ಮುರಾದಾಬಾದ್ ನಿಂದ ಪ್ರಿಯಾಂಕಾ ಸ್ಪರ್ಧೆ ?
ನವದೆಹಲಿ, ಜ. 13 : ಎಐಸಿಸಿ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ ಮುಂದಿನ ಪ್ರಧಾನಮಂತ್ರಿ ಅಭ್ಯರ್ಥಿ ಎಂದು ಕಾಂಗ್ರೆಸ್ ಪಕ್ಷದಲ್ಲಿ ಅನೇಕ ಮುಖಂಡರು ಧ್ವನಿ ಎತ್ತಿರುವ ಬೆನ್ನಲ್ಲೇ ಅವರ ಸಹೋದರಿ ಪ್ರಿಯಾಂಕಾ ಗಾಂಧಿ ಲೋಕಸಭೆ ಚುನಾವಣೆಯಲ್ಲಿ ಅಖಾಡಕ್ಕಿಳಿಯಲಿದ್ದಾರೆ ಎನ್ನುವ ಸುದ್ದಿಯೊಂದು ಕಾಂಗ್ರೆಸ್ ವಲಯದಲ್ಲಿ ದಟ್ಟವಾಗಿ ಹರಡಿದೆ.
ಕಾಂಗ್ರೆಸ್ ವಕ್ತಾರೆ ಜಯಂತಿ ನಟರಾಜನ್ ಈ ವಿಷಯವನ್ನು ಸ್ಪಷ್ಟಪಡಿಸಿದ್ದು, ಕಾಂಗ್ರೆಸ್ ಪಕ್ಷದಲ್ಲಿ ಹೆಚ್ಚಿದ ಒತ್ತಡದ ಹಿನ್ನೆಲೆಯಲ್ಲಿ ಪ್ರಿಯಾಂಕಾ ಗಾಂಧಿ ಲೋಕಸಭೆ ಚುನಾವಣೆಯಲ್ಲಿ ಮುರಾದಾಬಾದ್ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ ಇದೆ ಎಂದಿದ್ದಾರೆ. ಪ್ರಿಯಾಂಕಾ ಸ್ಪರ್ಧೆಯಿಂದ ಪಕ್ಷಕ್ಕೆ ಲಾಭ ಆಗಲಿದೆ ಎನ್ನುವ ಅನೇಕ ಮುಖಂಡರ ಮಾತುಗಳನ್ನು ಪರಿಗಣಿಸಿ ಹೈಕಮಾಂಡ್ ಈ ಬಗ್ಗೆ ಗಂಭೀರ ಚಿಂತನೆ ನಡೆಸಿದೆ ಎಂದು ಹೇಳಿದರು.
ಪ್ರಿಯಾಂಕಾ ಯುವಶಕ್ತಿ ಸಂಕೇತದಂತಿದ್ದಾರೆ. ಅಲ್ಲದೇ ಯುವ ಜನತೆ ಹಾಗೂ ಮಹಿಳೆಯರನ್ನು ಆಕರ್ಷಿಸುವ ಎಲ್ಲ ಶಕ್ತಿಯೂ ಇದೆ. ಪ್ರಿಯಾಂಕಾ ಸ್ಪರ್ಧೆಯಿಂದ ಕಾಂಗ್ರೆಸ್ ಪಕ್ಷಕ್ಕೆ ಅಷ್ಟೆ ಅಲ್ಲ, ದೇಶಕ್ಕೂ ಲಾಭ ಆಗಲಿದೆ ಎಂದು ಜಯಂತಿ ನಟರಾಜನ್ ವಿಶ್ವಾಸದಿಂದ ನುಡಿದರು. ಲೋಕಸಭೆ ಚುನಾವಣೆಯಲ್ಲಿ ಪ್ರಿಯಾಂಕಾ ಗೆಲುವು ಸಾಧಿಸುವದರಲ್ಲಿ ಸಂಶಯವಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್ ವದ್ರಾ ಅವರು ಮುರಾದಾಬಾದ್ ಜಿಲ್ಲೆಯವರು. ಅಲ್ಲದೇ ಅವರ ತಾಯಿ ಸೋನಿಯಾಗಾಂಧಿ ರಾಯ್ ಬರೇಲಿ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದರೆ, ರಾಹುಲ್ ಗಾಂಧಿ ಅಮೇಥಿ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ.
(ದಟ್ಸ್
ಕನ್ನಡ
ವಾರ್ತೆ)
ಪ್ರಧಾನ
ಮಂತ್ರಿಪಟ್ಟಕ್ಕೆ
ರಾಹುಲ್
ಗಾಂಧಿ
:
ಪ್ರಣಬ್