ಗವಿಗಂಗಾಧರೇಶ್ವರ ದೇವಸ್ಥಾನದಲ್ಲಿ ಅಪರೂಪದ ಕ್ಷಣ
ಬೆಂಗಳೂರು, ಜ. 14 : ಹೂವು, ಹಣ್ಣು, ತರಕಾರಿ ಸೇರಿದಂತೆ ಎಲ್ಲ ಗೃಹೋಪಯೋಗಿ ವಸ್ತುಗಳ ಅಸಾಧ್ಯ ಬೆಲೆ ಏರಿಕೆಯ ನಡುವೆಯೂ ನಾಡಿನ ಜನರ ಸಂಕ್ರಮಣ ಹಬ್ಬದ ಹುಮ್ಮಸ್ಸು ಎಳ್ಳಷ್ಟೂ ಕುಂದಿಲ್ಲ. ಬೆಲೆ ಏರಿಕೆಯಂಥ ಸಂಗತಿಗಳಿಗೆ ಜನಸಾಮಾನ್ಯರು ಬಾಯಿಮಾತಿಲ್ಲದೆ ಹೊಂದಿಕೊಳ್ಳುವುದರಿಂದ ಎಳ್ಳು ಬೆಲ್ಲದ ಭರಾಟೆ ಭರದಿಂದಲೇ ಸಾಗಿದೆ.
ಇಂದು ಬೆಳಗಿನ ಜಾವದಿಂದ ಮಧ್ಯಾಹ್ನದ ವರೆಗೆ ಸೂರ್ಯದೇವ ಬೆಂಗಳೂರಿನಲ್ಲಿ ಮುಸುಕಿದ ಮೋಡಗಳಿಗೆ ಬೆದರಿ ಕಣ್ಣಾಮುಚ್ಚಾಲೆಯಾಡುವುದಿರಲಿ ಭೂಮಿಯ ಮೇಲೆ ಇಣುಕಿಯೂ ನೋಡಿರಲಿಲ್ಲ. ಆದರೆ, ದಕ್ಷಿಣಾಯಣದಿಂದ ಉತ್ತರಾಯಣಕ್ಕೆ ಚಲಿಸುವ ಘಳಿಗೆ ಹತ್ತಿರವಾಗುತ್ತಿದ್ದಂತೆ ಭಕ್ತಗಣದ ಮೊಗದಲ್ಲಿ ಸಂತಸ ಮೂಡಿಸಿದ.
ಬೆಂಗಳೂರಿನ ಅತಿ ಪುರಾತನ ದೇವಸ್ಥಾನವಾಗಿರುವ ಗವಿಪುರಂನ ಗವಿಗಂಗಾಧರೇಶ್ವರ ದೇವಸ್ಥಾನ ಅಪರೂಪದ ಕ್ಷಣಕ್ಕೆ ಸಾವಿರಾರು ಭಕ್ತಾದಿಗಳು ಸಾಕ್ಷಿಯಾದರು. ಈ ಅಪರೂಪದ ಕ್ಷಣವನ್ನು ಕಣ್ಣಲ್ಲಿ ತುಂಬಿಕೊಂಡು ಧನ್ಯರಾದರು. ಆ ಅಪರೂಪದ ಕ್ಷಣವೇನೆಂದರೆ, ಸೂರ್ಯ ಕಿರಣ ದಕ್ಷಿಣಾಯಣದಿಂದ ಉತ್ತರಾಯಣಕ್ಕೆ ಚಲಿಸುವ ಕ್ಷಣ ನಂದಿಯ ಕೊಂಬಿನ ಮುಖಾಂತರ ಶಿವ ಲಿಂಗದ ಮೇಲೆ ಬೀಳವುದು. ಸಾಯಂಕಾಲ 5.17ರ ಸುಮಾರಿಗೆ ಸೂರ್ಯನ ಕಿರಣ ಶಿವಲಿಂಗದ ಮೇಲೆ ಬಿದ್ದು ಭಕ್ತರನ್ನು ಪುಳಕಿತಗೊಳಿಸಿತು. ವರ್ಷಾನುವರ್ಷ ಈ ವಿಸ್ಮಯಕ್ಕೆ ಭಕ್ತರು ಸಾಕ್ಷಿಯಾಗುತ್ತಿದ್ದಾರೆ.
ಸೂರ್ಯನ ಕಿರಣ ಶಿವಲಿಂಗದ ಮೇಲೆ ಬಿದ್ದ ಮೇಲೆಯೇ ಉತ್ತರಾಯಣ ಪ್ರಾರಂಭವಾಗುತ್ತದೆ ಎಂಬ ಪ್ರತೀತಿಯಿದೆ. ದೇವಸ್ಥಾನದಲ್ಲಿ ಬೆಳಗಿನಿಂದಲೂ ಪೂಜಾ ಕೈಂಕರ್ಯಗಳು ಸಾಂಗವಾಗಿ ನೆರವೇರುತ್ತಿವೆ.
(ದಟ್ಸ್ ಕನ್ನಡ ವಾರ್ತೆ)
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications