ಅಧಿವೇಶನ : ಹೊಸತನವಿಲ್ಲದ ರಾಜ್ಯಪಾಲ ಭಾಷಣ
ಬೆಳಗಾವಿ, ಜ. 16 : ಎರಡನೇ ಬಾರಿಗೆ ಆಯೋಜಿಸಲಾಗಿರುವ ಐತಿಹಾಸಿಕ ವಿಶೇಷ ಅಧಿವೇಶನದಲ್ಲಿ ರಾಜ್ಯಪಾಲರ ರಾಮೇಶ್ವರ ಠಾಕೂರ್ ಸರ್ಕಾರದ ತುತ್ತೂರಿಯನ್ನು ಊದಿದ್ದಾರೆ. ಸಮೃದ್ಧ ಹಾಗೂ ಸುವರ್ಣ ಕರ್ನಾಟಕಕ್ಕೆ ಸರ್ಕಾರ ಬದ್ಧ. ಹೈದರಾಬಾದ್ ಕರ್ನಾಟಕ್ಕೆ ವಿಶೇಷ ಸ್ಥಾನಮಾನ. ಸಂವಿಧಾನದ 371 ಕಲಂ ಗೆ ತಿದ್ದುಪಡಿಗೆ ಪ್ರಯತ್ನ. ಮುಂದಿನ ದಿನಗಳಲ್ಲಿ ನಿರಂತರ ವಿದ್ಯುತ್ ನೀಡುವ ಭಾರಿ ಭರವಸೆ. ರಾಜ್ಯಕ್ಕೆ ರಾಷ್ಟ್ರೀಯ ಭದ್ರತಾ ಪಡೆಯ ಘಟಕ ಸ್ಥಾಪನೆ ಮಾಡದಿರುವ ಕೇಂದ್ರದ ಕ್ರಮಕ್ಕೆ ವಿಷಾದ. ಮುಂದಿನ ದಿನಗಳಲ್ಲಾದರೂ ನಮ್ಮ ಮೊರೆಯನ್ನು ಆಲಿಸಿ ಎನ್ನುವ ಮನವಿಗಳು ರಾಜ್ಯಪಾಲರ ಭಾಷಣದ ಪ್ರಮುಖಾಂಶಗಳಾಗಿವೆ.
ಸರ್ಕಾರ ಸಂಧ್ಯಾ ಸುರಕ್ಷೆ ಹಾಗೂ ಜನಸ್ಪಂದನ ಕಾರ್ಯಕ್ರಮಗಳು ಯಶಸ್ವಿಯಾಗಿವೆ. ಕಾನೂನು ಸುವ್ಯವಸ್ಥೆ ಕಾಪಾಡಿಕೊಂಡು ಹೋಗುವ ಭರವಸೆ. ರೈತರಿಗೆ ಸಾಲಮನ್ನಾ ವಿಸ್ತರಣೆ, ಬಡಕುಟುಂಬಗಳಿಗೆ ಆರೋಗ್ಯ ವಿಮೆ ಜಾರಿ. ರಾಜ್ಯದ 16 ಲಕ್ಷ ಕುಟುಂಬಗಳಿಗೆ ಈ ಯೋಜನೆ ವಿಸ್ತರಣೆ. ರಾಜ್ಯ ಪ್ರಮುಖ ನಗರಗಳಾದ ಗುಲ್ಬರ್ಗಾ, ಬಳ್ಳಾರಿ, ಬಿಜಾಪುರ ಹಾಗೂ ಶಿವಮೊಗ್ಗಗಳಲ್ಲಿ ವಿಮಾನ ನಿಲ್ದಾಣ ಸ್ಥಾಪನೆ. ಅಂಗವಿಕಲರಿಗೆ ಮಾಸಶನ ಯೋಜನೆಯ ಹಣ ಹೆಚ್ಚಳ. ರಾಜ್ಯದ ಸುಮಾರು 5 ಲಕ್ಷ ನಿರುದ್ಯೋಗಿಗಳಿಗೆ ಉದ್ಯೋಗವಕಾಶ. ರಾಜ್ಯದ 56 ಸಾವಿರ ಕಿಮೀ ರಸ್ತೆ ಅಭಿವೃದ್ಧಿ ಗುರಿ. ಈ ಅಭಿವೃದ್ಧಿಗೆ ವಿಶೇಷ ಕಾರ್ಯಪಡೆ ನೇಮಕ. 2009ರ ವರ್ಷವನ್ನು ಕನ್ನಡ ವರ್ಷವೆಂದು ಆಚರಿಸಲು ಸರ್ಕಾರ ನಿರ್ಧರಿಸಿದೆ ಎಂದು ಹೇಳಿದರು.
ಪರಿಶಿಷ್ಟ ಜಾತಿ ಹಾಗೂ ಪಂಗಡದ ವಿದ್ಯಾರ್ಥಿ ವಿದ್ಯಾರ್ಜನೆಗೆ ಅನೇಕ ಕ್ರಮ. ಹಾಗೂ ವಿದ್ಯಾರ್ಥಿ ನಿಲಯಗಳ ನಿರ್ಮಾಣ. ಈಗಾಗಲೇ ಎಸ್ಸಿ ಎಸ್ಟಿ ವಸತಿ ನಿಲಯಗಳಲ್ಲಿ ಸುಮಾರು 17 ಸಾವಿರ ವಿದ್ಯಾರ್ಥಿಗಳಿಗೆ ವಸತಿ ಕಲ್ಪಿಸಲಾಗಿದೆ. ಪ್ರಧಾನಮಂತ್ರಿ ರೋಜಗಾರ್ ಯೋಜನೆಯನ್ನು ಸಮರ್ಪಕವಾಗಿ ಬಳಿಸಿಕೊಂಡ ಎರಡನೇ ರಾಜ್ಯ ಎಂಬ ಕೀರ್ತಿಗೆ ಕರ್ನಾಟಕ ಪಾತ್ರವಾಗಿದೆ. ವಿಶೇಷವಾಗಿ ಕುಡಿಯುವ ನೀರು ಮತ್ತು ರಸ್ತೆ ಅಭಿವೃದ್ಧಿ ಹಣ ವೆಚ್ಚ ಮಾಡಲಾಗಿದೆ. ಈ ಕೆಲಸ ನಿರಂತರವಾಗಿ ಮುಂದುವರೆಯಲಿದೆ. ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗುವುದು ಎಂದು ರಾಮೇಶ್ವರ ಠಾಕೂರ್ ಸರ್ಕಾರದ ವರದಿಯನ್ನು ನಿರೂಪಿಸಿದರು.
(ದಟ್ಸ್ ಕನ್ನಡ ವಾರ್ತೆ)
ಪೂರಕ ಓದಿಗೆ:
ಮದುವಣಗಿತ್ತಿಯಂತೆ ಸಂಭ್ರಮಿಸುತ್ತಿರುವ ಬೆಳಗಾವಿ
ಉತ್ತರಕರ್ನಾಟಕದಲ್ಲಿ ಇನ್ನೊಂದು ಅಧಿವೇಶನ
ಬೆಳಗಾವಿ ಚಿತ್ರಮಂದಿರಗಳಲ್ಲಿ ಕನ್ನಡ ಕಂಪು
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications