ಮೋದಿಯಲ್ಲಿ ಪ್ರಧಾನಿ ಕಂಡ ಅನಿಲ್ ಅಂಬಾನಿ
ನವದೆಹಲಿ, ಜ. 14 : ಎಂಬತ್ತೊಂದರ 'ಚಿರಯುವಕ' ತನ್ನ ಪಕ್ಷದ ಪ್ರಧಾನ ಮಂತ್ರಿ ಅಭ್ಯರ್ಥಿಯೆಂದು ಭಾರತೀಯ ಪಕ್ಷ ನಲಿದಾಡುತ್ತಿದ್ದರೆ, ಭಾರತದ ಮಿಲಿಯನೇರ್ ಗಳು ಬೇರೆಯ ರೀತಿಯಲ್ಲಿ ಚಿಂತಿಸುತ್ತಿದ್ದಾರೆ. ಅನಿಲ್ ಅಂಬಾನಿ ಮತ್ತು ಸುನೀಲ್ ಮಿತ್ತಲ್ ಅಂಥ ಘಟಾನುಘಟಿಗಳು ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ದೇಶ ನಡೆಸಲು ಅತ್ಯಂತ ಶಕ್ತ ವ್ಯಕ್ತಿ ಎಂಬ ಅಭಿಪ್ರಾಯ ವ್ಯಕ್ತಪಡಿಸಿ ಅಚ್ಚರಿ ಮೂಡಿಸಿದ್ದಾರೆ.
ಕೊಲ್ಕತಾದಿಂದ ಟಾಟಾ ಕಂಪನಿಯ ನ್ಯಾನೋ ಕಾರು ಉತ್ಪಾದನಾ ಘಟಕ ಕಾಲುಕಿತ್ತಾಗ ಕರ್ನಾಟಕ ಸೇರಿದಂತೆ ಅನೇಕ ರಾಜ್ಯಗಳ ಮುಖ್ಯಮಂತ್ರಿಗಳ ಮುಕ್ತ ಆಹ್ವಾನವನ್ನು ತಿರಸ್ಕರಿಸಿದ್ದ ರತನ್ ಟಾಟಾ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿಯನ್ನು ಆಯ್ದುಕೊಂಡಿದ್ದರು. ಮೋದಿ ಕಾರ್ಯಕ್ಷಮತೆಯ ಬಗ್ಗೆ ಅರಿವಿದ್ದವರಿಗೆ ಇದು ಅಚ್ಚರಿ ಮೂಡಿಸಿರಲಿಲ್ಲ.
ಈಗ ಅನಿಲ್ ಅಂಬಾನಿ ಮತ್ತು ಸುನೀಲ್ ಭಾರತಿ ಮಿತ್ತಲ್ ಅವರುಗಳು ಮೋದಿಯಲ್ಲಿ ಭಾರತವನ್ನು ನಾಯಕತ್ವನ್ನು ಕಂಡಿದ್ದಾರೆ. ವೈಬ್ರಂಟ್ ಗುಜರಾತ್ ಸಮಿತ್ ನಲ್ಲಿ ಮುಂದಿನ ದಶಕಗಳಲ್ಲಿ ಭಾರತವನ್ನು ಮುನ್ನಡೆಸುವ ಮುಂದಾಲೋಚನೆ ಹೊಂದಿದ್ದಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಒಂದು ರಾಜ್ಯವನ್ನು ಅಷ್ಟೊಂದು ಉತ್ತಮವಾಗಿ ಅಭಿವೃದ್ಧಿ ಪಥದತ್ತ ಕೊಂಡೊಯ್ದಿರುವ ಮೋದಿ ದೇಶವನ್ನು ಚೆನ್ನಾಗಿ ಮುನ್ನಡೆಸಬಲ್ಲರು ಎಂದು ಅನಿಲ್ ಅಂಬಾನಿ ಹೇಳಿದ್ದಾರೆ.
ನಾವು ದೊಡ್ಡದೊಡ್ಡ ಕಂಪನಿಗಳನ್ನು ನಡೆಸುತ್ತಿದ್ದೇವೆ, ಆದರೆ, ಇಡೀ ರಾಜ್ಯವನ್ನು ಇಡೀ ದೇಶವನ್ನು ಶಕ್ತವಾಗಿ ಮುನ್ನಡೆಸುವ ಏಕೈಕ ವ್ಯಕ್ತಿಯೆಂದರೆ ಮೋದಿ ಒಬ್ಬರೇ ಎಂದು ಸುನೀಲ್ ಮಿತ್ತಲ್ ಮೋದಿಯನ್ನು ಹಾಡಿಹೊಗಳಿದ್ದಾರೆ.
(ಏಜೆನ್ಸೀಸ್)
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ












Click it and Unblock the Notifications