ಅಧಿವೇಶನ : ಹೊಸತನವಿಲ್ಲದ ರಾಜ್ಯಪಾಲ ಭಾಷಣ
ಬೆಳಗಾವಿ, ಜ. 16 : ಎರಡನೇ ಬಾರಿಗೆ ಆಯೋಜಿಸಲಾಗಿರುವ ಐತಿಹಾಸಿಕ ವಿಶೇಷ ಅಧಿವೇಶನದಲ್ಲಿ ರಾಜ್ಯಪಾಲರ ರಾಮೇಶ್ವರ ಠಾಕೂರ್ ಸರ್ಕಾರದ ತುತ್ತೂರಿಯನ್ನು ಊದಿದ್ದಾರೆ. ಸಮೃದ್ಧ ಹಾಗೂ ಸುವರ್ಣ ಕರ್ನಾಟಕಕ್ಕೆ ಸರ್ಕಾರ ಬದ್ಧ. ಹೈದರಾಬಾದ್ ಕರ್ನಾಟಕ್ಕೆ ವಿಶೇಷ ಸ್ಥಾನಮಾನ. ಸಂವಿಧಾನದ 371 ಕಲಂ ಗೆ ತಿದ್ದುಪಡಿಗೆ ಪ್ರಯತ್ನ. ಮುಂದಿನ ದಿನಗಳಲ್ಲಿ ನಿರಂತರ ವಿದ್ಯುತ್ ನೀಡುವ ಭಾರಿ ಭರವಸೆ. ರಾಜ್ಯಕ್ಕೆ ರಾಷ್ಟ್ರೀಯ ಭದ್ರತಾ ಪಡೆಯ ಘಟಕ ಸ್ಥಾಪನೆ ಮಾಡದಿರುವ ಕೇಂದ್ರದ ಕ್ರಮಕ್ಕೆ ವಿಷಾದ. ಮುಂದಿನ ದಿನಗಳಲ್ಲಾದರೂ ನಮ್ಮ ಮೊರೆಯನ್ನು ಆಲಿಸಿ ಎನ್ನುವ ಮನವಿಗಳು ರಾಜ್ಯಪಾಲರ ಭಾಷಣದ ಪ್ರಮುಖಾಂಶಗಳಾಗಿವೆ.
ಸರ್ಕಾರ ಸಂಧ್ಯಾ ಸುರಕ್ಷೆ ಹಾಗೂ ಜನಸ್ಪಂದನ ಕಾರ್ಯಕ್ರಮಗಳು ಯಶಸ್ವಿಯಾಗಿವೆ. ಕಾನೂನು ಸುವ್ಯವಸ್ಥೆ ಕಾಪಾಡಿಕೊಂಡು ಹೋಗುವ ಭರವಸೆ. ರೈತರಿಗೆ ಸಾಲಮನ್ನಾ ವಿಸ್ತರಣೆ, ಬಡಕುಟುಂಬಗಳಿಗೆ ಆರೋಗ್ಯ ವಿಮೆ ಜಾರಿ. ರಾಜ್ಯದ 16 ಲಕ್ಷ ಕುಟುಂಬಗಳಿಗೆ ಈ ಯೋಜನೆ ವಿಸ್ತರಣೆ. ರಾಜ್ಯ ಪ್ರಮುಖ ನಗರಗಳಾದ ಗುಲ್ಬರ್ಗಾ, ಬಳ್ಳಾರಿ, ಬಿಜಾಪುರ ಹಾಗೂ ಶಿವಮೊಗ್ಗಗಳಲ್ಲಿ ವಿಮಾನ ನಿಲ್ದಾಣ ಸ್ಥಾಪನೆ. ಅಂಗವಿಕಲರಿಗೆ ಮಾಸಶನ ಯೋಜನೆಯ ಹಣ ಹೆಚ್ಚಳ. ರಾಜ್ಯದ ಸುಮಾರು 5 ಲಕ್ಷ ನಿರುದ್ಯೋಗಿಗಳಿಗೆ ಉದ್ಯೋಗವಕಾಶ. ರಾಜ್ಯದ 56 ಸಾವಿರ ಕಿಮೀ ರಸ್ತೆ ಅಭಿವೃದ್ಧಿ ಗುರಿ. ಈ ಅಭಿವೃದ್ಧಿಗೆ ವಿಶೇಷ ಕಾರ್ಯಪಡೆ ನೇಮಕ. 2009ರ ವರ್ಷವನ್ನು ಕನ್ನಡ ವರ್ಷವೆಂದು ಆಚರಿಸಲು ಸರ್ಕಾರ ನಿರ್ಧರಿಸಿದೆ ಎಂದು ಹೇಳಿದರು.
ಪರಿಶಿಷ್ಟ ಜಾತಿ ಹಾಗೂ ಪಂಗಡದ ವಿದ್ಯಾರ್ಥಿ ವಿದ್ಯಾರ್ಜನೆಗೆ ಅನೇಕ ಕ್ರಮ. ಹಾಗೂ ವಿದ್ಯಾರ್ಥಿ ನಿಲಯಗಳ ನಿರ್ಮಾಣ. ಈಗಾಗಲೇ ಎಸ್ಸಿ ಎಸ್ಟಿ ವಸತಿ ನಿಲಯಗಳಲ್ಲಿ ಸುಮಾರು 17 ಸಾವಿರ ವಿದ್ಯಾರ್ಥಿಗಳಿಗೆ ವಸತಿ ಕಲ್ಪಿಸಲಾಗಿದೆ. ಪ್ರಧಾನಮಂತ್ರಿ ರೋಜಗಾರ್ ಯೋಜನೆಯನ್ನು ಸಮರ್ಪಕವಾಗಿ ಬಳಿಸಿಕೊಂಡ ಎರಡನೇ ರಾಜ್ಯ ಎಂಬ ಕೀರ್ತಿಗೆ ಕರ್ನಾಟಕ ಪಾತ್ರವಾಗಿದೆ. ವಿಶೇಷವಾಗಿ ಕುಡಿಯುವ ನೀರು ಮತ್ತು ರಸ್ತೆ ಅಭಿವೃದ್ಧಿ ಹಣ ವೆಚ್ಚ ಮಾಡಲಾಗಿದೆ. ಈ ಕೆಲಸ ನಿರಂತರವಾಗಿ ಮುಂದುವರೆಯಲಿದೆ. ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗುವುದು ಎಂದು ರಾಮೇಶ್ವರ ಠಾಕೂರ್ ಸರ್ಕಾರದ ವರದಿಯನ್ನು ನಿರೂಪಿಸಿದರು.
(ದಟ್ಸ್ ಕನ್ನಡ ವಾರ್ತೆ)
ಪೂರಕ ಓದಿಗೆ:
ಮದುವಣಗಿತ್ತಿಯಂತೆ ಸಂಭ್ರಮಿಸುತ್ತಿರುವ ಬೆಳಗಾವಿ
ಉತ್ತರಕರ್ನಾಟಕದಲ್ಲಿ ಇನ್ನೊಂದು ಅಧಿವೇಶನ
ಬೆಳಗಾವಿ ಚಿತ್ರಮಂದಿರಗಳಲ್ಲಿ ಕನ್ನಡ ಕಂಪು
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ












Click it and Unblock the Notifications