ಮಾಲ್ಡವೀಸಿಗೆ ರಾಧಿಕಾ ಕುಮಾರಣ್ಣ ಪ್ರವಾಸ

ಆಗಿರುವುದಿಷ್ಟು : ಜನವರಿ 5ರಂದು ಸೋಮವಾರ ಅವರಿಬ್ಬರು ಬೆಂಗಳೂರಿನಿಂದ ಏರ್ ಇಂಡಿಯ ವಿಮಾನದಲ್ಲಿ ಮಾಲ್ಡವೀಸ್ ನ ಮಾಲೆ ದ್ವೀಪಕ್ಕೆ ಪ್ರಯಾಣ ಬೆಳೆಸಿದ್ದಾರೆ. ಪ್ರಯಾಣ ಮಾಡಿರುವುದಕ್ಕೆ ಪುರಾವೆ ಒದಗಿಸುವ ಏರ್ ಟಿಕೆಟ್ ಮತ್ತು ಬೋರ್ಡಿಂಗ್ ಪಾಸುಗಳನ್ನು ( 1A ಮತ್ತು 1C) ಯಾರೋ ಆಸಕ್ತರು ಮಂಗಳವಾರ ಮಾಧ್ಯಮ ಕಚೇರಿಗಳಿಗೆ ರವಾನಿಸಿದ್ದಾರೆ.
ಇವರಿಬ್ಬರೇ ದ್ಪೀಪ ಪ್ರವಾಸವನ್ನು ಏಕೆ ಕೈಗೊಂಡರು ಎಂಬ ಬಗ್ಗೆ ಕುಮಾರಸ್ವಾಮಿ ಅವರ ಕುಟುಂಬದಿಂದ ಮಾಹಿತಿಗಳು ದೊರೆತಿಲ್ಲ. ಏರ್ ಇಂಡಿಯಾ ಸಿಬ್ಬಂದಿಗಳ ಹೇಳಿಕೆ ಪ್ರಕಾರ 'ರಜಾ ಕಾಲ ಕಳೆಯುವುದಕ್ಕೆ ಜನ ನಿತ್ಯ ಮಾಲ್ಡವೀಸ್ ಗೆ ಹೋಗುತ್ತಾರೆ, ಅದರಲ್ಲೇನು ವಿಶೇಷವಿಲ್ಲ' ಎಂದಿದ್ದಾರೆ.
ಸೋಮವಾರ ಅವರಿಬ್ಬರೂ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಪ್ರತ್ಯೇಕ ಕಾರುಗಳಲ್ಲಿ ಬಂದಿಳಿದಿದ್ದಾರೆ. ಮೊದಲು ಕುಮಾರಸ್ವಾಮಿ ಚೆಕ್ ಇನ್ ಆದರು, ಆನಂತರ 15 ನಿಮಿಷಗಳಲ್ಲಿ ರಾಧಿಕಾ ಚೆಕ್ ಇನ್ ಆಗಿದ್ದಾರೆ. ಕುಮಾರಸ್ವಾಮಿ ಅವರು ಏರ್ ಇಂಡಿಯಾ ಸಿಬ್ಬಂದಿಗೆ ದೂರವಾಣಿ ಕರೆ ಮಾಡಿ ತಮ್ಮ ಹಾಗೂ ಇನ್ನೊಂದು ಪಿಎನ್ ಆರ್ ಸಂಖ್ಯೆಗಳಿಗೆ ಅಕ್ಕಪಕ್ಕದ ಆಸನ ನೀಡಬೇಕೆಂದು ಕೋರಿಕೊಂಡಿದ್ದಾರೆಂದು ಮೂಲಗಳು ತಿಳಿಸಿವೆ. ಅದರಂತೆ, ಎಚ್ ಡಿಕೆ ಅವರಿಗೆ 1C ಮತ್ತು ರಾಧಿಕಾ ಅವರಿಗೆ 1A ಆಸನಗಳನ್ನು ಕೊಡಲಾಗಿದೆ. ಮಧ್ಯಾನ್ಹ 3.30ಕ್ಕೆ ವಿಮಾನ ಹಾರಿಹೋಗಿದೆ.
ಕುಮಾರಸ್ವಾಮಿ ಮತ್ತು ರಾಧಿಕಾ ಅವರು ಜತೆಜತೆಯಾಗಿ ಓಡಾಡುತ್ತಿರುವುದು ಇದೇ ಮೊದಲ ಬಾರಿಯೇನಲ್ಲ. ಅನೇಕ ಬಾರಿ ಅವರು ಒಂದೇ ದಿವಸ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬೇರೆಬೇರೆ ಫ್ಲೈಟುಗಳಿಂದ ಆಗಮಿಸಿದ ಅನೇಕ ಉದಾಹರಣೆಗಳಿವೆ ಎಂದು ಬಿಐಎಎಲ್ ಸಿಬ್ಬಂದಿ ಹೇಳುತ್ತಾರೆ.
ಈ ಮಧ್ಯೆ, ಈಗ ಕುಮಾರಣ್ಣ ಮತ್ತು ರಾಧಿಕಾ ಎಲ್ಲಿದ್ದಾರೆ ಎಂಬುದು ಖಚಿತವಾಗಿಲ್ಲ. ರಮಣೀಯ ಮಾಲೆ ದ್ಪೀಪದ ಒಂದು ಹೋಟೆಲಿನಲ್ಲಿ ತಂಗಿದ್ದಾರೆಂದು ಹೇಳಲಾಗುತ್ತಿದ್ದರೂ ನಿಖರವಾದ ಸ್ಥಳದ ಬಗ್ಗೆ ಮಾಹಿತಿಗಳು ಲಭ್ಯವಾಗಿಲ್ಲ. ಇತ್ತೀಚೆಗೆ ನಡೆದ ಉಪಚುನಾವಣೆಗಳಿಗೆ ಪ್ರಚಾರ ಪ್ರವಾಸ ಕೈಗೊಂಡು ಬಳಲಿದ್ದ ಕುಮಾರಣ್ಣ ಸ್ವಲ್ಪ ಆರಾಮಾಗಿ ಕಾಲ ಕಳೆಯಲು ಸಿಟಿ ಇಂದ ಆಚೆ ಹೋಗಿದ್ದಾರೆ ಎಂದು ಜೆಡಿ ಎಸ್ಸಿನ ಕೇಂದ್ರ ಕಚೇರಿಯ ಕಾರ್ಯಕರ್ತರೊಬ್ಬರು ದಟ್ಸ್ ಕನ್ನಡಕ್ಕೆ ತಿಳಿಸಿದರು.
ಏನೇ ಆಗಲಿ. ಕುಮಾರ ಸ್ವಾಮಿ ಮತ್ತು ರಾಧಿಕಾ ಅವರ ಸ್ನೇಹ ಅವರರವರ ಖಾಸಗಿ ವಿಚಾರಗಳಾಗಿರುತ್ತವೆ. ಸ್ವತಂತ್ರ ಭಾರತದಲ್ಲಿ ಯಾರು ಎಲ್ಲಿಗೆ ಬೇಕಾದರೂ ಹೋಗುವುದಕ್ಕೆ ಹಕ್ಕಿದೆ. ಆದರೂನೂವೆ, ರಾಜಕೀಯ ಮತ್ತು ಚಲನಚಿತ್ರ ಕ್ಷೇತ್ರದಲ್ಲಿ ತೊಡಗಿಕೊಂಡಿರುವ ಹೆಸರಾಂತ ವ್ಯಕ್ತಿಗಳ ಖಾಸಗಿ ಸಂಬಂಧಗಳು ಮತ್ತು ಚಲನವಲನಗಳು ಹಾಗೂ ಚಟುವಟಿಕೆಗಳ ಮೇಲೆ ಒಂದು ಕಣ್ಣಿಡುವುದು ಜನರ ಜಾಯಮಾನವಾಗಿದೆ.
( ದಟ್ಸ್ ಕನ್ನಡ ವಾರ್ತೆ)
-
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications