ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉಡುಪಿಯಲ್ಲಿ ಧರ್ಮದರ್ಶಿಗಳ ಸಭೆ

By Staff
|
Google Oneindia Kannada News

ಉಡುಪಿ, ಜ. 9 : ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳ ವ್ಯಾಪ್ತಿಯಲ್ಲಿ ಬರುವ ಎಲ್ಲಾ ದೇವಾಲಯಗಳ ಧರ್ಮದರ್ಶಿಗಳ ಸಭೆಯನ್ನು ಜನವರಿ 15 ರಂದು ಉಡುಪಿಯಲ್ಲಿ ಕರೆಯಲಾಗಿದೆ.

ಪರ್ಯಾಯ ಪುತ್ತಿಗೆ ಶ್ರೀಗಳ ಅಧ್ಯಕ್ಷತೆಯಲ್ಲಿ ನಡೆಯುವ ಈ ಸಭೆಯಲ್ಲಿ ಸುಮಾರು 350 ದೇವಾಲಯಗಳ ಧರ್ಮದರ್ಶಿಗಳು ಭಾಗವಹಿಸಲಿದ್ದಾರೆ. ಹಾಗೂ ಈ ಸಭೆಯಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರಿಗೆ 60 ವರ್ಷ ತುಂಬಿದ ಪ್ರಯುಕ್ತ ಅವರನ್ನು ಸನ್ಮಾನಿಸಲಾಗುವುದು. ಇದೇ ಸಂದರ್ಭದಲ್ಲಿ ಹೆಗ್ಗಡೆಯವರು ತುಳುನಾಡು ಸಂಸ್ಕ್ರತಿಯ, ಬಿಲ್ಲವ ಸಮುದಾಯದ ನಾಯಕರಾಗಿದ್ದ ಕೋಟಿ ಚನ್ನಯ್ಯ ಅವರನ್ನು ಕುರಿತ ಪುಸ್ತಕವನ್ನು ಹೊರತರಲಿದ್ದಾರೆ. ಅದೇ ರೀತಿ ಈ ನಾಲ್ಕು ಜಿಲ್ಲೆಗಳ ವ್ಯಾಪ್ತಿಯಲ್ಲಿ ಬರುವ ದೇವಾಲಯಗಳ ಆಡಳಿತಾತ್ಮಕ ಕುಂದು ಕೊರತೆಗಳ ಬಗ್ಗೆ ಕೂಡ ಚರ್ಚಿಸಲಾಗುವುದು ಎಂದು ಪುತ್ತಿಗೆ ಶ್ರೀಗಳು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಈ ಸಭೆಯಲ್ಲಿ ಗೃಹ ಸಚಿವ ವಿ.ಎಸ್. ಆಚಾರ್ಯ, ರಾಜ್ಯ ಸಭಾ ಸದಸ್ಯ, ಕೇಂದ್ರ ಸಚಿವ ಆಸ್ಕರ್ ಫರ್ನಾ೦ಡಿಸ್, ಲೋಕಾಯುಕ್ತ ಸಂತೋಷ್ ಹೆಗ್ಡೆ, ಮುಜರಾಯಿ ಆಯುಕ್ತ ರಾಮ ನಾಯಕ್ ಮುಂತಾದವರು ಭಾಗವಹಿಸಲಿದ್ದಾರೆ ಎಂದು ಶ್ರೀಗಳು ತಿಳಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X