ಶಂಕರಲಿಂಗೇಗೌಡರಿಗೆ ಜೀವ ಬೆದರಿಕೆ ಕರೆ
ಮೈಸೂರು, ಜ. 12 : ಆಡಳಿತರೂಢ ಬಿಜೆಪಿ ಪಕ್ಷದ ಮೈಸೂರಿನ ಚಾಮರಾಜ ಕ್ಷೇತ್ರದ ಶಾಸಕ ಹಾಗೂ ಬಿಜೆಪಿ ಹಿರಿಯ ಮುಖಂಡ ಎಚ್ ಎಸ್ ಶಂಕರಲಿಂಗೇಗೌಡ ಅವರಿಗೆ ಕಳೆದ ವಿಧಾನಸಭೆ ನಂತರ ನಿರಂತರವಾಗಿ ಕೊಲೆ ಬೆದರಿಕೆಗಳು ಬರತೊಡಗಿವೆ. ಕಳೆದ ಮೂರು ತಿಂಗಳಿಂದ ಕೊಲೆ ಬೆದರಿಕೆ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕರೊಬ್ಬರು ನಿತ್ಯ ಜಾಗರಣೆ ಮಾಡುತ್ತಿರುವ ಅಪರೂಪ ಪ್ರಸಂಗ ನಡೆದಿದೆ.
ಈ ವಿಷಯವನ್ನು ಸ್ವತಃ ಶಂಕರಲಿಂಗೇಗೌಡರು ಬಹಿರಂಗಪಡಿಸಿದ್ದಾರೆ. ಮೈಸೂರು ಪೊಲೀಸ್ ಆಯುಕ್ತರಿಗೆ ದೂರು ನೀಡಿದರೆ ಕ್ರಮಕೈಗೊಳ್ಳುವಲ್ಲಿ ಮೀನಾಮೇಷ ಎಣಿಸುತ್ತಿದ್ದಾರೆ ಎಂದು ಗೌಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಕೊಲೆ ಬೆದರಿಕೆ ಕಾಟದಿಂದ ಸಾಕಾಗಿ ಹೋಗಿದೆ ಎಂದು ಶಂಕರಲಿಂಗೇಗೌಡ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.
ಜನಪ್ರತಿನಿಧಿಯೊಬ್ಬರಿಗೆ ಜೀವ ಬೆದರಿಕೆ ಕರೆ ಬಂದ ನಂತರ ದೂರು ನೀಡಿದರೂ ಈ ವರೆಗೂ ಮೈಸೂರು ಪೊಲೀಸರು ಯಾವುದೇ ಕ್ರಮಕೈಗೊಂಡಿಲ್ಲ. ನಿರ್ಲಕ್ಷ್ಯದ ಜೊತೆಗೆ ಮೈಸೂರು ಪೊಲೀಸ್ ಆಯುಕ್ತ ಪರಶಿವಮೂರ್ತಿ ಅವರು ಬರೀ ಉಡಾಫೆಯ ಮಾತುಗಳನ್ನಾಡುತ್ತಾರೆ. ಈ ಮೂಲಕ ಮೈಸೂರಿನಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ ಎಂದು ಶಂಕರಲಿಂಗೇಗೌಡ ಆರೋಪಿಸಿದರು.
ಮೂರು ಬಾರಿ ಶಾಸಕನಾಗಿ ಆಯ್ಕೆಯಾಗಿರುವ ನಾನು ಬಿಜೆಪಿ ಪಕ್ಷದ ಹಿರಿಯ ಮುಖಂಡ. ಕಳೆದ ವಿಧಾನಸಭೆ ಚುನಾವಣೆಯ ನಂತರ ಇಂತಹ ಬೆದರಿಕೆ ಕರೆಗಳು ನಿರಂತರವಾಗಿ ಬರತೊಡಗಿವೆ. ಭಾನುವಾರ ರಾತ್ರಿ ಸುಮಾರು 10.15ಕ್ಕೆ ಚೆನ್ನೈ ನಗರದ ಟಿ ನಗರದಿಂದ ಕೊಲೆ ಬೆದರಿಕೆ ಕರೆ ಬಂದಿದೆ. ಹಾಗೂ ಅವಾಚ್ಯವಾಗಿ ನಿಂದಿಸಲಾಗುತ್ತಿದೆ. ಜೀವ ಬೆದರಿಕೆ ಇರುವ ನನಗೆ ಸೂಕ್ತ ರಕ್ಷಣೆ ನೀಡುವಲ್ಲಿ ಮೈಸೂರು ಪೊಲೀಸರು ವಿಫಲರಾಗಿದ್ದಾರೆ ಎಂದು ಶಂಕರಲಿಂಗೇಗೌಡ ಹೇಳಿದರು.
(ದಟ್ಸ್ ಕನ್ನಡ ವಾರ್ತೆ)
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ












Click it and Unblock the Notifications