ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿಎಂ ಜತೆ ಅಡ್ವಾಣಿ ಭೇಟಿ ಮಾಡಿದ ಸೋಮಣ್ಣ

By Staff
|
Google Oneindia Kannada News

Congress MLA V Somanna meets advani
ಬೆಂಗಳೂರು, ಜ. 6 : ಮುಂದಿನ ದಿನಗಳಲ್ಲಿ ಆಪರೇಷನ್ ಕಮಲ ನಡೆಸುವುದಿಲ್ಲ, ಇನ್ನೇನಿದ್ದರೂ ಅಭಿವೃದ್ಧಿ, ಅಭಿವೃದ್ಧಿ ಹಾಗೂ ಅಭಿವೃದ್ಧಿ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಕಳೆದ ಉಪಚುನಾವಣೆ ಫಲಿತಾಂಶದ ನಂತರ ಹೇಳಿಕೆ ನೀಡಿದ್ದರು. ಆದರೆ ಮಂಗಳವಾರ ನವದೆಹಲಿಯಲ್ಲಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಪಾಲ್ಗೊಳ್ಳಲು ತೆರಳಿದ ಯಡಿಯೂರಪ್ಪ ಜೊತೆಗೆ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ ಹಾಗೂ ಬೆಂಗಳೂರಿನ ಗೋವಿಂದರಾಜ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿ ಸೋಮಣ್ಣ ಕೂಡ ತೆರಳಿ ಬಿಜೆಪಿ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರನ್ನು ಭೇಟಿ ಮಾಡಿರುವುದು ಅನೇಕ ಸಂಶಯಗಳಿಗೆ ಕಾರಣವಾಗಿದೆ.

ಅಪರೇಷನ್ ಕಮಲದಲ್ಲಿ ಸೋಮಣ್ಣ ಬಿಜೆಪಿ ಪಾಲಾಗಲಿದ್ದಾರೆ ಎಂದೆಣಿಸಲಾಗಿತ್ತು. ಈ ಭೇಟಿ ಅದಕ್ಕೆ ಮತ್ತಷ್ಟು ಪುಷ್ಟಿಕರಿಸುತ್ತದೆ. ಮುಂದಿನ ಆರು ತಿಂಗಳೊಳಗೆ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಗಳು ನಡೆಯಲಿವೆ. ಮೇಯರ್ ಹುದ್ದೆ ಮೇಲೆ ಸೋಮಣ್ಣ ಕಣ್ಣಿಟ್ಟಿದ್ದಾರೆ ಎನ್ನಲಾಗಿದೆ. ಇದು ಆಪರೇಷನ್ ಕಮಲದ ಮುಂದುವರಿದ ಭಾಗವೇ ?

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X