ಸತ್ಯಂ ರಾಜುಗಿಂತ ಖೇಣಿ ದೊಡ್ಡ ವಂಚಕ :ಗೌಡ್ರು
ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಗೌಡರು, ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ಸುಮಾರು 30 ಸಾವಿರ ಕೋಟಿ ರುಪಾಯಿಗಳಷ್ಟು ಸಾರ್ವಜನಿಕ ಹಣವನ್ನು ನುಂಗಿ ಹಾಕಿರುವ ಅಶೋಖ್ ಖೇಣಿ ಬಗ್ಗೆ ಯಡಿಯೂರಪ್ಪ ನೇತೃತ್ವದ ಸರ್ಕಾರ ಮೃದುಧೋರಣೆ ತಾಳಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಶೋಕ್ ಖೇಣಿ ಅವರು ನೈಸ್ ಸಂಸ್ಥೆ ಮೇಲಿರುವ ಎಲ್ಲ ಅಡ್ಡಿ ಆತಂಕ ಹಾಗೂ ಸಮಸ್ಯೆಗಳನ್ನು ನಿವಾರಿಸಲು ಯತ್ನಿಸುತ್ತಿದ್ದಾರೆ. ಇದಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಅವರ ನೇರ ಬೆಂಬಲವಿದೆ ಎಂದು ದೇವೇಗೌಡ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ನೈಸ್ ಹಗರಣ ಕುರಿತಂತೆ ಈಗಾಗಲೇ ಕಿರುಹೊತ್ತಿಗೆಯನ್ನು ಹೊರತರಲಾಗಿದೆ. ಈ ಪುಸ್ತಕವನ್ನು ಮುಖ್ಯಮಂತ್ರಿ ಯಡಿಯೂರಪ್ಪ, ಹೈಕೋರ್ಟ್ ನ್ಯಾಯಮೂರ್ತಿಗಳು ಸೇರಿದಂತೆ ಅನೇಕ ಗಣ್ಯರಿಗೆ ಕಳುಹಿಸಲಾಗಿದೆ ಎಂದು ದೇವೇಗೌಡ ಹೇಳಿದರು. ಈ ಕುರಿತು ಸಮಗ್ರ ತನಿಖೆಯ ಅಗತ್ಯವಿದೆ. ಇದನ್ನು ಸರ್ಕಾರದ ಗಮನಕ್ಕೆ ತರಲಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪ ನೈಸ್ ಸಂಬಂಧಿಸಿದಂತೆ ಯಾವ ಕ್ರಮವನ್ನು ಕೈಗೊಳ್ಳದೆ ಖೇಣಿಗೆ ಬೆಂಬಲ ನೀಡುತ್ತಿದ್ದಾರೆ ಎಂದು ದೇವೇಗೌಡ ಆರೋಪಿಸಿದರು.
(ದಟ್ಸ್
ಕನ್ನಡ
ವಾರ್ತೆ)
ರಾಜ್ಯದಲ್ಲಿ
ಸತ್ಯಂ,
ಮೇತಾಸ್
ಯೋಜನೆಗಳು