ಶಿವರಾಜ್ ಪಾಟೀಲ್ ರಕ್ತ ಯಾವ ದೇಶದ್ದು?
ಮುಂಬೈ, ಜ. 4 : ಕೇಂದ್ರದ ಮಾಜಿ ಗೃಹ ಸಚಿವ ಶಿವರಾಜ್ ಪಾಟೀಲ್ ಅವರ ಮೈಯಲ್ಲಿ ಹರಿಯುತ್ತಿರುವ ರಕ್ತ ಭಾರತದ್ದೋ ಅಥವಾ ಇಟಲಿಯದ್ದೋ ಎಂದು ಶಿವಸೇನೆ ಮುಖಂಡ ಉದ್ಧವ್ ಠಾಕ್ರೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಉಗ್ರ ಅಫ್ಜಲ್ ಗುರು ಗಲ್ಲು ಶಿಕ್ಷೆ ನೀಡದಿರುವುದನ್ನು ಸಮರ್ಥಿಸಿಕೊಂಡ ನೀಡಿರುವ ಪಾಟೀಲ್ ಹೇಳಿಕೆಯನ್ನು ಉದ್ಧವ್ ಠಾಕ್ರೆ ತೀವ್ರವಾಗಿ ಖಂಡಿಸಿದ್ದಾರೆ.
ಶಿವರಾಜ್ ಪಾಟೀಲ್ ನಂತಹ ನಾಯಕರು ಪಾಕಿಸ್ತಾನತಕ್ಕಿಂತಲೂ ಅಪಾಯಕಾರಿ ಎಂದು ಕಿಡಿಕಾರಿದ ಉದ್ಧವ್, ಇಂತಹ ವ್ಯಕ್ತಿಗಳು ದೇಶದ ಅಧಿಕಾರದ ಚುಕ್ಕಾಣಿ ಹಿಡಿದು ಆಡಳಿತ ನಡೆಸಿರುವುದು ನಾಚಿಕೆಗೇಡಿನ ಸಂಗತಿ ಎಂದರು. ಇಂಥವರಿಂದಲೇ ಮುಂಬೈ ಭಯೋತ್ಪಾದನೆಯಂತಹ ಘಟನೆಗಳು ನಡೆಯುತ್ತಲೇ ಇರುತ್ತವೆ ಶಿವರಾಜ್ ಪಾಟೀಲ್ ಸಾರ್ವಜನಿಕವಾಗಿ ಹೇಳಿಕೆ ನೀಡುವಾಗ ಮೈಮೇಲೆ ಎಚ್ಚರವಿರಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು. ಪಾಟೀಲ್ ಒಬ್ಬ ಸಾಮಾನ್ಯ ಮನುಷ್ಯ ಅಲ್ಲ. ದೇಶದ ಉನ್ನತ ಹುದ್ದೆಯಾದ ಗೃಹ ಸಚಿವ ಸ್ಥಾನದಲ್ಲಿದ್ದವರು. ಮಾತಿನ ಮೇಲೆ ನಿಗಾ ಇರಲಿ ಎಂದು ಸಲಹೆ ನೀಡಿದರು.
ಇದಕ್ಕೆ ಧ್ವನಿಗೂಡಿಸಿರುವ ಬಿಜೆಪಿ ಮುಖಂಡ ಗೋಪಿನಾಥ್ ಮುಂಡೆ, ಪಾಟೀಲ್ ಹೇಳಿಕೆ ದುರದೃಷ್ಟಕರ ಎಂದರು. ಸಂಸತ್ ದಾಳಿಯ ಪ್ರಮುಖ ಆರೋಪಿ ಅಫ್ಜಲ್ ಗುರುನನ್ನು ಗಲ್ಲುಗೇರಿಸಿ ಎಂದು ಸುಪ್ರಿಂಕೋರ್ಟ್ ಅದೇಶ ನೀಡಿದೆ. ಇಷ್ಟಾದರೂ ಕೂಡ ಕಾಂಗ್ರೆಸ್ ನಾಯಕರು ವರ್ತಿಸುವ ರೀತಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಬುಡಮೇಲುಗೊಳಿಸುವುದಾಗಿದೆ ಎಂದು ಆರೋಪಿಸಿದರು.
ಸಂಸತ್ ಭವನದ ಮೇಲೆ ದಾಳಿ ಪ್ರಕರಣದ ಪ್ರಮುಖ ರೂವಾರಿ ಅಫ್ಜಲ್ ಗುರನನ್ನು ಗಲ್ಲಿಗೇರಿಸಲು ಅಷ್ಟೊಂದು ಅವಸರ ಏಕೆ ಎಂದು ಭಾನುವಾರ ಔರಂಗ್ ಬಾದ್ ನಲ್ಲಿ ನಡೆದ ಸಭೆಯಲ್ಲಿ ಕೇಂದ್ರದ ಮಾಜಿ ಗೃಹ ಸಚಿವ ಶಿವರಾಜ್ ಪಾಟೀಲ್ ಪ್ರಶ್ನಿಸಿದ್ದರು. ಮಾಜಿ ಪ್ರಧಾನಮಂತ್ರಿ ರಾಜೀವ ಗಾಂಧಿ ಹತ್ಯೆ ಮಾಡಿದವರ ಪ್ರಕರಣವೇ ಬಾಕಿ ಇದೆ. 30 ರಿಂದ 35 ಮಂದಿಯ ಕ್ಷಮದಾನದ ಅರ್ಜಿ ಇನ್ನೂ ಇತ್ಯರ್ಥವಾಗಿಲ್ಲ. ಅವರೆನ್ನಲ್ಲಾ ಬಿಟ್ಟು ಅಫ್ಜಲ್ ಗುರುವನ್ನೇ ಗಲ್ಲಿಗೇರಿಸಿ ಎಂದು ಏಕೆ ಹೇಳುತ್ತೀರಿ ಎಂದು ಶಿವರಾಜ್ ಪಾಟೀಲ್ ಮರು ಪ್ರಶ್ನೆ ಹಾಕಿದ್ದರು.
(ದಟ್ಸ್ ಕನ್ನಡ ವಾರ್ತೆ)
-
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
Viral Video: ಲಂಡನ್ ರಸ್ತೆಯಲ್ಲಿ ರಾರಾಜಿಸಿದ ಭಾರತದ ಆಟೋ ರಿಕ್ಷಾ: ವಿಡಿಯೋ ನೋಡಿ ದೆಹಲಿ ಎಂದ ನೆಟ್ಟಿಗರು -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ












Click it and Unblock the Notifications