ಕಾಂಗ್ರೆಸ್ ಸೇರಲು ಯುವಕರಿಗೆ ಕೃಷ್ಣನ ಕರೆಯೋಲೆ!
ಬೆಂಗಳೂರು, ಜ.8:ಎಸ್ಸೆಸ್ಸೆಲ್ಸಿ ಮೂಲ ಅಂಕಪಟ್ಟಿ ಇದ್ದು ರಾಜಕೀಯ ಸೇರಬೇಕೆಂಬ ಆಸಕ್ತಿ ಇದೆಯಾ? ಹಾಗಿದ್ದರೆ ತಡಯಾಕೆ? ನೇರ ಕೆಪಿಸಿಸಿ ಕಚೇರಿಗೆ ಹೋಗಿ ಯುವ ಕಾಂಗ್ರೆಸ್ಸಿಗರಾಗಿ ನೋಂದಾಯಿಸಿಕೊಳ್ಳಿ. ಆದರೆ ನಿಮ್ಮ ವಯಸ್ಸು 35 ವರ್ಷಗಳನ್ನು ಮೀರಿರಬಾರದು!
ಹಾಗಂತ ನಾವು ಕರೆ ಕೊಡುತ್ತಿಲ್ಲ. ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ, ಶಾಸಕ ಕೃಷ್ಣ ಬೈರೇಗೌಡ ಅವರು ರಾಜಕೀಯ ಸೇರಲು ತುದಿಗಾಲಲ್ಲಿ ನಿಂತಿರುವ ಬಿಸಿರಕ್ತದ ಯುವಕರಿಗೆ ಕರೆ ನೀಡಿದ್ದಾರೆ. ಯುವಜನಾಂಗವನ್ನು ರಾಜಕೀಯದತ್ತ ಸೆಳೆಯಲು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ಕಾರ್ಯ ಯೋಜನೆ ರೂಪಿಸಿದೆ. ಈ ಕುರಿತು ಎರಡು ದಿನಗಳ ಪ್ರತಿಭಾ ಶೋಧ ಕಾರ್ಯಕ್ರಮವನ್ನು ಕೆಪಿಸಿಸಿ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದೆ. ಯುವ ನೇತಾರ ರಾಹುಲ್ ಗಾಂಧಿಯನ್ನು ಆದರ್ಶವನ್ನಾಗಿಟ್ಟುಕೊಂಡು ಯುವ ರಾಜಕಾರಣಿಗಳನ್ನು ರೂಪಿಸುವುದು ನಮ್ಮ ಉದ್ದೇಶ ಎನ್ನುತ್ತಾರೆ ಸಮಿತಿಯ ಅಧ್ಯಕ್ಷ ಕೃಷ್ಣ ಭೈರೇಗೌಡ.
ರಾಜಕೀಯಕ್ಕೆ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಧುಮುಕಲು ಆಸಕ್ತಿ ಇರುವ 35ರೊಳಗಿನ ಯುವಕರು ಎಸ್ಸೆಸ್ಸೆಲ್ಸಿ ಅಂಕಪಟ್ಟಿಯೊಂದಿಗೆ ಜ.15 ಮತ್ತು 16ರಂದು ಕೆಪಿಸಿಸಿ ಕಚೇರಿಗೆ ಹೋಗಿ ಹೆಸರನು ನೋಂದಾಯಿಸಿಕೊಳ್ಳಬಹುದು. ಆ ಮೂಲಕ ರಾಜಕೀಯಕ್ಕೆ ಪಾದಾರ್ಪಣೆ ಮಾಡಬಹುದು.
ಪ್ರತಿಭಾವಂತರನ್ನು ರಾಜ್ಯ ಯುವ ಕಾಂಗ್ರೆಸ್ ಅಥವಾ ಜಿಲ್ಲಾ ಸಮಿತಿಗಳಲ್ಲಿ ಸೇರಿಸಿಕೊಳ್ಳಲಾಗುವುದು ಎಂದು ಕೃಷ್ಣಬೈರೇಗೌಡ ತಿಳಿಸಿದರು. ಕಾರ್ಯಕ್ರಮಕ್ಕೆ ಅಖಿಲ ಭಾರತ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಮತ್ತಿತರ ಪದಾಧಿಕಾರಿಗಳು ಆಗಮಿಸಲಿದ್ದಾರೆ. ಈಗಾಗಲೇ ಈ ಕಾರ್ಯಕ್ರಮ ಆಂಧ್ರಪ್ರದೇಶ ಮತ್ತು ತಮಿಳುನಾಡಿನಲ್ಲಿ ಯಶಸ್ವಿಯಾಗಿದೆ ಎಂದರು.
(ದಟ್ಸ್ ಕನ್ನಡ ವಾರ್ತೆ)
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications