ಉಗ್ರರನ್ನು ಹಸ್ತಾಂತರಿಸುವುದಿಲ್ಲ ; ಪಾಕ್
ಇಸ್ಲಾಮಾಬಾದ್, ಜ. 12 : ಪಾಕಿಸ್ತಾನದಲ್ಲಿ ಸಿಕ್ಕಿಬಿದ್ದಿರುವ ಉಗ್ರರನ್ನು ಯಾವುದೇ ಕಾರಣಕ್ಕೂ ಭಾರತಕ್ಕೆ ಹಸ್ತಾಂತರಿಸುವ ಮಾತೇ ಇಲ್ಲ ಎಂದು ಪಾಕಿಸ್ತಾನದ ಪ್ರಧಾನಮಂತ್ರಿ ಯೂಸೆಫ್ ರಾಜಾ ಗಿಲಾನಿ ಸಾರಾಸಗಟಾಗಿ ಭಾರತದ ಮನವಿಯನ್ನು ತಿರಸ್ಕರಿಸಿದ್ದಾರೆ. ಇಸ್ಲಾಮಾಬಾದ್ ಅಧಿಕೃತವಾಗಿ ನವದೆಹಲಿಯ ಬಹುದಿನದ ಬೇಡಿಕೆಯನ್ನು ಸ್ಪಷ್ಟವಾಗಿ ನಿರಾಕರಿಸಿದೆ. ಅಂತಾರಾಷ್ಟ್ರೀಯ ಮಟ್ಟದಿಂದ ಭಾರತ ಎಷ್ಟೇ ಒತ್ತಡ ತಂದರೂ ಪ್ರಯೋಜನವಾಗದು ಎಂದು ಗಿಲಾನಿ ಖಂಡತುಂಡಾಗಿ ಮಾತನಾಡಿದ್ದಾರೆ.
ಭಾನುವಾರ ರಾತ್ರಿ ಇಸ್ಲಾಮಾಬಾದ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗಿಲಾನಿ, ಭಾರತದ ಒತ್ತಡಕ್ಕೆ ನಾವು ಮಣಿಯುವುದಿಲ್ಲ ಎಂದರು. ಪಾಕಿಸ್ತಾನದಲ್ಲಿ ಸಿಕ್ಕಿಬಿದ್ದಿರುವ ಉಗ್ರರನ್ನು ಹಸ್ತಾಂತರಿಸುವುದಿಲ್ಲ. ಬದಲಾಗಿ ಪಾಕ್ ಕಾನೂನಿನ ಪ್ರಕಾರ ಅವರು ವಿರುದ್ಧ ತನಿಖೆ ನಡೆಸಿ ಶಿಕ್ಷೆ ನೀಡುವುದಾಗಿ ಅವರು ಹೇಳಿದರು. ಉಗ್ರರ ನಮ್ಮಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದ ಗಿಲಾನಿ, ಪಾಕ್ ನೆಲದಲ್ಲಿ ಭಯೋತ್ಪಾದನೆಯ ವಿಷ ಬೀಜ ಬೆಳೆಯಲು ಬಿಡುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಮುಂಬೈ ಘಟನೆಯಲ್ಲಿ ಭಾಗಿಯಾಗಿ ಪಾಕಿಸ್ತಾನದಲ್ಲಿ ಅಡಗಿರುವ ಉಗ್ರರು ಸೇರಿದಂತೆ ಬಂಧಿತರಾಗಿರುವ ಉಗ್ರ ಮುಖಂಡರ ವಿಚಾರಣೆಯನ್ನು ಪಾಕ್ ನೆಲದಲ್ಲಿಯೇ ನಡೆಸಲಾಗುವುದು. ಪಾಕ್ ಕಾನೂನು ಉಳಿದೆಲ್ಲ ದೇಶಗಳ ಕಾನೂನಿಗಿಂತ ಬಲಿಷ್ಠ ಹಾಗೂ ಕಠಿಣವಾಗಿದೆ. ಆದ್ದರಿಂದ ಇಲ್ಲಿ ಸಿಕ್ಕಿಬಿದ್ದಿರುವ ಉಗ್ರರನ್ನು ನಾವೇ ಶಿಕ್ಷಿಸುತ್ತೇವೆ ಎಂದರು.
ಭಾರತದ ಮುಖಂಡರು ಪದೆಪದೇ ಉಗ್ರರನ್ನು ಹಸ್ತಾಂತರಿಸುವ ಬಗ್ಗೆ ಮಾತನಾಡುತ್ತಿರುವ ಬಗ್ಗೆ ತೀವ್ರ ಆಕ್ಷೇಪ ಮತ್ತು ಆಕ್ರೋಶ ವ್ಯಕ್ತಪಡಿಸಿದ ಗಿಲಾನಿ, ಪಾಕ್ ಸರ್ಕಾರ ತಾಳಿರುವ ನಿಲುವಿನಲ್ಲಿ ಯಾವುದೇ ಬದಲಾವಣಿ ಇಲ್ಲ ಎಂದು ಅವರು ಪುನರುಚ್ಚರಿಸಿದರು. ಭಾರತೀಯ ಮುಖಂಡರ ಹೇಳಿಕೆಗಳು ಗಡಿ ಪ್ರದೇಶದಲ್ಲಿನ ಪರಿಸ್ಥಿತಿಯನ್ನು ಬಿಗಡಾಯಿಸುವಂತೆ ಮಾಡಿದೆ ಎಂದು ಅವರು ಆರೋಪಿಸಿದರು.
(ದಟ್ಸ್ ಕನ್ನಡ ವಾರ್ತೆ)
ಕಸಬ್ ನಮ್ಮವನೇ ಎಂದ ಇಮ್ರಾನ್ ಖಾನ್
-
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು












Click it and Unblock the Notifications