ಸತ್ಯಂ ಸಿಎಫ್ಒ ಶ್ರೀನಿವಾಸ್ ಆತ್ಮಹತ್ಯೆಗೆ ಯತ್ನ ?
ಹೈದರಾಬಾದ್, ಜ. 9 : ಉಪ್ಪು ತಿಂದವರು ನೀರು ಕುಡಿಯಲೇ ಬೇಕು ಎನ್ನುವ ಗಾದೆಯ ಹಾಗೆ ಸತ್ಯಂ ಕಂಪನಿಯ ಬಹುಕೋಟಿ ಹಗರಣದಲ್ಲಿ ರಾಮಲಿಂಗರಾಜು ಅವರೊಂದಿಗೆ ಅವ್ಯವಹಾರದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಸತ್ಯಂ ಹಣಕಾಸು ವಿಭಾಗದ ಮುಖ್ಯಸ್ಥ ಶ್ರೀನಿವಾಸ ವದ್ಲಾಮಣಿ ಆತ್ಮಹತ್ಯೆ ಯತ್ನಿಸಿರುವ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ ಎಂದು ತಿಳಿದು ಬಂದಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ ಎಂದು ಮೂಲಗಳು ಹೇಳಿವೆ.
ಕಳೆದ ಬುಧವಾರ ಸತ್ಯಂ ಕಂಪನಿಯ ಚೇರಮನ್ ರಾಮಲಿಂಗರಾಜು ಅವ್ಯವಹಾರದ ದಾಖಲೆ ಹಾಗೂ ರಾಜೀನಾಮೆ ಪತ್ರವನ್ನು ಸತ್ಯಂ ಆಡಳಿತ ಮಂಡಳಿ ಹಾಗೂ ಸೆಬಿಗೆ ಕಳುಹಿಸಿದ್ದರು. ಅಂದಿನಿಂದಲೇ ಶ್ರೀನಿವಾಸ್ ವದ್ಲಾಮಣಿ ನಾಪತ್ತೆಯಾಗಿದ್ದರು. ರಾಮಲಿಂಗರಾಜು ಅವ್ಯವಹಾರದಲ್ಲಿ ಸಂಪೂರ್ಣ ಭಾಗಿಯಾಗಿರುವ ಶ್ರೀನಿವಾಸ ಅತ್ಮಹತ್ಯೆ ಯತ್ನಿಸಿದ್ದಾರೆ ಎನ್ನಲಾಗಿದೆ.
ರಾಜು ರಾಜೀನಾಮೆ ನೀಡಿದ ನಂತರ ವದ್ಲಾಮಣಿ ಕೂಡ ತಮ್ಮ ರಾಜೀನಾಮೆ ಪತ್ರವನ್ನು ಸತ್ಯಂ ಆಡಳಿತ ಮಂಡಳಿಗೆ ಕಳುಹಿಸಿದ್ದಾರೆ. ಆದರೆ ಆಡಳಿತ ಮಂಡಳಿ ವದ್ಲಾಮಣಿ ಅವರ ರಾಜೀನಾಮೆ ಪತ್ರವನ್ನು ಸ್ವೀಕರಿಸಿಲ್ಲ. ಶನಿವಾರ ನಡೆಯುವ ಆಡಳಿತ ಮಂಡಳಿಯ ಮಹತ್ವದ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸತ್ಯಂ ಕಂಪನಿ ಹಂಗಾಮಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಮ್ ಮೈನಂಪತಿ ಗುರುವಾರ ಸತ್ಯಂ ಕಂಪನಿಯಲ್ಲಿ ನಡೆಸಿದ ಮಾಧ್ಯಮಗೋಷ್ಠಿಯಲ್ಲಿ ಸ್ಪಷ್ಟಪಡಿಸಿದ್ದರು.
ರಾಜು ಬಂಧನಕ್ಕೆ ಜಾಲ
ಭಾರತೀಯ ಎನ್ರಾನ್ ಹಗರಣ ಎಂದೇ ಕಾರ್ಪೋರೇಟ್ ವಲಯದಲ್ಲಿ ಕುಖ್ಯಾತಿ ಪಡೆದಿರುವ ಸತ್ಯಂ ಹಗರಣದ ಪ್ರಮುಖ ಆರೋಪಿ ರಾಮಲಿಂಗರಾಜು ಅವರ ಬಂಧನಕ್ಕೆ ಹೈದರಾಬಾದ್ ಪೊಲೀಸರು ವ್ಯಾಪಕ ಜಾಲ ಬೀಸಿದ್ದಾರೆ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಅವರ ಬಂಧನಕ್ಕೆ ತೀವ್ರ ಒತ್ತಡ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಸ್ವಯಂ ಪ್ರೇರಣೆಯಿಂದ ರಾಮಲಿಂಗರಾಜು ವಿರುದ್ಧ ಪ್ರಕರಣ ದಾಖಲಿಸಿಕೊಂಡು ಅವರ ಪತ್ತೆಗೆ ಹುಡಕಾಟ ನಡೆಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
ರಾಮಲಿಂಗ ರಾಜು ಬಂಧನಕ್ಕೆ ಹೆಚ್ಚಿದ ಒತ್ತಡ
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications