ಕರವೇಯಿಂದ ವಿಶ್ವ ಕನ್ನಡಿಗರ ಸಮಾವೇಶ
ಬೆಂಗಳೂರು, ಜ. 15 : ಕರ್ನಾಟಕ ರಕ್ಷಣಾ ವೇದಿಕೆ ಜ. 17 ಮತ್ತು 18 ರಂದು ಅರಮನೆ ಮೈದಾನದಲ್ಲಿ ವಿಶ್ವ ಕನ್ನಡಿಗರ ಸಮಾವೇಶವನ್ನು ಹಮ್ಮಿಕೊಂಡಿದೆ. ನಾಡು, ನುಡಿ, ಜಲ ಸೇರಿದಂತೆ ಕರ್ನಾಟಕ ಹಾಗೂ ಕನ್ನಡಿಗರನ್ನು ಕಾಡುತ್ತಿರುವ ಜ್ವಲಂತ ಸಮಸ್ಯೆಗಳತ್ತ ಬೆಳಕು ಚೆಲ್ಲುವುದು ಸಮಾವೇಶದ ಉದ್ದೇಶವಾಗಿದೆ.
ಮಠಾಧಿಪತಿಗಳು, ರಾಜಕಾರಣಿಗಳು, ಕಲಾವಿದರು ಸೇರಿದಂತೆ ನಾಡಿನ ಎಲ್ಲ ಭಾಗಗಳಿಂದ ಕರವೇ ಕಾರ್ಯಕರ್ತರು ಈ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಜತೆಗೆ ಹಲವು ಕನ್ನಡಪರ, ರೈತ ಮತ್ತು ದಲಿತ ಸಂಘಟನೆಗಳ ಕಾರ್ಯಕರ್ತರೂ ಕೈಜೋಡಿಸಲಿದ್ದಾರೆ. ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲದೆ, ನಾನಾ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಗಣ್ಯರಿಗೆ ಸನ್ಮಾನ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.
ದೆಹಲಿ, ಚೆನ್ನೈ, ಗೋವಾ, ದುಬೈ, ಸಿಂಗಾಪುರ, ಕೆನಡಾ, ಆಸ್ಟ್ರೇಲಿಯಾ, ನೆದರ್ ಲ್ಯಾಂಡ್, ಹಾಲೆಂಡ್ ಮತ್ತಿತರ ದೇಶಗಳ ಕನ್ನಡ ಸಂಘಟನೆಗಳ ಮುಖ್ಯಸ್ಥರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಸಮಾವೇಶದಲ್ಲಿ 42 ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗುವುದು. ಅಂತಾರಾಜ್ಯ ವಲಸೆ ನಿಯಂತ್ರಣ, ಆಡಳಿತದಲ್ಲಿ ಕನ್ನಡ ಕಡ್ಡಾಯ, ನೆರೆ ರಾಜ್ಯ ನದಿ ನೀರು ಹಂಚಿಕೆ ತಗಾದೆ ಮತ್ತು ಗಡಿ ವಿವಾದಗಳು ಈ ನಿರ್ಣಯಗಳಲ್ಲಿವೆ. ಈ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮೇಲೆ ಒತ್ತಡ ಹೇರುವುದು. ಹಾಗೂ ಮುಂದಿನ ಸಮಾವೇಶಕ್ಕೆ ಮುನ್ನ ಈ ಎಲ್ಲ ನಿರ್ಣಯಗಳನ್ನು ಅನುಷ್ಠಾನಕ್ಕೆ ತರುವುದು ನಮ್ಮ ಉದ್ದೇಶ ಎಂದು ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ ಎ ನಾರಾಯಣಗೌಡ ತಿಳಿಸಿದ್ದಾರೆ.
ಸಾಧಕರಿಗೆ ಸನ್ಮಾನ
ಬಸವೇಶ್ವರ ಪ್ರಶಸ್ತಿ -ಸಾಲುಮರದ ತಿಮ್ಮಕ್ಕ
ಕುವೆಂಪು ಪ್ರಶಸ್ತಿ - ಡಾ ಸಿ ಪಿ ಕೃಷ್ಣಕುಮಾರ್
ಡಾ ರಾಜ್ ಕುಮಾರ್ ಪ್ರಶಸ್ತಿ - ಜಯಂತಿ
ಕೆ ಶಾಮರಾವ್ ಪ್ರಶಸ್ತಿ - ವಿಶ್ವೇಶ್ವರ ಭಟ್
ಎಸ್ ಕೆ ಕರೀಂಖಾನ್ ಪ್ರಶಸ್ತಿ - ಡಾ ಎಂ ಎಸ್ ವಾಲಿ
ಶಾಂತವೇರಿ ಗೋಪಾಲ್ ಗೌಡ - ಎಚ್ ಜಿ ಗೋವಿಂದೇಗೌಡ
ಪ್ರೋ ಎಂ ಡಿ ನಂಜುಂಜಸ್ವಾಮಿ - ಸಿದ್ದವೀರಪ್ಪ ಈಚಗಟ್ಟಿ
(ದಟ್ಸ್ ಕನ್ನಡ ವಾರ್ತೆ)
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications