ಕರವೇಯಿಂದ ವಿಶ್ವ ಕನ್ನಡಿಗರ ಸಮಾವೇಶ
ಬೆಂಗಳೂರು, ಜ. 15 : ಕರ್ನಾಟಕ ರಕ್ಷಣಾ ವೇದಿಕೆ ಜ. 17 ಮತ್ತು 18 ರಂದು ಅರಮನೆ ಮೈದಾನದಲ್ಲಿ ವಿಶ್ವ ಕನ್ನಡಿಗರ ಸಮಾವೇಶವನ್ನು ಹಮ್ಮಿಕೊಂಡಿದೆ. ನಾಡು, ನುಡಿ, ಜಲ ಸೇರಿದಂತೆ ಕರ್ನಾಟಕ ಹಾಗೂ ಕನ್ನಡಿಗರನ್ನು ಕಾಡುತ್ತಿರುವ ಜ್ವಲಂತ ಸಮಸ್ಯೆಗಳತ್ತ ಬೆಳಕು ಚೆಲ್ಲುವುದು ಸಮಾವೇಶದ ಉದ್ದೇಶವಾಗಿದೆ.
ಮಠಾಧಿಪತಿಗಳು, ರಾಜಕಾರಣಿಗಳು, ಕಲಾವಿದರು ಸೇರಿದಂತೆ ನಾಡಿನ ಎಲ್ಲ ಭಾಗಗಳಿಂದ ಕರವೇ ಕಾರ್ಯಕರ್ತರು ಈ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಜತೆಗೆ ಹಲವು ಕನ್ನಡಪರ, ರೈತ ಮತ್ತು ದಲಿತ ಸಂಘಟನೆಗಳ ಕಾರ್ಯಕರ್ತರೂ ಕೈಜೋಡಿಸಲಿದ್ದಾರೆ. ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲದೆ, ನಾನಾ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಗಣ್ಯರಿಗೆ ಸನ್ಮಾನ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.
ದೆಹಲಿ, ಚೆನ್ನೈ, ಗೋವಾ, ದುಬೈ, ಸಿಂಗಾಪುರ, ಕೆನಡಾ, ಆಸ್ಟ್ರೇಲಿಯಾ, ನೆದರ್ ಲ್ಯಾಂಡ್, ಹಾಲೆಂಡ್ ಮತ್ತಿತರ ದೇಶಗಳ ಕನ್ನಡ ಸಂಘಟನೆಗಳ ಮುಖ್ಯಸ್ಥರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಸಮಾವೇಶದಲ್ಲಿ 42 ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗುವುದು. ಅಂತಾರಾಜ್ಯ ವಲಸೆ ನಿಯಂತ್ರಣ, ಆಡಳಿತದಲ್ಲಿ ಕನ್ನಡ ಕಡ್ಡಾಯ, ನೆರೆ ರಾಜ್ಯ ನದಿ ನೀರು ಹಂಚಿಕೆ ತಗಾದೆ ಮತ್ತು ಗಡಿ ವಿವಾದಗಳು ಈ ನಿರ್ಣಯಗಳಲ್ಲಿವೆ. ಈ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮೇಲೆ ಒತ್ತಡ ಹೇರುವುದು. ಹಾಗೂ ಮುಂದಿನ ಸಮಾವೇಶಕ್ಕೆ ಮುನ್ನ ಈ ಎಲ್ಲ ನಿರ್ಣಯಗಳನ್ನು ಅನುಷ್ಠಾನಕ್ಕೆ ತರುವುದು ನಮ್ಮ ಉದ್ದೇಶ ಎಂದು ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ ಎ ನಾರಾಯಣಗೌಡ ತಿಳಿಸಿದ್ದಾರೆ.
ಸಾಧಕರಿಗೆ ಸನ್ಮಾನ
ಬಸವೇಶ್ವರ ಪ್ರಶಸ್ತಿ -ಸಾಲುಮರದ ತಿಮ್ಮಕ್ಕ
ಕುವೆಂಪು ಪ್ರಶಸ್ತಿ - ಡಾ ಸಿ ಪಿ ಕೃಷ್ಣಕುಮಾರ್
ಡಾ ರಾಜ್ ಕುಮಾರ್ ಪ್ರಶಸ್ತಿ - ಜಯಂತಿ
ಕೆ ಶಾಮರಾವ್ ಪ್ರಶಸ್ತಿ - ವಿಶ್ವೇಶ್ವರ ಭಟ್
ಎಸ್ ಕೆ ಕರೀಂಖಾನ್ ಪ್ರಶಸ್ತಿ - ಡಾ ಎಂ ಎಸ್ ವಾಲಿ
ಶಾಂತವೇರಿ ಗೋಪಾಲ್ ಗೌಡ - ಎಚ್ ಜಿ ಗೋವಿಂದೇಗೌಡ
ಪ್ರೋ ಎಂ ಡಿ ನಂಜುಂಜಸ್ವಾಮಿ - ಸಿದ್ದವೀರಪ್ಪ ಈಚಗಟ್ಟಿ
(ದಟ್ಸ್ ಕನ್ನಡ ವಾರ್ತೆ)
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications