ಅಗತ್ಯ ಬಿದ್ದರೆ ಲಾರಿ ಮಾಲೀಕರ ವಿರುದ್ಧ ಎಸ್ಮಾ
ಬೆಂಗಳೂರು, ಜ.8: ಲಾರಿ ಮಾಲೀಕರು ಎರಡು ದಿನಗಳಲ್ಲಿ ಮುಷ್ಕರವನ್ನು ಕೈಬಿಡಬೇಕು ಇಲ್ಲದಿದ್ದಲ್ಲಿ ಅಗತ್ಯ ವಸ್ತುಗಳ ಸೇವಾ ಸಂರಕ್ಷಣಾ ಕಾಯ್ದೆ(ಎಸ್ಮಾ)ಯನ್ನು ಜಾರಿಗೊಳಿಸಲಾಗುತ್ತದೆ ಎಂದು ಸಾರಿಗೆ ಸಚಿವ ಆರ್.ಅಶೋಕ್ ಗುರುವಾರ ಎಚ್ಚರಿಕೆ ನೀಡಿದ್ದಾರೆ.
ಮುಷ್ಕರವನ್ನು ಕೈಬಿಡುವಂತೆ ಲಾರಿ ಮಾಲೀಕರ ಮನವೊಲಿಸಲಾಗುತ್ತ್ತಿದೆ. ಒಂದು ವೇಳೆ ಅವರು ಒಪ್ಪ್ಪದಿದ್ದರೆ ಎಸ್ಮಾ ಜಾರಿಗೊಳಿಸಲಾಗುತ್ತದೆ ಎಂದರು. ಪರಿಸ್ಥಿತಿಯನ್ನು ನಿಯಂತ್ರಿಸಲು, ತರಕಾರಿ, ಹಾಲು ಹಾಗೂ ಇತರೆ ಗ್ರಾಹಕರ ಅಗತ್ಯ ವಸ್ತುಗಳನ್ನು ಸರಬರಾಜು ಮಾಡಲು ಸಾರಿಗೆ ಇಲಾಖೆಯು 2200 ಬಸ್ಸುಗಳನ್ನು ಸಿದ್ಧಪಡಿಸಿಕೊಂಡಿದೆ. ಸರಕು ಸರಂಜಾಮುಗಳನ್ನು ಸಾಗಿಸಲು ಬಸ್ಸಿನ ಹಿಂದಿನ ಸೀಟುಗಳನ್ನು ತೆಗೆಯಲಾಗುತ್ತದೆ ಎಂದು ಅಶೋಕ್ ತಿಳಿಸಿದರು.
ಬಿಎಂಟಿಸಿಯ 959, ಕೆಎಸ್ಸಾರ್ಟಿಸಿಯ 550, ವಾಯುವ್ಯ ಕೆಎಸ್ಸಾರ್ಟಿಸಿಯ 250 ಹಾಗೂ ಈಶಾನ್ಯ ಕೆಎಸ್ಸ್ಸಾರ್ಟಿಸಿಯ 200 ಬಸ್ಸುಗಳನ್ನು ಅಗತ್ಯ ಸೇವೆಗಾಗಿ ಬಳಸಿಕೊಳ್ಳಲಾಗುತ್ತದೆ . ಅಗತ್ಯ ಬಿದ್ದರೆ ಹೆಚ್ಚುವರಿ 500 ಬಸ್ಸುಗಳನ್ನು ಹೊಂದಿಸಿಕೊಳ್ಳಲಾಗುತ್ತದೆ. ಪರಿಸ್ಥಿತಿಯನ್ನು ನಿಯಂತ್ರಿಸಲು ವಿವಿಧ ರಾಜ್ಯಗಳ 300 ಲಾರಿಗಳನ್ನು ರಾಜ್ಯ ಸರ್ಕಾರ ಸಿದ್ಧಪಡಿಸಿಕೊಂಡಿದೆ ಎಂದರು.
ಲಾರಿ ಮಾಲೀಕರ ಮುಷ್ಕರದ ಪ್ರತಿನಿತ್ಯ ಅವಲೋಕಿಸಲು ಕಾರ್ಯಪಡೆಯನ್ನು ರಚಿಸಲಾಗಿದೆ. ಸರಕು ಸರಂಜಾಮುಗಳನ್ನು ಸಾಗಿಸಲು ಮುಂದಾಗುವ ಲಾರಿಗಳಿಗೆ ಸರ್ಕಾರ ಭದ್ರತೆ ಕಲ್ಪಿಸಲಿದೆ. ಇದಕ್ಕಾಗಿ ನಿಯಂತ್ರಣ ಕೊಠಡಿಯೊಂದನ್ನು ತೆರೆಯಲಾಗಿದ್ದು ಭದ್ರತೆಗಾಗಿ ಲಾರಿ ಮಾಲೀಕರು ನಿಯಂತ್ರಣ ಕೊಠಡಿಗೆ ಕರೆ ಮಾಡಬಹುದು. ದೂರವಾಣಿ ಸಂಖ್ಯೆ: 22352434
ಎರಡು ದಿನಗಳಲ್ಲಿ ಪೆಟ್ರೋಲ್ ಖಾಲಿ!
ಬುಧವಾರದಿಂದ(ಜ.7) ಇಂಧನ ಕಂಪನಿಗಳು ಮುಷ್ಕರ ಹೂಡಿವೆ. ವೇತನ ಪರಿಷ್ಕರಣೆಯನ್ನು ಜಾರಿಗೊಳಿಸು ಬೇಕು ಎಂಬುದು ಅವರ ಪ್ರಮುಖ ಬೇಡಿಕೆ. ಈ ಕಾರಣ ರಾಜ್ಯಾದಂತ್ಯ ಪೆಟ್ರೋಲ್, ಡೀಸಲ್ ಹಾಗೂ ಅಡುಗೆ ಅನಿಲದ ಅಭಾವ ತಲೆಎತ್ತಿದೆ. ಪರಿಸ್ಥಿತಿ ಹೀಗೆ ಇದ್ದರೆ ಮುಂದಿನ ನಾಲ್ಕು ದಿನಗಳಲ್ಲಿ ರಾಜ್ಯದಲ್ಲಿನ ಇಂಧನ ಮುಗಿಯಲಿದೆ. ನಂತರ ಪರಿಸ್ಥಿತಿ ಮತ್ತಷ್ಟು ಹದಗೆಡುವ ಸಾಧ್ಯತೆಗಳಿವೆ. ಪೊಲೀಸ್ ಮತ್ತು ಸರ್ಕಾರಿ ವಾಹನಗಳಿಗೆ ಇಂಧನವನ್ನು ಮೀಸಲಾಗಿಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಆರ್. ಅಶೋಕ್ ಹೇಳಿದರು.
(ದಟ್ಸ್ ಕನ್ನಡ ವಾರ್ತೆ)
ತೈಲ ಹಾಗೂ ಅಡುಗೆ ಅನಿಲ ಬೆಲೆ ಇಳಿಕೆ?
ಮುಷ್ಕರ : ಸಹಕರಿಸಲು ಶಿವಮೊಗ್ಗ ಡಿಸಿ ಮನವಿ
ನಿಲ್ಲದಲಾರಿ ಮುಷ್ಕರ; ಬೆಲೆಗಳು ಗಗನಕ್ಕೆ
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications