ಮೋದಿಯಲ್ಲಿ ಪ್ರಧಾನಿ ಕಂಡ ಅನಿಲ್ ಅಂಬಾನಿ
ನವದೆಹಲಿ, ಜ. 14 : ಎಂಬತ್ತೊಂದರ 'ಚಿರಯುವಕ' ತನ್ನ ಪಕ್ಷದ ಪ್ರಧಾನ ಮಂತ್ರಿ ಅಭ್ಯರ್ಥಿಯೆಂದು ಭಾರತೀಯ ಪಕ್ಷ ನಲಿದಾಡುತ್ತಿದ್ದರೆ, ಭಾರತದ ಮಿಲಿಯನೇರ್ ಗಳು ಬೇರೆಯ ರೀತಿಯಲ್ಲಿ ಚಿಂತಿಸುತ್ತಿದ್ದಾರೆ. ಅನಿಲ್ ಅಂಬಾನಿ ಮತ್ತು ಸುನೀಲ್ ಮಿತ್ತಲ್ ಅಂಥ ಘಟಾನುಘಟಿಗಳು ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ದೇಶ ನಡೆಸಲು ಅತ್ಯಂತ ಶಕ್ತ ವ್ಯಕ್ತಿ ಎಂಬ ಅಭಿಪ್ರಾಯ ವ್ಯಕ್ತಪಡಿಸಿ ಅಚ್ಚರಿ ಮೂಡಿಸಿದ್ದಾರೆ.
ಕೊಲ್ಕತಾದಿಂದ ಟಾಟಾ ಕಂಪನಿಯ ನ್ಯಾನೋ ಕಾರು ಉತ್ಪಾದನಾ ಘಟಕ ಕಾಲುಕಿತ್ತಾಗ ಕರ್ನಾಟಕ ಸೇರಿದಂತೆ ಅನೇಕ ರಾಜ್ಯಗಳ ಮುಖ್ಯಮಂತ್ರಿಗಳ ಮುಕ್ತ ಆಹ್ವಾನವನ್ನು ತಿರಸ್ಕರಿಸಿದ್ದ ರತನ್ ಟಾಟಾ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿಯನ್ನು ಆಯ್ದುಕೊಂಡಿದ್ದರು. ಮೋದಿ ಕಾರ್ಯಕ್ಷಮತೆಯ ಬಗ್ಗೆ ಅರಿವಿದ್ದವರಿಗೆ ಇದು ಅಚ್ಚರಿ ಮೂಡಿಸಿರಲಿಲ್ಲ.
ಈಗ ಅನಿಲ್ ಅಂಬಾನಿ ಮತ್ತು ಸುನೀಲ್ ಭಾರತಿ ಮಿತ್ತಲ್ ಅವರುಗಳು ಮೋದಿಯಲ್ಲಿ ಭಾರತವನ್ನು ನಾಯಕತ್ವನ್ನು ಕಂಡಿದ್ದಾರೆ. ವೈಬ್ರಂಟ್ ಗುಜರಾತ್ ಸಮಿತ್ ನಲ್ಲಿ ಮುಂದಿನ ದಶಕಗಳಲ್ಲಿ ಭಾರತವನ್ನು ಮುನ್ನಡೆಸುವ ಮುಂದಾಲೋಚನೆ ಹೊಂದಿದ್ದಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಒಂದು ರಾಜ್ಯವನ್ನು ಅಷ್ಟೊಂದು ಉತ್ತಮವಾಗಿ ಅಭಿವೃದ್ಧಿ ಪಥದತ್ತ ಕೊಂಡೊಯ್ದಿರುವ ಮೋದಿ ದೇಶವನ್ನು ಚೆನ್ನಾಗಿ ಮುನ್ನಡೆಸಬಲ್ಲರು ಎಂದು ಅನಿಲ್ ಅಂಬಾನಿ ಹೇಳಿದ್ದಾರೆ.
ನಾವು ದೊಡ್ಡದೊಡ್ಡ ಕಂಪನಿಗಳನ್ನು ನಡೆಸುತ್ತಿದ್ದೇವೆ, ಆದರೆ, ಇಡೀ ರಾಜ್ಯವನ್ನು ಇಡೀ ದೇಶವನ್ನು ಶಕ್ತವಾಗಿ ಮುನ್ನಡೆಸುವ ಏಕೈಕ ವ್ಯಕ್ತಿಯೆಂದರೆ ಮೋದಿ ಒಬ್ಬರೇ ಎಂದು ಸುನೀಲ್ ಮಿತ್ತಲ್ ಮೋದಿಯನ್ನು ಹಾಡಿಹೊಗಳಿದ್ದಾರೆ.
(ಏಜೆನ್ಸೀಸ್)
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications