ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾಂಗ್ರೆಸ್ ಸಭೆಗೆ ಹಾಜರಾಗಲ್ಲ, ಸಿದ್ದು

By Staff
|
Google Oneindia Kannada News

ಬೆಂಗಳೂರು, ಜ. 5 : ಕೊನೆಗೂ ಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ನಡೆದ ಕಾಂಗ್ರೆಸ್ ಆತ್ಮಾವಲೋಕನ ಸಭೆಗೆ ಗೈರು ಹಾಜರಾಗುವ ಮೂಲಕ ತಮ್ಮ ದಾರಿ ಬೇರೆ ಎನ್ನುವುದನ್ನು ಸಾಬೀತುಪಡಿಸಿದ್ದಾರೆ. ತಾವು ಚುನಾವಣಾ ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡಿರಲಿಲ್ಲ, ಹಾಗಾಗಿ ಇಂದು ನಡೆಯುವ ಕಾಂಗ್ರೆಸ್ ಆತ್ಮಾವಲೋಕನ ಸಭೆಯಲ್ಲಿ ಭಾಗವಹಿಸುವುದಿಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಇದರೊಂದಿಗೆ ಕಾಂಗ್ರೆಸ್ ಪಕ್ಷದೊಂದಿಗಿನ ಸಿದ್ದು ಸಂಬಂಧ ಮತ್ತಷ್ಟು ಹಳಸಿದಂತಾಯಿತು.

ಡಿಸೆಂಬರ್ 27 ರಂದು ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ದಯನೀಯವಾಗಿ ಸೋಲನುಭವಿಸಿತ್ತು. ಈ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನಲ್ಲಿ ಅತ್ಮಾಲೋಕನ ಸಭೆ ಏರ್ಪಡಿಸಲಾಗಿದೆ. ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಮುಖ ಪಾಲ್ಗೊಂಡಿದ್ದಾರೆ. ಉಪಚುನಾವಣೆಯ ಪ್ರಚಾರ ಕಾರ್ಯದಲ್ಲಿ ಸಿದ್ದು ಹಾಗೂ ಆರ್ ಎಲ್ ಜಾಲಪ್ಪ ಪಾಲ್ಗೊಂಡಿರಲಿಲ್ಲ. ಸಭೆಯಲ್ಲಿ ಈ ಬಗ್ಗೆ ಸಾಕಷ್ಟು ಚರ್ಚೆ ನಡೆಯುವ ಸಾಧ್ಯತೆಗಳಿವೆ. ಸಭೆಗೆ ಹಾಜರಾಗುವಂತೆ ಕೆಪಿಸಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ ಅವರು ಸಿದ್ದರಾಮಯ್ಯ ಮೇಲೆ ಭಾರಿ ಒತ್ತಡ ತಂದಿದ್ದಾರೆ. ಆದರೂ ಕೂಡ ಸಿದ್ದು ಸಭೆಯನ್ನು ತಿರಸ್ಕರಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)
ಸಿದ್ದರಾಮಯ್ಯ ಕುರಿತು ಕುಮಾರಸ್ವಾಮಿ ಲೇವಡಿ
ಜನವರಿ ಅಂತ್ಯಕ್ಕೆ ಸಿದ್ದು ಹೊಸ ಪಕ್ಷ ಶುರು?

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X