ರಾಜ್ಯದಲ್ಲಿ ಸತ್ಯಂ, ಮೇತಾಸ್ ಯೋಜನೆಗಳು
ಬೆಂಗಳೂರು, ಜ. 9 : ದೇಶದ ಪ್ರತಿಷ್ಠಿತ ನಾಲ್ಕನೇ ಅತಿ ದೊಡ್ಡ ಸಾಫ್ಟವೇರ್ ಕಂಪನಿ ಎನಿಸಿದ್ದ ಸತ್ಯಂ ನ ಮಾಜಿ ಚೇರಮನ್ ರಾಮಲಿಂಗರಾಜು ಅವರ ಪುತ್ರ ತೇಜರಾಜು ಮಾಲೀಕತ್ವದ ಮೇತಾಸ್ ಇನ್ಫ್ರಾಸ್ಟ್ರಕ್ಚರ್ ಪ್ರೈವೇಟ್ ಲಿಮಿಟೆಡ್ ಎಂಬ ಸಂಸ್ಥೆ ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ನಡೆಯುತ್ತಿರುವ ವಿವಿಧ ಬಹುಕೋಟಿ ರುಪಾಯಿಗಳ ಕಾಮಗಾರಿಗಳಲ್ಲಿ ಪಾಲುದಾರಿಕೆಯನ್ನು ಹೊಂದಿರುವುದು ಬೆಳಕಿಗೆ ಬಂದಿದೆ. ಸತ್ಯಂ ಹಗರಣದಿಂದ ರಾಜ್ಯದಲ್ಲಿ ಮೇತಾಸ್ ಕಂಪನಿ ನಡೆಸುತ್ತಿರುವ ಕಾಮಗಾರಿಗಳು ಕುಂಠಿತಗೊಳ್ಳುವ ಸಾಧ್ಯತೆಗಳಿವೆ ಎನ್ನಲಾಗಿದೆ.
ಬೆಂಗಳೂರು ಮೇಲ್ಸೆತುವೆ ಕಾಮಗಾರಿ : ನಾಗಾರ್ಜುನ ಕನ್ ಸ್ಟ್ರಕ್ಷನ್ ಕಾರ್ಪೋರೇಶನ್, ಸೋಮ ಎಂಟರ್ ಪ್ರೈಸಸ್ ಲಿಮಿಟೆಡ್ ಹಾಗೂ ಮೇತಾಸ್ ಇನ್ಫ್ರಾಸ್ಟ್ರಕ್ಚರ್ ಲಿಮಿಡೆಟ್ ನ ಸಹಭಾಗಿತ್ವದಲ್ಲಿ ಬೆಂಗಳೂರು- ಹೊಸೂರು ರಾಷ್ಟ್ರೀಯ ಹೆದ್ದಾರಿ 7ರಲ್ಲಿ ಸಿಲ್ಕ್ ಬೋರ್ಡ್ ನಿಂದ ಎಲೆಕ್ಟ್ರಾನಿಕ್ ಸಿಟಿ ವರೆಗೆ ಮೇಲ್ಸೇತುವೆ ಕಾಮಗಾರಿ ನಡೆಸಲಾಗುತ್ತಿದೆ. ಇದು 775 ಕೋಟಿ ರುಪಾಯಿಗಳ ಯೋಜನೆಯಾಗಿದೆ.
ವಿದ್ಯುತ್ ಉಪ ಘಟಕ:ಕರ್ನಾಟಕ ರಾಜ್ಯದ ವಿದ್ಯುತ್ ಇಲಾಖೆಯಲ್ಲಿನ ವಿದ್ಯುತ್ ಉಪ ಘಟಕಗಳ ನಿರ್ಮಾಣ ಕಾಮಗಾರಿಯನ್ನೂ ಮೇತೈಸ್ ಕಂಪನಿ ಕೈಗೆತ್ತಿಕೊಂಡಿದ್ದು. ಸುಮಾರು 67 ಕೋಟಿ ರುಪಾಯಿಗಳ ಯೋಜನೆ ಇದಾಗಿದೆ, ಮುಖ್ಯವಾಗಿ ಬೆಳಗಾವಿ, ಬಾಗಲಕೋಟೆ, ಬಿಜಾಪುರ ಹಾಗೂ ಹುಬ್ಬಳ್ಳಿ ಗಳಲ್ಲಿ ಉಪವಿದ್ಯುತ್ ಘಟಕಗಳನ್ನು ನಿರ್ಮಿಸಲು ಯೋಜನೆಯ ಉದ್ದೇಶವಾಗಿದೆ.
ಮೆಟ್ರೋ ರೈಲು: ಬೆಂಗಳೂರು ಮೆಟ್ರೋ ರೈಲಿನ ಯೋಜನೆಯಲ್ಲಿ ಕೂಡ ಮೇತಾಸ್ ಕಂಪನಿ ಪಾಲುದಾರಿಕೆಯನ್ನು ಹೊಂದಿದ್ದು, ಮೆಟ್ರೋ ರೈಲಿನ ಗಡಿ ರೇಖೆ, ರಸ್ತೆ, ಚರಂಡಿ, ಕಂಬಗಳ ನಿರ್ಮಾಣದ ಹೊಣಿಯನ್ನು ಮೇತಾಸ್ ಕಂಪನಿ ಹೊತ್ತು ಕೊಂಡಿದೆ. ಮೆಟ್ರೋ ರೈಲಿಗೆ ಸಂಬಂಧಿಸಿದಂತೆ ಮೇತಾಸ್ ಕಂಪನಿಯೂ ಈಗಾಗಲೇ ಬೈಯಪ್ಪನಹಳ್ಳಿಯಲ್ಲಿ ಮೆಟ್ರೋ ಡಿಪೋವನ್ನು ತೆರೆದು ಕಾಮಗಾರಿ ಆರಂಭಿಸಿದೆ. ಈ ಕಾಮಗಾರಿಯ ಮೊತ್ತ ಸುಮಾರು 45 ಕೋಟಿ ರುಪಾಯಿಗಳು ಆಗಿದೆ.
ಬೆಂಗಳೂರು ಮೈಸೂರು ಹೆದ್ದಾರಿ ನಿರ್ಮಾಣದಲ್ಲೂ ಕೂಡ ಮೇತೈಸ್ ಕಂಪನಿ ತನ್ನ ಪಾಲುದಾರಿಕೆಯನ್ನು ಹೊಂದಿದ್ದು, 240 ಕೋಟಿ ರುಪಾಯಿಗಳ ಕಾಮಗಾರಿಯನ್ನು ಮಾಡಿದ್ದಾರೆ. ಅಲ್ಲದೇ ಐದೂವರೆ ಕಿಮೀ ಉದ್ದದ ಸಿರಾ ಬೈಪಾಸ್ ರಸ್ತೆಯ ಕಾಮಗಾರಿಯನ್ನು ಮೇತಾಸ್ ಕಂಪನಿ ಕಾಮಗಾರಿಯನ್ನು ಮುಗಿಸಿದೆ.
ವಿವಾದಿತ ಬೆಂಗಳೂರು ಮೈಸೂರು ಕಾರಿಡಾರ್ ರಸ್ತೆ. ನಿರ್ಮಾಣದಲ್ಲಿ ಮೇತಾಸ್ ಕಂಪನಿಯ ಕೈಚಳಕವಿದೆ. ಪೆರಿಫೆರಲ್ ರಸ್ತೆ ನಿರ್ಮಾಣದಲ್ಲಿ ಈ ಕಂಪನಿ ಪಾಲುದಾರಿಕೆ ಪಡೆದು ಯೋಜನೆಯನ್ನು ಪೂರ್ಣಗೊಳಿಸಿದೆ. ಶಿವಮೊಗ್ಗ, ಗುಲ್ಬರ್ಗಾದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಗ್ರೀನ್ ವಿಮಾನನಿಲ್ದಾಣ ಕಾಮಗಾರಿಯಲ್ಲಿ 110 ಕೋಟಿ ರುಪಾಯಿಗಳನ್ನು ವಿನಿಯೋಗಿಸಲಾಗಿದೆ.
(ದಟ್ಸ್ ಕನ್ನಡ ವಾರ್ತೆ)
ಸತ್ಯಂ ಸಿಎಫ್ಒ ಶ್ರೀನಿವಾಸ್ ಆತ್ಮಹತ್ಯೆಗೆ ಯತ್ನ?
ಮೇಟಾಸ್ ಇನ್ ಫ್ರಾ ಲಿ.ಅಧ್ಯಕ್ಷ ರಾಜೀನಾಮೆ
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications