ಬಿಐಎಎಲ್ ಗೆ ರೈಲು ಸಂಪರ್ಕ ಯೋಜನೆ ಸ್ಥಗಿತ
ಬೆಂಗಳೂರು, ಜ. 7 : ದುಬಾರಿ ಹಾಗೂ ತಾಂತ್ರಿಕವಾಗಿ ಅನೇಕ ಸಮಸ್ಯೆಗಳು ಎದುರಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಅಂತರಾಷ್ಟ್ರೀಯ ನಿಲ್ದಾಣಕ್ಕೆ(ಬಿಐಎಎಲ್) ಅತಿವೇಗದ ರೈಲು ಸಂಪರ್ಕ ಯೋಜನೆಯನ್ನು ಕೈಬಿಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಪರ್ಯಾಯ ಮಾರ್ಗೋಪಾಯಗಳತ್ತ ಚಿತ್ತ ಹರಿಸಿದೆ.
ಮೂಲ ಸೌಕರ್ಯ ಅಭಿವೃದ್ಧಿ ಇಲಾಖೆ ಹಾಗೂ ಬೆಂಗಳೂರು ಮೂಲಸೌಕರ್ಯ ಅಭಿವೃದ್ಧಿ ಕಾರ್ಯಪಡೆಗಳ (ಅಬೈಡ್) ವತಿಯಿಂದ ಈಗಾಗಲೇ ನೈರುತ್ಯ ರೈಲ್ವೆ ಮತ್ತು ಬೆಂಗಳೂರು ಮೆಟ್ರೋ ರೈಲು ನಿಗಮಗಳಿಗೆ (ಬಿಎಂಆರ್ ಸಿಎಲ್) ಕಡಿಮೆ ವೆಚ್ಚದಲ್ಲಿ ತ್ವರಿತವಾಗಿ ಕಾರ್ಯಗತಗೊಳಿಸಬಹುದಾದ ಯೋಜನೆಗಳ ಬಗ್ಗೆ ಪ್ರಸ್ತಾವನೆ ಸಲ್ಲಿಸುವಂತೆ ಪತ್ರ ಬರೆಯಲಾಗಿದೆ.
ಯಶವಂತಪುರ ಮತ್ತು ಯಲಹಂಕಗಳಿಂದ ಬಿಐಎಎಲ್ ಗೆ ರೈಲು ಸೇವೆ ಒದಗಿಸುವ ನೈರುತ್ಯ ರೈಲ್ವೆಯ ಪ್ರಸ್ತಾವದ ಬಗ್ಗೆ ಮೂಲ ಸೌಕರ್ಯ ಅಭಿವೃದ್ಧಿ ಇಲಾಖೆಯು ಪತ್ರದ ಮೂಲಕ ಬಿಐಎಎಲ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯವರ ಗಮನಕ್ಕೆ ತರಲಾಗಿದೆ. ಲಭ್ಯವಿರುವ ಮೂಲಸೌಕರ್ಯಗಳನ್ನು ಬಳಿಸಿಕೊಂಡು ಕಡಿಮೆ ವೆಚ್ಚದಲ್ಲಿ ಸಂಪರ್ಕ ವ್ಯವಸ್ಥೆ ಕಲ್ಪಿಸಿಬೇಕೆಂಬುದೇ ಗುರಿಯಾಗಿದೆ. ಎಂದು ರಾಜ್ಯ ಸರ್ಕಾರದ ಸಲಹೆಗಾರ ಹಾಗೂ ಅಬೈಡ್ ತಜ್ಞ ಸದಸ್ಯ ಎಂ ಎನ್ ಶ್ರೀಹರಿ ಅಭಿಪ್ರಾಯಪಡುತ್ತಾರೆ.
(ದಟ್ಸ್ ಕನ್ನಡ ವಾರ್ತೆ)











Click it and Unblock the Notifications