ಸತ್ಯಂ ಒಪ್ಪಂದಗಳ ವರದಿಗೆ ಸಿಎಂ ಸೂಚನೆ
ಬೆಂಗಳೂರು, ಜ. 11 : ಸತ್ಯಂ ಕಂಪನಿಯೊಂದಿಗೆ ಈ ಹಿಂದೆ ಮಾಡಿಕೊಂಡಿರುವ ಗುತ್ತಿಗೆ ಒಪ್ಪಂದಗಳ ಒಗ್ಗೆ ಸಮಗ್ರ ಅಧ್ಯಯನ ನಡೆಸಿ ವರದಿ ನೀಡುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು.
ಶನಿವಾರ ಇಲ್ಲಿ ನಡೆದ 52ನೇ ಅಖಿಲ ಭಾರತ ಪೊಲೀಸ್ ಕರ್ತವ್ಯಕೂಟದ ಸಮರೋಪ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಅವರು ಸಮಾರಂಭದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಈ ವಿಷಯ ತಿಳಿಸಿದರು. ಈ ಹಿಂದೆ ಸತ್ಯಂ ಕಂಪನಿಯ ಅಂಗಸಂಸ್ಥೆ ಮೇತಾಸ್ ಸಂಸ್ಥೆಯೊಂದಿಗೆ ಸಾಕಷ್ಟು ಒಪ್ಪಂದ ಮಾಡಿಕೊಳ್ಳಲಾಗಿದೆ. ಈಗ ಸತ್ಯಂ ವಂಚನೆ ಪ್ರಕರಣ ಬೆಳಕಿಗೆ ಬಂದಿರುವ ಹಿನ್ನೆಲೆಯಲ್ಲಿ ಕಂಪನಿಯೊಂದಿಗೆ ಮಾಡಿಕೊಂಡಿರುವ ಗುತ್ತಿಗೆ ಒಪ್ಪಂದಗಳನ್ನು ರದ್ದುಪಡಿಸಲಾಗುತ್ತದೆಯೇ ಎಂಬ ಪ್ರಶ್ನೆಗೆ ಅವರು ಈ ರೀತಿ ಉತ್ತರಿಸಿದರು. ಆ ಕಂಪನಿಯೊಂದಿಗೆ ಮಾಡಿಕೊಂಡಿರುವ ಗುತ್ತಿಗೆ ಒಪ್ಪಂದಗಳ ಬಗ್ಗೆ ಸರ್ಕಾರದ ಮುಖ್ಯಕಾರ್ಯದರ್ಶಿ ಅವರು ಅಧ್ಯಯನ ನಡೆಸಿ ವರದಿ ನೀಡಲಿದ್ದಾರೆ. ಈ ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.
(ದಟ್ಸ್
ಕನ್ನಡ
ವಾರ್ತೆ)
ರಾಜ್ಯದಲ್ಲಿ
ಸತ್ಯಂ,
ಮೇತಾಸ್
ಯೋಜನೆಗಳು