ಶ್ರೀಕಂಠಯ್ಯ, ಶ್ರೀಕಂಠದತ್ತ ರಾಜರು ಬಿಜೆಪಿಗೆ ?

ಬೆಂಗಳೂರು, ಜ. 9 : ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಎಚ್ ಸಿ ಶ್ರೀಕಂಠಯ್ಯ ಭಾರತೀಯ ಜನತಾ ಪಕ್ಷ ಸೇರ್ಪಡೆಯಾಗಲು ಇಚ್ಚಿಸಿದಲ್ಲಿ ಮುಕ್ತ ಮನಸ್ಸಿನಿಂದ ಸ್ವಾಗತಿಸುವುದಾಗಿ ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಹೇಳಿದರು. ಶ್ರೀಕಂಠಯ್ಯ ಅವರು ಬಿಜೆಪಿ ಸೇರಲಿದ್ದಾರೆ ಹಾಗೂ ಈಗಾಗಲೇ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದಗೌಡ ಅವರನ್ನು ಭೇಟಿ ಶ್ರೀಕಂಠಯ್ಯ ಮಾತುಕತೆ ನಡೆಸಿದ್ದಾರೆ ಎನ್ನುವ ಗುಸುಗುಸು ಸುದ್ದಿಗೆ ಅವರು ಈ ರೀತಿ ಪ್ರತಿಕ್ರಿಯೆ ನೀಡಿದರು.

ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಗೆ ಬರುವವರಿಗೆ ಪಕ್ಷದ ಬಾಗಿಲು ಸದಾ ತೆರೆದಿರುತ್ತದೆ. ಪಕ್ಷ ಬಲಪಡಿಸುವ ನಿಟ್ಟಿನಲ್ಲಿ ಅನ್ಯ ಪಕ್ಷಗಳ ನಾಯಕರು ಬಿಜೆಪಿ ಸೇರಲು ಇಚ್ಚಿಸಿದಲ್ಲಿ ಅವರನ್ನು ನಾವು ಬರಮಾಡಿಕೊಳ್ಳುತ್ತೇವೆ ಎಂದರು. ಶ್ರೀಕಂಠಯ್ಯ ಅವರ ಬಗ್ಗೆ ನನಗೆ ಅಪಾರ ಗೌರವವಿದೆ. ಕಾಂಗ್ರೆಸ್ ನ ಹಿರಿಯ ನಾಯಕರಾಗಿರುವ ಅವರು ಬಿಜೆಪಿ ಸೇರಲು ಮನಸ್ಸು ಮಾಡಿರುವುದು ಸಂತೋಷ ಸಂಗತಿ. ಈ ಬಗ್ಗೆ ಕೂಡಲೇ ಅಧ್ಯಕ್ಷ ಸದಾನಂದಗೌಡ ಅವರೊಂದಿಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ಯಡಿಯೂರಪ್ಪ ವಿವರಿಸಿದರು.

ಶ್ರೀಕಂಠಯ್ಯ ಅವರೊಂದಿಗೆ ಮೈಸೂರಿನ ರಾಜವಂಶಸ್ಥ ಶ್ರಿಕಂಠದತ್ತ ಒಡೆಯರ್ ಕೂಡ ಬಿಜೆಪಿ ಸೇರಲು ಬಗ್ಗೆ ಒಲವು ತೋರಿಸಿದ್ದಾರೆ ಎನ್ನಲಾಗಿದೆ. ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ನಲ್ಲಿ ನಡೆಸಿಕೊಳ್ಳುತ್ತಿರುವ ರೀತಿ, ಹಾಗೂ ಇತ್ತೀಚೆಗೆ ನಡೆದ ಉಪಚುನಾವಣೆಯಲ್ಲಿ ತುರುವೇಕೆರೆ ಹಾಗೂ ದೊಡ್ಡಬಳ್ಳಾಪುರದ ಕ್ಷೇತ್ರಕ್ಕೆ ತಾವು ಹೇಳಿದ ವ್ಯಕ್ತಿಗಳಿಗೆ ಕಾಂಗ್ರೆಸ್ ಹೈಕಮಾಂಡ್ ಟಿಕೆಟ್ ನೀಡದೆ ತಮ್ಮನ್ನು ಕಡೆಗಣಿಸಿರುವುದು ಶ್ರೀಕಂಠಯ್ಯ ಅವರ ಅಸಮಾಧಾನಕ್ಕೆ ಕಾರಣವಾಗಿದೆ. 83 ಹರೆಯದ ಶ್ರೀಕಂಠಯ್ಯ ಬಿಜೆಪಿ ಸೇರಲು ಮನಸ್ಸು ಮಾಡಿರುವುದು ಅವರ ಪುತ್ರ ವಿಜಯಕುಮಾರ್ ಅವರಿಗೆ ಇಷ್ಟವಿಲ್ಲ ಎನ್ನಲಾಗಿದೆ.

(ದಟ್ಸ್ ಕನ್ನಡ ವಾರ್ತೆ)
ಉಪಚುನಾವಣೆ: ಗೆದ್ದವರು ಬಿದ್ದವರು: ಮತಗಳಿಕೆ ವಿವರ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+