ಸಿಐಡಿ ಪೊಲೀಸರಿಂದ ಸತ್ಯಂ ರಾಜು ಬಂಧನ
ಹೈದರಾಬಾದ್, ಜ. 10 : ಕಟ್ಟಿದ ಕಂಪನಿಗೇ 7000 ಕೋಟಿ ರು. ಪಂಗನಾಮ ಹಾಕಿದ ಸತ್ಯಂ ಸಂಸ್ಥಾಪಕ ಬಿ. ರಾಮಲಿಂಗ ರಾಜು ಶುಕ್ರವಾರ ರಾತ್ರಿ ಪೊಲೀಸ್ ಮಹಾನಿರ್ದೇಶಕ ಎಸ್.ಎಸ್.ಪಿ ಯಾದವ್ ಅವರ ಮುಂದೆ ಶರಣಾಗತರಾಗಿದ್ದಾರೆ. ರಾಜು ಅವರು ಬಂಧನಕ್ಕೆ ಹೆದರಿ ಭೂಗತರಾಗಿದ್ದಾರೆ, ದೇಶ ತೊರೆದಿದ್ದಾರೆ ಎಂಬಿತ್ಯಾದಿ ಊಹಾಪೋಹಗಳಿಗೆ ಅವರ ಬಂಧನ ತೆರೆ ಎಳೆದಿದೆ.
ರಾಜು ಅವರು ತಮ್ಮ ಸಹೋದರನೊಂದಿಗೆ ಪೊಲೀಸ್ ಮಹಾನಿರ್ದೇಶಕರ ಮುಂದೆ ಶುಕ್ರವಾರ ರಾತ್ರಿ ಹಾಜರಾದರು. ರಾಜುವನ್ನು ಭಾರತೀಯ ದಂಡ ಸಂಹಿತೆಯ ನಿಯಮ 420, 406, 120ಬಿ ಮತ್ತು 471 ಅಡಿಯಲ್ಲಿ ಬಂಧಿಸಲಾಗಿದೆ. ರಾಜು ಸಹೋದರ ರಾಮರಾಜು ಅವರನ್ನೂ ಪೊಲೀಸರು ಬಂಧಿಸಿದ್ದಾರೆ. ಅವರನ್ನು ಸಿಐಡಿ ವಶಕ್ಕೆ ಒಪ್ಪಿಸಲಾಗಿದೆ.
ರಾಮಲಿಂಗ ರಾಜು ಮತ್ತು ಅವರ ಸಹೋದರ ರಾಮರಾಜು ಅವರನ್ನು ಶುಕ್ರವಾರ ಇಡೀ ರಾತ್ರಿ ಸಿಐಡಿ ಪೊಲೀಸರು ವಿಚಾರಣೆಗೆ ಗುರಿಪಡಿಸಿದರು. ಆರಂಭದಲ್ಲಿ ಎದೆ ನೋವು ಬರುತ್ತಿದೆ ಎಂದು ರಾಮಲಿಂಗ ರಾಜು ದೂರು ನೀಡಿದ್ದರು. ವೈದ್ಯರನ್ನು ಕರೆಸಿ ಪರೀಕ್ಶಿಸಿ ಅವರ ಆರೋಗ್ಯ ಸ್ಥಿತಿ ಸಹಜ ಸ್ಥಿತಿಯಲ್ಲಿದೆ ಎಂದು ತಿಳಿದ ಬಳಿಕ ವಿಚಾರಣೆಯನ್ನು ಮುಂದುವರಿಸಿದರು. ಅವರಿಬ್ಬರನ್ನು ಇಂದು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗುತ್ತಿದೆ.
ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಬೆಂಬಲ ಹೊಂದಿದ್ದ ರಾಜು ಮೇಲೆ ಈಗಿನ ಮುಖ್ಯಮಂತ್ರಿ ವೈಎಲ್ ರಾಜಶೇಖರ ರೆಡ್ಡಿ ಕೂಡ ಮೃದುಧೋರಣೆ ತೋರುತ್ತಿದ್ದಾರೆ ಎಂದು ಆರೋಪಿಸಲಾಗಿತ್ತು. ರಾಜುವನ್ನು ಕೂಡಲೆ ಬಂಧಿಸಬೇಕೆಂದೂ ಒತ್ತಡಗಳು ಬರುತ್ತಿದ್ದವು. ಇದರಿಂದ ವಿಚಲಿತರಾದ ರೆಡ್ಡಿ ರಾಜು ಅವರನ್ನು ಕೂಡಲೆ ಬಂಧಿಸಬೇಕೆಂದು ಆದೇಶಿಸಿದ್ದರು.
ಸತ್ಯಂನಲ್ಲಿ ಪ್ರಸ್ತುತ ಇರುವ ನಿರ್ದೇಶಕರ ಮೇಲೂ ನಂಬಿಕೆ ಕಳೆದುಕೊಂಡಿರುವ ಕೇಂದ್ರ ಸರ್ಕಾರ ಕಂಪನಿಯನ್ನು ತನ್ನ ಸುಪರ್ದಿಗೆ ತೆಗೆದುಕೊಂಡಿದೆ. ಶನಿವಾರ ನಡೆಯಬೇಕಿದ್ದ ಆಡಳಿತ ಮಂಡಳಿಯ ಸಭೆಯನ್ನು ರದ್ದು ಮಾಡಲಾಗಿದೆ. ಕೇಂದ್ರ ಶೀಘ್ರ 10 ಜನರನ್ನು ಆಡಳಿತ ಮಂಡಳಿಗೆ ನೇಮಕ ಮಾಡಲಿದೆ. ನೇಮಕ ಮಾಡಿದ ಏಳು ದಿನಗಳಲ್ಲಿ ಹೊಸ ಆಡಳಿತ ಮಂಡಳಿ ಸಭೆ ನಡೆಸಲಿದೆ. ಸೆಬಿ ಮುಖ್ಯಸ್ಥ ಡಿ ದಾಮೋದರನ್ ಅವರು ಆಡಳಿತ ಮಂಡಳಿಯ ನೇತೃತ್ವ ವಹಿಸುವ ಸಾಧ್ಯತೆಯಿದೆ.
(ಏಜೆನ್ಸೀಸ್)
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications