ಗವಿಗಂಗಾಧರೇಶ್ವರ ದೇವಸ್ಥಾನದಲ್ಲಿ ಅಪರೂಪದ ಕ್ಷಣ
ಬೆಂಗಳೂರು, ಜ. 14 : ಹೂವು, ಹಣ್ಣು, ತರಕಾರಿ ಸೇರಿದಂತೆ ಎಲ್ಲ ಗೃಹೋಪಯೋಗಿ ವಸ್ತುಗಳ ಅಸಾಧ್ಯ ಬೆಲೆ ಏರಿಕೆಯ ನಡುವೆಯೂ ನಾಡಿನ ಜನರ ಸಂಕ್ರಮಣ ಹಬ್ಬದ ಹುಮ್ಮಸ್ಸು ಎಳ್ಳಷ್ಟೂ ಕುಂದಿಲ್ಲ. ಬೆಲೆ ಏರಿಕೆಯಂಥ ಸಂಗತಿಗಳಿಗೆ ಜನಸಾಮಾನ್ಯರು ಬಾಯಿಮಾತಿಲ್ಲದೆ ಹೊಂದಿಕೊಳ್ಳುವುದರಿಂದ ಎಳ್ಳು ಬೆಲ್ಲದ ಭರಾಟೆ ಭರದಿಂದಲೇ ಸಾಗಿದೆ.
ಇಂದು ಬೆಳಗಿನ ಜಾವದಿಂದ ಮಧ್ಯಾಹ್ನದ ವರೆಗೆ ಸೂರ್ಯದೇವ ಬೆಂಗಳೂರಿನಲ್ಲಿ ಮುಸುಕಿದ ಮೋಡಗಳಿಗೆ ಬೆದರಿ ಕಣ್ಣಾಮುಚ್ಚಾಲೆಯಾಡುವುದಿರಲಿ ಭೂಮಿಯ ಮೇಲೆ ಇಣುಕಿಯೂ ನೋಡಿರಲಿಲ್ಲ. ಆದರೆ, ದಕ್ಷಿಣಾಯಣದಿಂದ ಉತ್ತರಾಯಣಕ್ಕೆ ಚಲಿಸುವ ಘಳಿಗೆ ಹತ್ತಿರವಾಗುತ್ತಿದ್ದಂತೆ ಭಕ್ತಗಣದ ಮೊಗದಲ್ಲಿ ಸಂತಸ ಮೂಡಿಸಿದ.
ಬೆಂಗಳೂರಿನ ಅತಿ ಪುರಾತನ ದೇವಸ್ಥಾನವಾಗಿರುವ ಗವಿಪುರಂನ ಗವಿಗಂಗಾಧರೇಶ್ವರ ದೇವಸ್ಥಾನ ಅಪರೂಪದ ಕ್ಷಣಕ್ಕೆ ಸಾವಿರಾರು ಭಕ್ತಾದಿಗಳು ಸಾಕ್ಷಿಯಾದರು. ಈ ಅಪರೂಪದ ಕ್ಷಣವನ್ನು ಕಣ್ಣಲ್ಲಿ ತುಂಬಿಕೊಂಡು ಧನ್ಯರಾದರು. ಆ ಅಪರೂಪದ ಕ್ಷಣವೇನೆಂದರೆ, ಸೂರ್ಯ ಕಿರಣ ದಕ್ಷಿಣಾಯಣದಿಂದ ಉತ್ತರಾಯಣಕ್ಕೆ ಚಲಿಸುವ ಕ್ಷಣ ನಂದಿಯ ಕೊಂಬಿನ ಮುಖಾಂತರ ಶಿವ ಲಿಂಗದ ಮೇಲೆ ಬೀಳವುದು. ಸಾಯಂಕಾಲ 5.17ರ ಸುಮಾರಿಗೆ ಸೂರ್ಯನ ಕಿರಣ ಶಿವಲಿಂಗದ ಮೇಲೆ ಬಿದ್ದು ಭಕ್ತರನ್ನು ಪುಳಕಿತಗೊಳಿಸಿತು. ವರ್ಷಾನುವರ್ಷ ಈ ವಿಸ್ಮಯಕ್ಕೆ ಭಕ್ತರು ಸಾಕ್ಷಿಯಾಗುತ್ತಿದ್ದಾರೆ.
ಸೂರ್ಯನ ಕಿರಣ ಶಿವಲಿಂಗದ ಮೇಲೆ ಬಿದ್ದ ಮೇಲೆಯೇ ಉತ್ತರಾಯಣ ಪ್ರಾರಂಭವಾಗುತ್ತದೆ ಎಂಬ ಪ್ರತೀತಿಯಿದೆ. ದೇವಸ್ಥಾನದಲ್ಲಿ ಬೆಳಗಿನಿಂದಲೂ ಪೂಜಾ ಕೈಂಕರ್ಯಗಳು ಸಾಂಗವಾಗಿ ನೆರವೇರುತ್ತಿವೆ.
(ದಟ್ಸ್ ಕನ್ನಡ ವಾರ್ತೆ)
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications