ತಲೆಮರೆಸಿಕೊಂಡ ರಾಮಲಿಂಗಾರಾಜು: ಸೆಬಿ
ಹೈದರಾಬಾದ್, ಜ.8: ಸತ್ಯಂ ಕಂಪ್ಯೂಟರ್ಸ್ ರಾಮಲಿಂಗಾರಾಜು ಭಾರಿ ಅವ್ಯವಹಾರಗಳಲ್ಲಿ ತೊಡಗಿಕೊಂಡಿರುವ ಬಗ್ಗೆ ಸಮಗ್ರ ವಿಚಾರಣೆ ನಡೆಸಬೇಕೆಂದು ಸೆಬಿ ನಿರ್ಣಯಿಸಿತ್ತು. ಈ ಸಂಬಂಧ ಆದಷ್ಟು ಶೀಘ್ರವಾಗಿ ವಿಚಾರಣೆ ನಡೆಸಬೇಕೆಂದು ಸೆಬಿ ಅಧಿಕಾರಿಗಳು ಗುರುವಾರ ಮುಂಜಾನೆಯೇ ಹೈದಾರಾಬಾದ್ ಸೇರಿಕೊಂಡರು. ಆದರೆ ಸತ್ಯಂ ಕಂಪ್ಯೂಟರ್ಸ್ ನ ರಾಮಲಿಂಗಾರಾಜು ನಾಪತ್ತೆ!!!
ರಾಮಲಿಂಗಾರಾಜು ಎಲ್ಲಿದ್ದಾರೆ ಎಂಬ ಬಗ್ಗೆ ನಮಗೆ ಯಾವುದೇ ಮಾಹಿತಿ ಇಲ್ಲ ಎಂದು ಸತ್ಯಂ ಆಡಳಿತ ಮಂಡಳಿ ತಿಳಿಸಿದೆ. ರಾಜು ಬುಧವಾರ(ಜ.7) ಮುಂಜಾನೆಯೇ ಟೆಕ್ಸಾಸ್ ಗೆ ಹೊರಟು ಹೋದರು ಎನ್ನುತ್ತಿದ್ದಾರೆ ಹೈದರಾಬಾದ್ ಪೊಲೀಸರು. ಆದರೆ ರಾಮಲಿಂಗಾರಾಜು ಅವರು ದುಬೈನಲ್ಲಿ ತಲೆಮರೆಸಿಕೊಂಡಿದ್ದಾರೆ ಎನ್ನುತ್ತವೆ ಮತ್ತೊಂದು ಮೂಲಗಳು. ಅವರು ಮೊಬೈಲ್ ಫೋನಿಗೂ ಸಿಗುತ್ತಿಲ್ಲ, ಅವರ ಮೊಬೈಲ್ ನಾಟ್ ರೀಚಬಲ್! ಷೇರುದಾರರು ಅಥವಾ ನಿಯಂತ್ರಣಾಧಿಕಾರಿಗಳು ಒಂದು ವೇಳೆ ದೂರು ಕೊಟ್ಟರೆ ರಾಮಲಿಂಗಾರಾಜು ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಹೈದಾರಾಬಾದ್ ಪೊಲೀಸರು ಭರವಸೆ ನೀಡಿದ್ದಾರೆ.
ಸತ್ಯಂ ಕಂಪ್ಯೂಟರ್ಸ್ ನ ರು.7000 ಕೋಟಿಗಳ ಅವ್ಯವಹಾರ ಬಯಲಾಗುತ್ತಿದ್ದಂತೆ ಕಂಪನಿಯ ಅಧ್ಯಕ್ಷ ರಾಮಲಿಂಗರಾಜು ನಾಪತ್ತೆಯಾಗಿದ್ದಾರೆ.ಅವ್ಯವಹಾರಕ್ಕೆ ಸಂಬಂಧಿಸಿದಂತೆ ಅವರು ಬಂಧನಕ್ಕೆ ಒಳಗಾಗುವ ಮತ್ತು ಏಳು ವರ್ಷ ಜೈಲುಶಿಕ್ಷೆಯಾಗುವ ಸಾಧ್ಯತೆಗಳಿತ್ತು. ತಮ್ಮ ಕುಟುಂಬದ ಸಲುವಾಗಿ ಕಂಪನಿಯ ಹಿತಾಸಕ್ತಿಯನ್ನು ಬಲಿ ತೆಗೆದುಕೊಂಡಿದ್ದಾರೆ ಎಂದು ಆಡಳಿತ ಮಂಡಳಿ ಹಾಗೂ ಷೇರುದಾರರು ಸಹ ರಾಮಲಿಂಗರಾಜು ವಿರುದ್ಧ ತಿರುಗಿ ಬಿದ್ದಿದ್ದರು. ವಿಶ್ವಬ್ಯಾಂಕ್ ಕೂಡ ಸತ್ಯಂ ಕಂಪೆನಿ ಮೇಲೆ 10 ವರ್ಷಗಳ ಆರ್ಥಿಕ ನಿರ್ಬಂಧ ಹೇರಿತ್ತು.
ನ್ಯಾಸ್ ಕ್ಯಾಂ ಹಾಗೂ ನಿಫ್ಟಿಯಿಂದ ಕೂಡ ಸತ್ಯಂ ಕಂಪೆನಿಯನ್ನು ಹೊರಹಾಕಲಾಗಿದ್ದು, ನ್ಯೂಯಾರ್ಕ್ ಹಾಗೂ ಟೆಕ್ಸಾಸ್ ನಲ್ಲಿ ರಾಮಲಿಂಗರಾಜು ವಿರುದ್ಧ ಕೇಸ್ ದಾಖಲಿಸಲಾಗಿದೆ
(ಏಜೆನ್ಸೀಸ್)
ಪೂರಕ ಓದಿಗೆ:
ಸತ್ಯಂ ಖರೀದಿರುವ ಆಲೋಚನೆ ಇಲ್ಲ: ಇನ್ಫಿ
-
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ












Click it and Unblock the Notifications