ದುರಾನಿ ಬಂಧನಕ್ಕೆ ಪಾಕ್ ಐಎಸ್ಐ ಆಗ್ರಹ
ಇಸ್ಲಾಮಾಬಾದ್, ಜ. 16 : ಕಸಬ್ ಪಾಕಿಸ್ತಾನದ ವ್ಯಕ್ತಿ ಎಂದು ಹೇಳಿಕೆ ನೀಡಿದ ಪಾಕಿಸ್ತಾನದ ಮಾಜಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಮಹಮೊದ್ ಅಲಿ ದುರಾನಿ ಅವರನ್ನು ಪಾಕಿಸ್ತಾನದಲ್ಲಿ ಖಳನಾಯಕನಂತೆ ಬಿಂಬಿಸುವ ಕೆಲಸ ಆರಂಭವಾಗಿದೆ. ಪಾಕಿಸ್ತಾನದಾದ್ಯಂತ ಅವರ ವಿರುದ್ದ ವ್ಯಾಪಕ ಟೀಕೆಗಳ ಸುರಿಮಳೆ ಸುರಿಯತೊಡಗಿವೆ. ಪಾಕಿಸ್ತಾನಕ್ಕೆ ದ್ರೋಹ ಬಗೆಯುತ್ತಿರುವ ದುರಾನಿ ಭಾರತ ಹಾಗೂ ಅಮೆರಿಕದ ಏಜಂಟ್ ರಂತೆ ವರ್ತಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತವಾಗತೊಡಗಿವೆ.
ಮುಂಬೈ ದಾಳಿಯಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ಪಾಕಿಸ್ತಾದ ವ್ಯಕ್ತಿ ಎಂದು ದುರಾನಿ ಹೇಳಿಕೆ ನೀಡಿದ್ದರು. ಈ ಸುದ್ದಿ ಪಾಕಿಸ್ತಾನದ ಸರ್ಕಾರದ ಕಿವಿಗೆ ಬಿದ್ದ ತಕ್ಷಣ ದುರಾನಿ ಅವರನ್ನು ಪದಚ್ಯುತಗೊಳಿಸಲಾಯಿತು. ಈ ಹೇಳಿಕೆಗೆ ಪಾಕ್ ಪ್ರಧಾನಮಂತ್ರಿ ಯೂಸೆಫ್ ರಾಜಾ ಗಿಲಾನಿ ತೀವ್ರ ಆಕ್ಷೇಪ ಹಾಗೂ ಆಕ್ರೋಶ ವ್ಯಕ್ತಪಡಿಸಿ ದುರಾನಿ ಅಮಾನತ್ತಿಗೆ ಅದೇಶ ನೀಡಿದ್ದರು. ಇದಕ್ಕೂ ಮುಂಚೆ ದಾಳಿ ನಡೆದ ನಂತರ ತನಿಖೆ ನಡೆಸಿದ ಭಾರತ, ಪಾಕಿಸ್ತಾನ ಮೂಲದ ವ್ಯಕ್ತಿಗಳು ಮುಂಬೈ ದಾಳಿ ನಡೆಸಿರುವುದು ತನಿಖೆಯಿಂದ ಸ್ಪಷ್ಟವಾಗಿದೆ ಎಂದು ಹೇಳುತ್ತಲೇ ಬಂದಿದೆ.
ಪಾಕಿಸ್ತಾನ ಐಎಸ್ಐ ಅಂತೂ ದುರಾನಿ ವಿರುದ್ಧ ಉಗ್ರ ಕೆಂಗಣ್ಣಿ ಬೀರಿದ್ದು, ಜನವರಿ ಏಳರ ನಂತರ ದುರಾನಿ ವರ್ತನೆಯೇ ಬೇರೆಯಾಗಿದೆ. ಅವರು ಭಾರತ ಮತ್ತು ಅಮೆರಿಕದ ಏಜಂಟ್ ರಂತೆ ವರ್ತಿಸುತ್ತಿದ್ದಾರೆ. ಆದ್ದರಿಂದ ಅವರನ್ನು ಬಂಧಿಸಿ ತನಿಖೆ ನಡೆಸಬೇಕಾದ ಅಗತ್ಯವಿದೆ ಎಂದು ಪ್ರತಿಪಾದಿಸಿದೆ. ಇತ್ತೀಚೆಗೆ ಅವರ ಹೇಳಿಕೆ, ಮಾದ್ಯಮಗಳ ಸಂದರ್ಶನ ಹಾಗೂ ಸರ್ಕಾರದ ವಿರುದ್ಧ ಮಾತನಾಡುತ್ತಿರುವ ಅವರ ಕ್ರಮ ಅನೇಕ ಸಂದೇಹಗಳಿಗೆ ಕಾರಣವಾಗಿದೆ. ದುರಾನಿ ಅವರನ್ನು ವಿಚಾರಣೆಗೆ ಒಳಪಡಿಸಬೇಕು ಎಂದು ಪಾಕ್ ಅಧ್ಯಕ್ಷ ಆಸೀಫ್ ಅಲಿ ಜರ್ದಾರಿ ಅವರನ್ನು ಐಎಸ್ಐ ಒತ್ತಾಯಿಸಿದೆ.
(ದಟ್ಸ್ ಕನ್ನಡ ವಾರ್ತೆ)
ನಾನು ಬಲಿಪಶು ಆಗಿದ್ದೇನೆ : ದುರಾನಿ
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications