ಗುರುವಾರ ರಾಜ್ಯದಲ್ಲಿ ಮೊಹರಂ ರಜೆ
ಬೆಂಗಳೂರು, ಜ. 7 : ನಾಳೆ ಜನವರಿ 8 ಗುರುವಾರ ಮೊಹರಂ. ಕರ್ನಾಟಕ ಸರಕಾರದ ರಜಾ ದಿನ. ಕಚೇರಿ, ಬ್ಯಾಂಕು, ಜೀವವಿಮಾ ಕಚೇರಿ, ಶಾಲೆ ಕಾಲೇಜುಗಳಿಗೆ ಮತ್ತು ಸಾರ್ವಜನಿಕ ಸೇವಾ ಇಲಾಖೆಗಳಿಗೆ ರಜೆ.
ಪ್ರವಾದಿ ಮೊಹಮ್ಮದ್ ಮೊಮ್ಮಗ ಇಮಾನ್ ಹುಸೇನ್ ಹುತಾತ್ಮನಾದ ದಿನವನ್ನು ಶಿಯಾ ಮುಸ್ಲಿಮರು ಮೊಹರಂ ಎಂದು ಆಚರಿಸಿಕೊಳ್ಳುತ್ತಾರೆ. ಕ್ರಿ.ಶ. 680 ರ ಕರಬಾಲ ಯುದ್ದದಲ್ಲಿ ಸಾವನ್ನಪ್ಪಿದ್ದ ಇಮಾನ್ ಹುಸೇನ, ಪ್ರವಾದಿ ಮೊಹಮ್ಮದ್ ಅಳಿಯ ಆಲಿ ಮತ್ತು ಆಲಿ ಸೋದರ ಹಸನ್ ಅವರನ್ನು ಈ ದಿನ ಸ್ಮರಿಸಿಕೊಳ್ಳುತ್ತಾರೆ ಎಂದು ಇತಿಹಾಸದ ಪುಟಗಳಲ್ಲಿ ಹೇಳಲಾಗಿದೆ.
ಮುಸಲ್ಮಾನರಿಗೆ, ಮೊಹರಂನೊಂದಿಗೆ ವರ್ಷ ಆರಂಭವಾಗುತ್ತದೆ. ವರ್ಷದ ಮೊದಲ ತಿಂಗಳು ಎಲ್ಲಾ ಶಿಯಾ ಮುಸ್ಲಿಮರು ಯಾವುದೇ ಸಂತೋಷಾಚರಣೆ ನಡೆಸದೆ ಹುತಾತ್ಮರಿಗೆ ಸಂತಾಪ ಸೂಚಿಸುತ್ತಾರೆ. ಹತ್ತು ದಿವಸ ಕಾಲ ಈ ಈದ್ ಸಾಗುತ್ತದೆ. ಧಾರ್ಮಿಕ ಸಭೆಗಳನ್ನು ನಡೆಸುವುದು, ಮೆರವಣಿಗೆ ಮಾಡುವುದು ಆಚರಣೆಗಳ ಒಂದು ಭಾಗವಾಗಿರುತ್ತದೆ.
ಪ್ರವಾದಿ ಮೊಹಮ್ಮದ್ ಹುತಾತ್ಮನಾದ ನಂತರ ಮುಸಲ್ಮಾನರು "ಕುರಾನ್" ಅನ್ನು ತಮ್ಮ ಶ್ರೇಷ್ಠ ಗ್ರಂಥವೆಂದು ಹಾಗೂ ಪ್ರವಾದಿ ಮೊಹಮ್ಮದ್ ಅವರು ತಮ್ಮ ಸರ್ವಶ್ರೇಷ್ಠ ಗುರುಗಳು ಮತ್ತು ಇವರಿಗೆ ಯಾರೂ ಉತ್ತರಾಧಿಕಾರಿ ಇಲ್ಲವೆಂದು ತೀರ್ಮಾನಿಸಿದರು.
ಭಾರತದಲ್ಲಿ ಅಂದು ಚಂದ್ರನ ದರ್ಶನ ಆದಕೂಡಲೇ, ಎಲ್ಲರೂ ಕಪ್ಪು ಬಟ್ಟೆ ಧರಿಸಿ ಕುರಾನ್ ಪಠಿಸಿ, ಹುತಾತ್ಮನಾದ ಇಮಾನ್ ಹುಸೇನನಿಗೆ ಶ್ರದ್ದಾಂಜಲಿ ಅರ್ಪಿಸುತ್ತಾರೆ. ಆನಂತರ ಬಡವರಿಗೆ ಬಟ್ಟೆ, ದವಸಧಾನ್ಯ ವಿತರಿಸುತ್ತಾರೆ. ಭಾರತದಲ್ಲಿ ಶಿಯಾ ಪಂಗಡದವರು ಲಕ್ನೋ ನಗರದಲ್ಲಿ ಹೆಚ್ಚಾಗಿರುವುದರಿಂದ ಅಲ್ಲಿ ಮೊಹರಂ ಜೋರು.
(ದಟ್ಸ್ ಕನ್ನಡ ವಾರ್ತೆ)
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications