ಏಷ್ಯಾದ ಹೀರೊ, ಭ್ರಷ್ಟ ಅಧಿಕಾರಿ ಗೌತಮ್ ಸಾವು
ಪಾಟ್ನಾ, ಜ. 6 : ಇದು ವಿಪರ್ಯಾಸವೂ, ವಿಧಿಯಾಟವೋ ಗೊತ್ತಿಲ್ಲ. ಒಂದು ಕಾಲದಲ್ಲಿ ಟೈಮ್ಸ್ ಪತ್ರಿಕೆಯಂತಹ ಪ್ರತಿಷ್ಠಿತ ಪತ್ರಿಕೆಯಿಂದ ಅತ್ಯಂತ ಕಿರಿಯ ವಯಸ್ಸಿನಲ್ಲೇ ಎಷಿಯನ್ ಹಿರೋ ಪಟ್ಟ ಗಳಿಸಿ, ಅದೇ ವೇಗದಲ್ಲಿ ಬಿಹಾರ ಪರಿಹಾರ ನಿಧಿಯ ಅವ್ಯವಹಾರದಲ್ಲಿ ಸಿಲುಕಿ ಜೈಲು ಸೇರಿದ ಪ್ರತಿಭಾವಂತ ಅಧಿಕಾರಿ ಗೌತಮ್ ಗೋಸ್ವಾಮಿ ಇಂದು ಪಾಟ್ನಾದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕಳೆದ ಕೆಲ ತಿಂಗಳಗಳಿಂದ ಅವರು ಯಕೃತ್ತಿನ ಕ್ಯಾನ್ಸರ್ ನಿಂದ ಬಳಲುತ್ತಿದ್ದರು.
ಬಿಹಾರ ಪರಿಹಾರ ನಿಧಿಯಲ್ಲಿ 18.5 ಕೋಟಿ ರುಪಾಯಿ ಅವ್ಯವಹಾರ ನಡೆಸಿದ ಆರೋಪದಲ್ಲಿ ಗೌತಮ್ ಭಾಗಿಯಾಗಿದ್ದರು. ಕೇಂದ್ರ ಲಾಲು ಪ್ರಸಾದ ಯಾದವ್ ಸಹೋದರ ಸಾದು ಯಾದವ್ ಸೇರಿ 27 ಮಂದಿ ಈ ಹಗರಣದಲ್ಲಿ ಜೈಲು ಸೇರಿದ್ದಾರೆ. 1991 ರ ಬ್ಯಾಚಿನ ಐಎಎಸ್ ಅಧಿಕಾರಿಯಾಗಿದ್ದ ಗೌತಮ್ ಗೋಸ್ವಾಮಿ ಅತ್ಯಂತ ಕಿರಿಯ ವಯಸ್ಸಿನಲ್ಲಿ ತಮ್ಮ ಕಾರ್ಯಕ್ಷಮತೆಯಿಂದ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡರು.
2004ರಲ್ಲಿ ಪ್ರತಿಷ್ಠಿತ ಟೈಮ್ಸ್ ಪತ್ರಿಕೆಯಿಂದ ಏಷಿಯನ್ ವ್ಯಕ್ತಿ ಎಂಬ ಪ್ರಶಸ್ತಿಯನ್ನೂ ಗಳಿಸಿದರು. ದೇಶದ ಯುವಕರಿಗೆ ಮಾದರಿ ವ್ಯಕ್ತಿ ಅನಿಸಿದ್ದರು. ಆದರೆ, ತಿಳಿದೋ, ತಿಳಿಯದೆಯೋ ಗೌತಮ್ ಗೌಸ್ವಾಮಿ ಕೋಟ್ಯಾಂತರ ರುಪಾಯಿಗಳ ಪರಿವಾರ ಹಣದಲ್ಲಿ ಅವ್ಯವಹಾರ ಮಾಡಿದ್ದಾರೆ ಎಂದು ಆರೋಪಿಸಿಲಾಯಿತು. ಗೌತಮ್ ರಾಜಕಾರಣಿಗಳಿಗೆ ಆರೋಪ, ಪ್ರತ್ಯಾರೋಪಕ್ಕೆ ಹರಕೆ ಕುರಿಯಾದರು. ಕೊನೆಯಲ್ಲಿ ಪ್ರಕರಣವನ್ನು ಸಮಗ್ರವಾಗಿ ತನಿಖೆ ನಡೆಸಲಾಯಿತು.
ತನಿಖೆಯಲ್ಲಿ ಗೌತಮ್ ತಪ್ಪಿತಸ್ಥ ಎಂದು ಸಾಬೀತಾಯಿತು. ಪಾಟ್ನಾ ಹೈಕೋರ್ಟ್ ನಿಂದ ಶಿಕ್ಷೆಗೊಳಗಾಗಿ ಜೈಲು ಸೇರಿದರು. ಇದು ಗೌತಮ್ ಅವರನ್ನು ತೀವ್ರ ಘಾಸಿಗೊಳಿಸಿತು. ಅಸಾಮಾನ್ಯ ಅಧಿಕಾರಿಯಾಗಿದ್ದ ಗೌತಮ್ ಒಂದೇ ಸಲ ಪಾತಾಳ ಕಂಡರು. ಅದರಿಂದ ಅವರು ಮೇಲೆಳಲು ಸಾಧ್ಯವಾಗಲಿಲ್ಲ. ಅವಮಾನ ತಾಳಲಾರದೇ ಅವರು ಸರ್ಕಾರಿ ಕೆಲಸಕ್ಕೆ ರಾಜೀನಾಮೆ ನೀಡಿ ಸಹರಾ ಸಮೂಹಕ್ಕೆ ಸೇರಿಕೊಂಡರು. ಅಲ್ಲಿ ಕೂಡ ಅವರು ಬಹಳ ದಿನ ಉಳಿಯಲಿಲ್ಲ. ನವೆಂಬರ್ 10 2006 ರಂದು ಜೈಲಿನಿಂದ ಹೊರಬಂದಿದ್ದರು.
(ದಟ್ಸ್ ಕನ್ನಡ ವಾರ್ತೆ)
-
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
Shame on You: ಸೆರಗ ಸರ್ಸೆ ಡಬಲ್ ಮೀನಿಂಗ್ ಹಾಡಿಗೆ ಕನ್ನಡಿಗರ ಆಕ್ರೋಶ-ಶೋಭಾ ಮಳವಳ್ಳಿ ಬರಹ -
ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆ: ಟೆನ್ಷನ್ ಬಿಡಿ, ರಿಲಾಕ್ಸ್ ಆಗಿರಿ; ಕೊನೆಯ ಕ್ಷಣದ ಸಿದ್ಧತೆಗೆ ಇಲ್ಲಿವೆ ಟಿಪ್ಸ್ -
Bengaluru Rain: ಬೆಂಗಳೂರಿನ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ: ಯುಗಾದಿಗೆ ಮೊದಲ ಮಳೆ; ರಾಜ್ಯಕ್ಕೆ ಶುಭಸೂಚಕ












Click it and Unblock the Notifications