ಕಗ್ಗಂಟಾದ ದಂಡಾವತಿ ಯೋಜನೆ ಶಂಕುಸ್ಥಾಪನೆ
ಶಿವಮೊಗ್ಗ, ಜ. 13 : ದಂಡಾವತಿ ಯೋಜನೆ ವಿರೋಧಿಸಿ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೇ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಶಿವಮೊಗ್ಗ ಸರ್ಕಾರಿ ಕಾಲೇಜು ಮೈದಾನದಲ್ಲಿ ಏರ್ಪಡಿಸಲಾಗಿರುವ ಸಮಾರಂಭದಲ್ಲಿ ದಂಡಾವತಿ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸುವ ಕಾರ್ಯಕ್ರಮವಿದ್ದು, ತೀವ್ರ ಕುತೂಹಲ ಕೆರಳಿಸಿದೆ. ಇನ್ನೊಂದಡೆ ದಂಡಾವತಿ ಯೋಜನೆ ವಿರೋಧಿ ಸಮಿತಿಯೂ ಯಾವುದೇ ಕಾರಣಕ್ಕೂ ಶಂಕುಸ್ಥಾಪನೆಗೆ ಅವಕಾಶ ನೀಡುವುದಿಲ್ಲ ಎಂದು ಪಟ್ಟು ಹಿಡಿದಿದೆ.
ದಂಡಾವತಿ ಯೋಜನೆಯಲ್ಲಿ ಒಟ್ಟು ಆರು ಹಳ್ಳಿಗಳು ಮುಳುಗಲಿವೆ. ಈ ಯೋಜನೆಯಿಂದ ನೂರಾರು ಎಕರೆ ಪ್ರದೇಶ ನೀರಾವರಿ ಪ್ರದೇಶವಾಗಲಿದೆ. ಇದರ ಜೊತೆಗೆ ಈ ಯೋಜನೆಯಲ್ಲಿ ಜಮೀನು ಮತ್ತಿತರ ಆಸ್ತಿಪಾಸ್ತಿಗಳನ್ನು ಕಳೆದುಕೊಳ್ಳಲಿರುವ ಜನರಿಗೆ ಸರ್ಕಾರ ಸೂಕ್ತ ಪರಿವಾರ ನೀಡಲಿದೆ ಎಂದು ಹೇಳಿದೆ. ಇಷ್ಟಾದರೂ ದಂಡಾವತಿ ಯೋಜನೆಗೆ ತೀವ್ರ ವಿರೋಧ ಎದುರಾಗಿದೆ. ಸರ್ಕಾರ ಈ ಯೋಜನೆಗೆ ಮುಂದಾದಾಗ ಸಂತ್ರಸ್ತ ರೈತ ಮುರುಗೋಡು ಗ್ರಾಮದ ಶಿವಪ್ಪ ಎಂಬಾತ ಅತ್ಮಹತ್ಯೆ ಮಾಡಿಕೊಂಡಿದ್ದಾನೆ. ಶಿವಪ್ಪ ಮೂರು ಎಕರೆ ಜಮೀನು ಹೊಂದಿದ್ದ ಎನ್ನಲಾಗಿದೆ.
ದಂಡಾವತಿ ಯೋಜನೆ ಒಟ್ಟು 272 ಕೋಟಿ ರುಪಾಯಿ ವೆಚ್ಚದ ಯೋಜನೆಯಾಗಿದೆ. ಇದರಿಂದ ಸಾಕಷ್ಟು ಪ್ರದೇಶ ನೀರು ಕಾಣಲಿದೆ. ಪ್ರತಿ ಯೋಜನೆಗೂ ವಿರೋಧಗಳು ಇರುತ್ತವೆ. ಆದರೆ ಇದರಿಂದ ಮುಂದಿನ ದಿನಗಳಲ್ಲಿ ಲಾಭ ಆಗಲಿದೆ. ಶಂಕುಸ್ಥಾಪನೆ ನಿಲ್ಲುವುದಿಲ್ಲ ಎಂದು ಆಹಾರ ಮತ್ತು ನಾಗರಿಕ ಇಲಾಖೆ ಸಚಿವ ಹರತಾಳು ಹಾಲಪ್ಪ ಸ್ಪಷ್ಟಪಡಿಸಿದ್ದಾರೆ.
ಸರ್ಕಾರದ ಕ್ರಮದಿಂದ ಬೇಸತ್ತು ಅತ್ಮಹತ್ಯೆ ಮಾಡಿಕೊಂಡಿರುವ ಮುರುಗೋಡ ಗ್ರಾಮದ ರೈತ ಶಿವಪ್ಪನ ಕುಟುಂಬಕ್ಕೆ 10 ಲಕ್ಷ ರುಪಾಯಿ, ಹಾಗೂ ಜೀವನ ನಿರ್ವಹಣೆಗೆ ಸರ್ಕಾರಿ ಕೆಲಸ ನೀಡಬೇಕು ಎಂದು ದಂಡಾವತಿ ಯೋಜನೆ ವಿರೋಧಿ ಸಮಿತಿ ಅಧ್ಯಕ್ಷ ವಾಮನಗೌಡ ಸರ್ಕಾರವನ್ನು ಆಗ್ರಹಿಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
ಪೂರಕ ಓದಿಗೆ:
ಮುಳುಗಿದ ಒಂದು ಸಂಸ್ಕೃತಿಯ ನೆನೆದು
ಮುಂದಿನ ಜನ್ಮದಲ್ಲಿ ಯಡಿಯೂರಪ್ಪ ಟೇಲರ್!
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications