ಸಿಐಡಿ ಪೊಲೀಸರಿಂದ ಸತ್ಯಂ ರಾಜು ಬಂಧನ
ಹೈದರಾಬಾದ್, ಜ. 10 : ಕಟ್ಟಿದ ಕಂಪನಿಗೇ 7000 ಕೋಟಿ ರು. ಪಂಗನಾಮ ಹಾಕಿದ ಸತ್ಯಂ ಸಂಸ್ಥಾಪಕ ಬಿ. ರಾಮಲಿಂಗ ರಾಜು ಶುಕ್ರವಾರ ರಾತ್ರಿ ಪೊಲೀಸ್ ಮಹಾನಿರ್ದೇಶಕ ಎಸ್.ಎಸ್.ಪಿ ಯಾದವ್ ಅವರ ಮುಂದೆ ಶರಣಾಗತರಾಗಿದ್ದಾರೆ. ರಾಜು ಅವರು ಬಂಧನಕ್ಕೆ ಹೆದರಿ ಭೂಗತರಾಗಿದ್ದಾರೆ, ದೇಶ ತೊರೆದಿದ್ದಾರೆ ಎಂಬಿತ್ಯಾದಿ ಊಹಾಪೋಹಗಳಿಗೆ ಅವರ ಬಂಧನ ತೆರೆ ಎಳೆದಿದೆ.
ರಾಜು ಅವರು ತಮ್ಮ ಸಹೋದರನೊಂದಿಗೆ ಪೊಲೀಸ್ ಮಹಾನಿರ್ದೇಶಕರ ಮುಂದೆ ಶುಕ್ರವಾರ ರಾತ್ರಿ ಹಾಜರಾದರು. ರಾಜುವನ್ನು ಭಾರತೀಯ ದಂಡ ಸಂಹಿತೆಯ ನಿಯಮ 420, 406, 120ಬಿ ಮತ್ತು 471 ಅಡಿಯಲ್ಲಿ ಬಂಧಿಸಲಾಗಿದೆ. ರಾಜು ಸಹೋದರ ರಾಮರಾಜು ಅವರನ್ನೂ ಪೊಲೀಸರು ಬಂಧಿಸಿದ್ದಾರೆ. ಅವರನ್ನು ಸಿಐಡಿ ವಶಕ್ಕೆ ಒಪ್ಪಿಸಲಾಗಿದೆ.
ರಾಮಲಿಂಗ ರಾಜು ಮತ್ತು ಅವರ ಸಹೋದರ ರಾಮರಾಜು ಅವರನ್ನು ಶುಕ್ರವಾರ ಇಡೀ ರಾತ್ರಿ ಸಿಐಡಿ ಪೊಲೀಸರು ವಿಚಾರಣೆಗೆ ಗುರಿಪಡಿಸಿದರು. ಆರಂಭದಲ್ಲಿ ಎದೆ ನೋವು ಬರುತ್ತಿದೆ ಎಂದು ರಾಮಲಿಂಗ ರಾಜು ದೂರು ನೀಡಿದ್ದರು. ವೈದ್ಯರನ್ನು ಕರೆಸಿ ಪರೀಕ್ಶಿಸಿ ಅವರ ಆರೋಗ್ಯ ಸ್ಥಿತಿ ಸಹಜ ಸ್ಥಿತಿಯಲ್ಲಿದೆ ಎಂದು ತಿಳಿದ ಬಳಿಕ ವಿಚಾರಣೆಯನ್ನು ಮುಂದುವರಿಸಿದರು. ಅವರಿಬ್ಬರನ್ನು ಇಂದು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗುತ್ತಿದೆ.
ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಬೆಂಬಲ ಹೊಂದಿದ್ದ ರಾಜು ಮೇಲೆ ಈಗಿನ ಮುಖ್ಯಮಂತ್ರಿ ವೈಎಲ್ ರಾಜಶೇಖರ ರೆಡ್ಡಿ ಕೂಡ ಮೃದುಧೋರಣೆ ತೋರುತ್ತಿದ್ದಾರೆ ಎಂದು ಆರೋಪಿಸಲಾಗಿತ್ತು. ರಾಜುವನ್ನು ಕೂಡಲೆ ಬಂಧಿಸಬೇಕೆಂದೂ ಒತ್ತಡಗಳು ಬರುತ್ತಿದ್ದವು. ಇದರಿಂದ ವಿಚಲಿತರಾದ ರೆಡ್ಡಿ ರಾಜು ಅವರನ್ನು ಕೂಡಲೆ ಬಂಧಿಸಬೇಕೆಂದು ಆದೇಶಿಸಿದ್ದರು.
ಸತ್ಯಂನಲ್ಲಿ ಪ್ರಸ್ತುತ ಇರುವ ನಿರ್ದೇಶಕರ ಮೇಲೂ ನಂಬಿಕೆ ಕಳೆದುಕೊಂಡಿರುವ ಕೇಂದ್ರ ಸರ್ಕಾರ ಕಂಪನಿಯನ್ನು ತನ್ನ ಸುಪರ್ದಿಗೆ ತೆಗೆದುಕೊಂಡಿದೆ. ಶನಿವಾರ ನಡೆಯಬೇಕಿದ್ದ ಆಡಳಿತ ಮಂಡಳಿಯ ಸಭೆಯನ್ನು ರದ್ದು ಮಾಡಲಾಗಿದೆ. ಕೇಂದ್ರ ಶೀಘ್ರ 10 ಜನರನ್ನು ಆಡಳಿತ ಮಂಡಳಿಗೆ ನೇಮಕ ಮಾಡಲಿದೆ. ನೇಮಕ ಮಾಡಿದ ಏಳು ದಿನಗಳಲ್ಲಿ ಹೊಸ ಆಡಳಿತ ಮಂಡಳಿ ಸಭೆ ನಡೆಸಲಿದೆ. ಸೆಬಿ ಮುಖ್ಯಸ್ಥ ಡಿ ದಾಮೋದರನ್ ಅವರು ಆಡಳಿತ ಮಂಡಳಿಯ ನೇತೃತ್ವ ವಹಿಸುವ ಸಾಧ್ಯತೆಯಿದೆ.
(ಏಜೆನ್ಸೀಸ್)
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications