ಕಗ್ಗಂಟಾದ ದಂಡಾವತಿ ಯೋಜನೆ ಶಂಕುಸ್ಥಾಪನೆ
ಶಿವಮೊಗ್ಗ, ಜ. 13 : ದಂಡಾವತಿ ಯೋಜನೆ ವಿರೋಧಿಸಿ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೇ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಶಿವಮೊಗ್ಗ ಸರ್ಕಾರಿ ಕಾಲೇಜು ಮೈದಾನದಲ್ಲಿ ಏರ್ಪಡಿಸಲಾಗಿರುವ ಸಮಾರಂಭದಲ್ಲಿ ದಂಡಾವತಿ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸುವ ಕಾರ್ಯಕ್ರಮವಿದ್ದು, ತೀವ್ರ ಕುತೂಹಲ ಕೆರಳಿಸಿದೆ. ಇನ್ನೊಂದಡೆ ದಂಡಾವತಿ ಯೋಜನೆ ವಿರೋಧಿ ಸಮಿತಿಯೂ ಯಾವುದೇ ಕಾರಣಕ್ಕೂ ಶಂಕುಸ್ಥಾಪನೆಗೆ ಅವಕಾಶ ನೀಡುವುದಿಲ್ಲ ಎಂದು ಪಟ್ಟು ಹಿಡಿದಿದೆ.
ದಂಡಾವತಿ ಯೋಜನೆಯಲ್ಲಿ ಒಟ್ಟು ಆರು ಹಳ್ಳಿಗಳು ಮುಳುಗಲಿವೆ. ಈ ಯೋಜನೆಯಿಂದ ನೂರಾರು ಎಕರೆ ಪ್ರದೇಶ ನೀರಾವರಿ ಪ್ರದೇಶವಾಗಲಿದೆ. ಇದರ ಜೊತೆಗೆ ಈ ಯೋಜನೆಯಲ್ಲಿ ಜಮೀನು ಮತ್ತಿತರ ಆಸ್ತಿಪಾಸ್ತಿಗಳನ್ನು ಕಳೆದುಕೊಳ್ಳಲಿರುವ ಜನರಿಗೆ ಸರ್ಕಾರ ಸೂಕ್ತ ಪರಿವಾರ ನೀಡಲಿದೆ ಎಂದು ಹೇಳಿದೆ. ಇಷ್ಟಾದರೂ ದಂಡಾವತಿ ಯೋಜನೆಗೆ ತೀವ್ರ ವಿರೋಧ ಎದುರಾಗಿದೆ. ಸರ್ಕಾರ ಈ ಯೋಜನೆಗೆ ಮುಂದಾದಾಗ ಸಂತ್ರಸ್ತ ರೈತ ಮುರುಗೋಡು ಗ್ರಾಮದ ಶಿವಪ್ಪ ಎಂಬಾತ ಅತ್ಮಹತ್ಯೆ ಮಾಡಿಕೊಂಡಿದ್ದಾನೆ. ಶಿವಪ್ಪ ಮೂರು ಎಕರೆ ಜಮೀನು ಹೊಂದಿದ್ದ ಎನ್ನಲಾಗಿದೆ.
ದಂಡಾವತಿ ಯೋಜನೆ ಒಟ್ಟು 272 ಕೋಟಿ ರುಪಾಯಿ ವೆಚ್ಚದ ಯೋಜನೆಯಾಗಿದೆ. ಇದರಿಂದ ಸಾಕಷ್ಟು ಪ್ರದೇಶ ನೀರು ಕಾಣಲಿದೆ. ಪ್ರತಿ ಯೋಜನೆಗೂ ವಿರೋಧಗಳು ಇರುತ್ತವೆ. ಆದರೆ ಇದರಿಂದ ಮುಂದಿನ ದಿನಗಳಲ್ಲಿ ಲಾಭ ಆಗಲಿದೆ. ಶಂಕುಸ್ಥಾಪನೆ ನಿಲ್ಲುವುದಿಲ್ಲ ಎಂದು ಆಹಾರ ಮತ್ತು ನಾಗರಿಕ ಇಲಾಖೆ ಸಚಿವ ಹರತಾಳು ಹಾಲಪ್ಪ ಸ್ಪಷ್ಟಪಡಿಸಿದ್ದಾರೆ.
ಸರ್ಕಾರದ ಕ್ರಮದಿಂದ ಬೇಸತ್ತು ಅತ್ಮಹತ್ಯೆ ಮಾಡಿಕೊಂಡಿರುವ ಮುರುಗೋಡ ಗ್ರಾಮದ ರೈತ ಶಿವಪ್ಪನ ಕುಟುಂಬಕ್ಕೆ 10 ಲಕ್ಷ ರುಪಾಯಿ, ಹಾಗೂ ಜೀವನ ನಿರ್ವಹಣೆಗೆ ಸರ್ಕಾರಿ ಕೆಲಸ ನೀಡಬೇಕು ಎಂದು ದಂಡಾವತಿ ಯೋಜನೆ ವಿರೋಧಿ ಸಮಿತಿ ಅಧ್ಯಕ್ಷ ವಾಮನಗೌಡ ಸರ್ಕಾರವನ್ನು ಆಗ್ರಹಿಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
ಪೂರಕ ಓದಿಗೆ:
ಮುಳುಗಿದ ಒಂದು ಸಂಸ್ಕೃತಿಯ ನೆನೆದು
ಮುಂದಿನ ಜನ್ಮದಲ್ಲಿ ಯಡಿಯೂರಪ್ಪ ಟೇಲರ್!
-
ಉಜ್ವಲ ಯೋಜನೆ ಬದಲು ಸೌದೆ ಒಲೆ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ












Click it and Unblock the Notifications