ಮೋದಿಯಲ್ಲಿ ಪ್ರಧಾನಿ ಕಂಡ ಅನಿಲ್ ಅಂಬಾನಿ
ನವದೆಹಲಿ, ಜ. 14 : ಎಂಬತ್ತೊಂದರ 'ಚಿರಯುವಕ' ತನ್ನ ಪಕ್ಷದ ಪ್ರಧಾನ ಮಂತ್ರಿ ಅಭ್ಯರ್ಥಿಯೆಂದು ಭಾರತೀಯ ಪಕ್ಷ ನಲಿದಾಡುತ್ತಿದ್ದರೆ, ಭಾರತದ ಮಿಲಿಯನೇರ್ ಗಳು ಬೇರೆಯ ರೀತಿಯಲ್ಲಿ ಚಿಂತಿಸುತ್ತಿದ್ದಾರೆ. ಅನಿಲ್ ಅಂಬಾನಿ ಮತ್ತು ಸುನೀಲ್ ಮಿತ್ತಲ್ ಅಂಥ ಘಟಾನುಘಟಿಗಳು ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ದೇಶ ನಡೆಸಲು ಅತ್ಯಂತ ಶಕ್ತ ವ್ಯಕ್ತಿ ಎಂಬ ಅಭಿಪ್ರಾಯ ವ್ಯಕ್ತಪಡಿಸಿ ಅಚ್ಚರಿ ಮೂಡಿಸಿದ್ದಾರೆ.
ಕೊಲ್ಕತಾದಿಂದ ಟಾಟಾ ಕಂಪನಿಯ ನ್ಯಾನೋ ಕಾರು ಉತ್ಪಾದನಾ ಘಟಕ ಕಾಲುಕಿತ್ತಾಗ ಕರ್ನಾಟಕ ಸೇರಿದಂತೆ ಅನೇಕ ರಾಜ್ಯಗಳ ಮುಖ್ಯಮಂತ್ರಿಗಳ ಮುಕ್ತ ಆಹ್ವಾನವನ್ನು ತಿರಸ್ಕರಿಸಿದ್ದ ರತನ್ ಟಾಟಾ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿಯನ್ನು ಆಯ್ದುಕೊಂಡಿದ್ದರು. ಮೋದಿ ಕಾರ್ಯಕ್ಷಮತೆಯ ಬಗ್ಗೆ ಅರಿವಿದ್ದವರಿಗೆ ಇದು ಅಚ್ಚರಿ ಮೂಡಿಸಿರಲಿಲ್ಲ.
ಈಗ ಅನಿಲ್ ಅಂಬಾನಿ ಮತ್ತು ಸುನೀಲ್ ಭಾರತಿ ಮಿತ್ತಲ್ ಅವರುಗಳು ಮೋದಿಯಲ್ಲಿ ಭಾರತವನ್ನು ನಾಯಕತ್ವನ್ನು ಕಂಡಿದ್ದಾರೆ. ವೈಬ್ರಂಟ್ ಗುಜರಾತ್ ಸಮಿತ್ ನಲ್ಲಿ ಮುಂದಿನ ದಶಕಗಳಲ್ಲಿ ಭಾರತವನ್ನು ಮುನ್ನಡೆಸುವ ಮುಂದಾಲೋಚನೆ ಹೊಂದಿದ್ದಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಒಂದು ರಾಜ್ಯವನ್ನು ಅಷ್ಟೊಂದು ಉತ್ತಮವಾಗಿ ಅಭಿವೃದ್ಧಿ ಪಥದತ್ತ ಕೊಂಡೊಯ್ದಿರುವ ಮೋದಿ ದೇಶವನ್ನು ಚೆನ್ನಾಗಿ ಮುನ್ನಡೆಸಬಲ್ಲರು ಎಂದು ಅನಿಲ್ ಅಂಬಾನಿ ಹೇಳಿದ್ದಾರೆ.
ನಾವು ದೊಡ್ಡದೊಡ್ಡ ಕಂಪನಿಗಳನ್ನು ನಡೆಸುತ್ತಿದ್ದೇವೆ, ಆದರೆ, ಇಡೀ ರಾಜ್ಯವನ್ನು ಇಡೀ ದೇಶವನ್ನು ಶಕ್ತವಾಗಿ ಮುನ್ನಡೆಸುವ ಏಕೈಕ ವ್ಯಕ್ತಿಯೆಂದರೆ ಮೋದಿ ಒಬ್ಬರೇ ಎಂದು ಸುನೀಲ್ ಮಿತ್ತಲ್ ಮೋದಿಯನ್ನು ಹಾಡಿಹೊಗಳಿದ್ದಾರೆ.
(ಏಜೆನ್ಸೀಸ್)
-
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ












Click it and Unblock the Notifications