ರಾಜ್ಯದಲ್ಲಿ ಸತ್ಯಂ, ಮೇತಾಸ್ ಯೋಜನೆಗಳು
ಬೆಂಗಳೂರು, ಜ. 9 : ದೇಶದ ಪ್ರತಿಷ್ಠಿತ ನಾಲ್ಕನೇ ಅತಿ ದೊಡ್ಡ ಸಾಫ್ಟವೇರ್ ಕಂಪನಿ ಎನಿಸಿದ್ದ ಸತ್ಯಂ ನ ಮಾಜಿ ಚೇರಮನ್ ರಾಮಲಿಂಗರಾಜು ಅವರ ಪುತ್ರ ತೇಜರಾಜು ಮಾಲೀಕತ್ವದ ಮೇತಾಸ್ ಇನ್ಫ್ರಾಸ್ಟ್ರಕ್ಚರ್ ಪ್ರೈವೇಟ್ ಲಿಮಿಟೆಡ್ ಎಂಬ ಸಂಸ್ಥೆ ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ನಡೆಯುತ್ತಿರುವ ವಿವಿಧ ಬಹುಕೋಟಿ ರುಪಾಯಿಗಳ ಕಾಮಗಾರಿಗಳಲ್ಲಿ ಪಾಲುದಾರಿಕೆಯನ್ನು ಹೊಂದಿರುವುದು ಬೆಳಕಿಗೆ ಬಂದಿದೆ. ಸತ್ಯಂ ಹಗರಣದಿಂದ ರಾಜ್ಯದಲ್ಲಿ ಮೇತಾಸ್ ಕಂಪನಿ ನಡೆಸುತ್ತಿರುವ ಕಾಮಗಾರಿಗಳು ಕುಂಠಿತಗೊಳ್ಳುವ ಸಾಧ್ಯತೆಗಳಿವೆ ಎನ್ನಲಾಗಿದೆ.
ಬೆಂಗಳೂರು ಮೇಲ್ಸೆತುವೆ ಕಾಮಗಾರಿ : ನಾಗಾರ್ಜುನ ಕನ್ ಸ್ಟ್ರಕ್ಷನ್ ಕಾರ್ಪೋರೇಶನ್, ಸೋಮ ಎಂಟರ್ ಪ್ರೈಸಸ್ ಲಿಮಿಟೆಡ್ ಹಾಗೂ ಮೇತಾಸ್ ಇನ್ಫ್ರಾಸ್ಟ್ರಕ್ಚರ್ ಲಿಮಿಡೆಟ್ ನ ಸಹಭಾಗಿತ್ವದಲ್ಲಿ ಬೆಂಗಳೂರು- ಹೊಸೂರು ರಾಷ್ಟ್ರೀಯ ಹೆದ್ದಾರಿ 7ರಲ್ಲಿ ಸಿಲ್ಕ್ ಬೋರ್ಡ್ ನಿಂದ ಎಲೆಕ್ಟ್ರಾನಿಕ್ ಸಿಟಿ ವರೆಗೆ ಮೇಲ್ಸೇತುವೆ ಕಾಮಗಾರಿ ನಡೆಸಲಾಗುತ್ತಿದೆ. ಇದು 775 ಕೋಟಿ ರುಪಾಯಿಗಳ ಯೋಜನೆಯಾಗಿದೆ.
ವಿದ್ಯುತ್ ಉಪ ಘಟಕ:ಕರ್ನಾಟಕ ರಾಜ್ಯದ ವಿದ್ಯುತ್ ಇಲಾಖೆಯಲ್ಲಿನ ವಿದ್ಯುತ್ ಉಪ ಘಟಕಗಳ ನಿರ್ಮಾಣ ಕಾಮಗಾರಿಯನ್ನೂ ಮೇತೈಸ್ ಕಂಪನಿ ಕೈಗೆತ್ತಿಕೊಂಡಿದ್ದು. ಸುಮಾರು 67 ಕೋಟಿ ರುಪಾಯಿಗಳ ಯೋಜನೆ ಇದಾಗಿದೆ, ಮುಖ್ಯವಾಗಿ ಬೆಳಗಾವಿ, ಬಾಗಲಕೋಟೆ, ಬಿಜಾಪುರ ಹಾಗೂ ಹುಬ್ಬಳ್ಳಿ ಗಳಲ್ಲಿ ಉಪವಿದ್ಯುತ್ ಘಟಕಗಳನ್ನು ನಿರ್ಮಿಸಲು ಯೋಜನೆಯ ಉದ್ದೇಶವಾಗಿದೆ.
ಮೆಟ್ರೋ ರೈಲು: ಬೆಂಗಳೂರು ಮೆಟ್ರೋ ರೈಲಿನ ಯೋಜನೆಯಲ್ಲಿ ಕೂಡ ಮೇತಾಸ್ ಕಂಪನಿ ಪಾಲುದಾರಿಕೆಯನ್ನು ಹೊಂದಿದ್ದು, ಮೆಟ್ರೋ ರೈಲಿನ ಗಡಿ ರೇಖೆ, ರಸ್ತೆ, ಚರಂಡಿ, ಕಂಬಗಳ ನಿರ್ಮಾಣದ ಹೊಣಿಯನ್ನು ಮೇತಾಸ್ ಕಂಪನಿ ಹೊತ್ತು ಕೊಂಡಿದೆ. ಮೆಟ್ರೋ ರೈಲಿಗೆ ಸಂಬಂಧಿಸಿದಂತೆ ಮೇತಾಸ್ ಕಂಪನಿಯೂ ಈಗಾಗಲೇ ಬೈಯಪ್ಪನಹಳ್ಳಿಯಲ್ಲಿ ಮೆಟ್ರೋ ಡಿಪೋವನ್ನು ತೆರೆದು ಕಾಮಗಾರಿ ಆರಂಭಿಸಿದೆ. ಈ ಕಾಮಗಾರಿಯ ಮೊತ್ತ ಸುಮಾರು 45 ಕೋಟಿ ರುಪಾಯಿಗಳು ಆಗಿದೆ.
ಬೆಂಗಳೂರು ಮೈಸೂರು ಹೆದ್ದಾರಿ ನಿರ್ಮಾಣದಲ್ಲೂ ಕೂಡ ಮೇತೈಸ್ ಕಂಪನಿ ತನ್ನ ಪಾಲುದಾರಿಕೆಯನ್ನು ಹೊಂದಿದ್ದು, 240 ಕೋಟಿ ರುಪಾಯಿಗಳ ಕಾಮಗಾರಿಯನ್ನು ಮಾಡಿದ್ದಾರೆ. ಅಲ್ಲದೇ ಐದೂವರೆ ಕಿಮೀ ಉದ್ದದ ಸಿರಾ ಬೈಪಾಸ್ ರಸ್ತೆಯ ಕಾಮಗಾರಿಯನ್ನು ಮೇತಾಸ್ ಕಂಪನಿ ಕಾಮಗಾರಿಯನ್ನು ಮುಗಿಸಿದೆ.
ವಿವಾದಿತ ಬೆಂಗಳೂರು ಮೈಸೂರು ಕಾರಿಡಾರ್ ರಸ್ತೆ. ನಿರ್ಮಾಣದಲ್ಲಿ ಮೇತಾಸ್ ಕಂಪನಿಯ ಕೈಚಳಕವಿದೆ. ಪೆರಿಫೆರಲ್ ರಸ್ತೆ ನಿರ್ಮಾಣದಲ್ಲಿ ಈ ಕಂಪನಿ ಪಾಲುದಾರಿಕೆ ಪಡೆದು ಯೋಜನೆಯನ್ನು ಪೂರ್ಣಗೊಳಿಸಿದೆ. ಶಿವಮೊಗ್ಗ, ಗುಲ್ಬರ್ಗಾದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಗ್ರೀನ್ ವಿಮಾನನಿಲ್ದಾಣ ಕಾಮಗಾರಿಯಲ್ಲಿ 110 ಕೋಟಿ ರುಪಾಯಿಗಳನ್ನು ವಿನಿಯೋಗಿಸಲಾಗಿದೆ.
(ದಟ್ಸ್ ಕನ್ನಡ ವಾರ್ತೆ)
ಸತ್ಯಂ ಸಿಎಫ್ಒ ಶ್ರೀನಿವಾಸ್ ಆತ್ಮಹತ್ಯೆಗೆ ಯತ್ನ?
ಮೇಟಾಸ್ ಇನ್ ಫ್ರಾ ಲಿ.ಅಧ್ಯಕ್ಷ ರಾಜೀನಾಮೆ
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications