದರಿಕೆಯನ್ನು ನಾವು ಲಘುವಾಗಿ ಪರಿಗಣಿಸುವುದಿಲ್ಲ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ತಿಳಿಸಿದ್ದಾರೆ. ಅಮೆರಿಕದಿಂದ ಇಮೇಲ್ ಬಂದಿದೆಯಾದರೂ ಇದನ್ನು ಶಂಕರ ಬಿದರಿ ಬಲವಾಗಿ ತಳ್ಳಿಹಾಕಿದ್ದಾರೆ. ಉಗ್ರರ ನಮ್ಮ ಗಮನ ಬೇರೆಡೆ ಸೆಳೆಯಲು ಸಂಚು ರೂಪಿಸಿರುವ ಸಾಧ್ಯತೆ ಇದೆ. ಈ ಬಗ್ಗೆ ಸ್ಪಷ್ಟವಾಗಿ ಏನನ್ನೂ ಹೇಳಲು ಸಾಧ್ಯವಿಲ್ಲ ಎಂದು ಹೇಳಿದರು. ಪಾಕಿಸ್ತಾನದಲ್ಲಿರುವ ಉಗ್ರ ಸಂಘಟನೆ ಇಮೇಲ್ ರವಾನಿಸಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಸಿಮಿ ಸಂಘಟನೆ ಕೆಲವು ಕಾರ್ಯಕರ್ತರು ಲಷ್ಕರ್ ಇ ತೊಯ್ಬಾ ಸಂಘಟನೆ ಜತೆ ಗುರುತಿಸಿಕೊಂಡಿರುವುದು ಬೆಳಕಿದೆ ಬಂದಿದೆ. ಸಿಮಿ ಸಂಘಟನೆಯ ಕೆಲವರು ಕರ್ನಾಟಕದ ವಿವಿಧ ಭಾಗಗಳಲ್ಲಿ ಕಾರ್ಯಾಚರಣೆ ನಡೆಸುವ ವೇಳೆ ಪೊಲೀಸರಿಗೆ ಸೆರೆಸಿಕ್ಕಿದ್ದರು. ಬೆಂಗಳೂರಿಗೆ ಆಗಾಗ್ಗೆ ಇಂತಹ ಬೆದರಿಕೆ ಬರುವುದು ಸಾಮಾನ್ಯವಾಗಿಬಿಟ್ಟಿದೆ. ಅವ್ಯಾಹತವಾಗಿ ಬೀಡುಬಿಟ್ಟಿರುವ ಸಾಫ್ಟವೇರ್ ಉದ್ಯಮದ ಉಗ್ರರ ಕಣ್ಣು ಕುಕ್ಕಿದೆ ಎನ್ನಲಾಗಿದೆ. ಅಲ್ಲಿರುವ ಸಾಫ್ಟವೇರ್ ಕಂಪನಿಗಳ ಮೇಲೆ ದಾಳಿ ನಡೆಸಿದರೆ ಭಾರತ ಸೇರಿ ಅಮೆರಿಕದ ಅರ್ಥಿಕತೆ ಮೇಲೆ ನೇರ ಪರಿಣಾಮ ಬೀರುತ್ತದೆ ಎನ್ನುವುದು ಉಗ್ರರ ಲೆಕ್ಕಾಚಾರವಾಗಿದೆ ಎನ್ನಲಾಗಿದೆ.
(ದಟ್ಸ್ ಕನ್ನಡ ವಾರ್ತೆ)
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications