ನಿಲ್ಲದಲಾರಿ ಮುಷ್ಕರ; ಬೆಲೆಗಳು ಗಗನಕ್ಕೆ
ಬೆಂಗಳೂರು, ಜ. 6 : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಖಿಲ ಭಾರತ ಮೋಟಾರ್ ಟ್ರಾನ್ಸ್ ಪೋರ್ಟ್ ಕಾಂಗ್ರೆಸ್ ಕರೆ ನೀಡಿರುವ ದೇಶವ್ಯಾಪಿ ಲಾರಿ ಮುಷ್ಕರ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ದೇಶಾದ್ಯಂತ ಸರಕು ಸಾಗಣಿ ಬಹುತೇಕ ಸ್ಥಗಿತಗೊಂಡಿದೆ. ರಾಜ್ಯದ ಅನೇಕ ಕಡೆಗಳಲ್ಲಿ ಭಾನುವಾರ ಮಧ್ಯಾರಾತ್ರಿಯಿಂದಲೇ ಸರಕು ಸಾಗಣಿ ವಾಹನಗಳು ರಸ್ತೆಗೆ ಇಳಿದಿಲ್ಲ. ಮುಷ್ಕರದಿಂದ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತೊಡಗಿದ್ದಾರೆ.
ಈ ನಡುವೆ ಅಖಿಲ ಭಾರತ ಮೋಟಾರ್ ಟ್ರಾನ್ಸ್ ಪೋರ್ಟ್ ಕಾಂಗ್ರೆಸ್ ಸಭೆ ನಡೆಸಿ ಮುಷ್ಕರವನ್ನು ಇನ್ನಷ್ಟು ತೀವ್ರಗೊಳಿಸಲು ನಿರ್ಧರಿಸಿವೆ. ಕೇಂದ್ರ ಸರ್ಕಾರ ಲಾರಿ ಮಾಲೀಕರ ಸಂಘಟಗಳ ಬೇಡಿಕೆಗೆ ಸ್ಪಂದಿಸಿಲ್ಲ. ಹಲವು ಸಂದರ್ಭದಲ್ಲಿ ತಾವೇ ಮಾಡಿಕೊಂಡ ನಿಯಮಗಳನ್ನು ಉಲ್ಲಂಘಿಸಿದೆ. ಇದರಿಂದ ಲಾರಿ ಮಾಲೀಕರು ತೊಂದರೆ ಅನುಭವಿಸುವಂತಾಗಿದೆ ಎಂದು ಅಖಿಲ ಭಾರತ ಮೋಟಾರ್ ಟ್ರಾನ್ಸ್ ಪೋರ್ಟ್ ಕಾಂಗ್ರೆಸ್ ಉಪಾಧ್ಯಕ್ಷ ಹಾಗೂ ರಾಜ್ಯ ಲಾರಿ ಮಾಲೀಕರು ಮತ್ತು ಏಜೆಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಜಿ ಆರ್ ಷಣ್ಮುಖಪ್ಪ ತಿಳಿಸಿದ್ದಾರೆ.
ಲಾರಿ ಮುಷ್ಕರದಿಂದ ಕೂಲಿ ಕಾರ್ಮಿಕರು ಕಂಗಾಲಾಗಿದ್ದಾರೆ. ವ್ಯಾಪಾರ ವಹಿವಾಟುಗಳಲ್ಲಿ ಭಾರಿ ಏರುಪೇರು ಉಂಟಾಗಿದೆ. ಎಲ್ ಪಿಜಿ. ಡಿಸೇಲ್ ಹಾಗೂ ಪೆಟ್ರೋಲ್ ಕೊರತೆ ಮುಂದುವರಿದಿದೆ. ಹಾಗೂ ಅಗತ್ಯ ವಸ್ತುಗಳ ಬೆಲೆ ಭಾರಿ ಏರಿಕೆ ಸಾಧ್ಯತೆ ಇದೆ.
(ದಟ್ಸ್ ಕನ್ನಡ ವಾರ್ತೆ)
ರಾಷ್ಟ್ರವ್ಯಾಪಿ ಲಾರಿ ಸಂಪು, ಸರಕು ಸಾಗಣೆ ಅಸ್ತವ್ಯಸ್ತ












Click it and Unblock the Notifications