ಪಾಕ್ ಗೆ ಸಾಕ್ಷ್ಯಾಧಾರಗಳನ್ನು ನೀಡಿದ್ದೇವೆ, ಪ್ರಣಬ್
ನವದೆಹಲಿ, ಜ. 5 : ಮುಂಬೈ ಭಯೋತ್ಪಾದನೆ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ವಾಕ್ಸಮರ ನಡೆಯುತ್ತಿರುವ ಬೆನ್ನಲ್ಲೇ ಇಂದು ಭಾರತ ಮತ್ತೊಮ್ಮೆ ತನ್ನ ನಿಲುವನ್ನು ಸ್ಪಷ್ಪಡಿಸಿದೆ. ಮುಂಬೈ ಭಯೋತ್ಪಾದನೆಗೆ ಸಂಬಂಧಿಸಿದಂತೆ ಎಲ್ಲ ಸಾಕ್ಷ್ಯಾಧಾರಗಳನ್ನು ಪಾಕಿಸ್ತಾನಕ್ಕೆ ನೀಡಲಾಗಿದೆ. ಕೂಡಲೇ ಪಾಕ್ ಸರ್ಕಾರ ಉಗ್ರರ ವಿರುದ್ಧ ಕ್ರಮ ಕೈಗೊಳ್ಳಲಿ ಎಂದು ವಿದೇಶಾಂಗ ಖಾತೆ ಸಚಿವ ಪ್ರಣಬ್ ಮುಖರ್ಜಿ ಒತ್ತಾಯಿಸಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ಭಾರತದ ವಿದೇಶಾಂಗ ಇಲಾಖೆ ಕಾರ್ಯದರ್ಶಿ ಶಿವಶಂಕರ ಮೆನನ್ ಮೂಲಕ ಭಾರತದಲ್ಲಿರುವ ಪಾಕಿಸ್ತಾನದ ರಾಯಭಾರಿ ಶಾಹಿದ್ ಮಲಿಕ್ ಅವರಿಗೆ ತಲುಪಿಸಲಾಗಿದೆ ಎಂದರು. ಕಳೆದ ವರ್ಷ ನವೆಂಬರ್ ನಲ್ಲಿ ಮುಂಬೈಯಲ್ಲಿ ಉಗ್ರರು ನಡೆಸಿದ ಕೃತ್ಯ ಅತ್ಯಂತ ಹೀನ. ಇಂತಹ ದೇಶದ್ರೋಹಿಗಳ ನಿರ್ನಾಮಕ್ಕೆ ಏಕತೆಯಿಂದ ಹೋರಾಡಲು ಸಹಕರಿಸಿ ಎಂದು ಪಾಕಿಸ್ತಾನಕ್ಕೆ ಮನವಿ ಮಾಡಿಕೊಳ್ಳಲಾಗಿದೆ ಎಂದು ಮುಖರ್ಜಿ ಹೇಳಿದರು. ಹಾಗೂ ಪಾಕಿಸ್ತಾನದಲ್ಲಿ ಸಿಕ್ಕಿಬಿದ್ದಿರುವ ಉಗ್ರರನ್ನು ಕೂಡಲೇ ಹಸ್ತಾಂತರಿಸುವಂತೆ ಅವರು ಆಗ್ರಹಿಸಿದರು.
ಮುಂಬೈ ಭಯೋತ್ಪಾದನೆಯಲ್ಲಿ ಪಾಕಿಸ್ತಾನ ಮೂಲದ ವ್ಯಕ್ತಿಗಳ ಕೈವಾಡವಿರುವುದು ಸ್ಪಷ್ಟವಾಗಿದೆ. ಇದಕ್ಕೆ ಸಂಬಂಧಿಸಿದಂತೆ ನಮ್ಮ ಬಳಿ ಸಾಕಷ್ಟು ಪುರಾವೆಗಳು ಕೂಡ ಇವೆ. ಈ ಮಾಹಿತಿಯನ್ನು ಅಮೆರಿಕ ಸೇರಿದಂತೆ ಜಗತ್ತಿನ ಪ್ರಮುಖ ರಾಷ್ಟ್ರಗಳಿಗೆ ಮನದಟ್ಟು ಮಾಡುವ ಕೆಲಸವನ್ನು ಆರಂಭಿಸಲಾಗಿದೆ ಎಂದು ಹೇಳಿದರು. ಭಯೋತ್ಪಾದನೆ ದಮನಕ್ಕೆ ಇಡೀ ಜಗತ್ತೇ ಒಂದುಗೂಡಬೇಕಿದೆ ಎಂದು ಮುಖರ್ಜಿ ಹೇಳಿದರು.
(ದಟ್ಸ್ ಕನ್ನಡ ವಾರ್ತೆ)
ಶಿವರಾಜ್ ಪಾಟೀಲ್ ರಕ್ತ ಯಾವ ದೇಶದ್ದು?
ಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ
ಯುದ್ಧವೊಂದೇ ಏಕೈಕ ಮಾರ್ಗ:ಬಾಳಾ ಠಾಕ್ರೆ











Click it and Unblock the Notifications