ರೇವಣ್ಣ ಮನೆ ಕಟ್ಟಿದರೆ ನಮಗೇನಂತೆ?
ಬೆಂಗಳೂರು, ಜ. 17 : ಎಚ್. ಡಿ. ದೇವೇಗೌಡರ ಮಗ , ಮಾಜಿ ಸಚಿವ, ಹೊಳೆನರಸೀಪುರದ ಎಚ್.ಡಿ. ರೇವಣ್ಣ ಅವರು ಬೆಂಗಳೂರು ದಕ್ಷಿಣದಲ್ಲಿರುವ ಬಸವನಗುಡಿಯಲ್ಲಿ ಒಂದು ಬಂಗ್ಲೆ ಕಟ್ಟಿಸುತ್ತಿದ್ದಾರೆ. ಅವರ ಈ ಖಾಸಗಿ ಕಟ್ಟಡ ನಿರ್ಮಾಣ ಕಾಮಗಾರಿ ಕೆಲಸಗಳಿಂದ ಸ್ಥಳೀಯ ನಾಗರಿಕರಿಗೆ ತುಂಬಾ ಅನಾನುಕೂಲ ಉಂಟಾಗುತ್ತಿದೆ. ಮೈತ್ರಿ ಸರಕಾರದಲ್ಲಿ ಲೋಕೋಪಯೋಗಿ ಸಚಿವರೂ ಆಗಿದ್ದ ರೇವಣ್ಣನವರು ಈಗ ಹೋಂ ಸ್ಕೂಲ್ ಸರ್ಕಲ್ ನಿರ್ಮಿಸುತ್ತಿರುವ ಸ್ವಂತ ಮನೆಯಿಂದಾಗಿ ಅನೇಕರಿಗೆ ಅನೇಕರೀತಿ ಕಿರುಕುಳ ಆಗುತ್ತಿದೆ ಎಂದು ವರದಿಯಾಗಿದೆ.
ರಸ್ತೆಯಲ್ಲಿ ಎಲ್ಲಂದರಲ್ಲಿ ಮರಳು ಹಾಕುವುದು, ಕಲ್ಲು ರಾಶಿ ಉದುರಿಸುವುದು. ಓಡಾಡುವರಿಗೆ ವೃಥಾ ತೊಂದರೆ. ವಾಹನ ಸಂಚಾರಿಗಳಿಗೆ ತಾಪತ್ರಯ. ಕಾವೇರಿ ಪೆಟ್ರೋಲ್ ಬಂಕಿನ ಕಡೆ ಹೋಗಿಬರುವವರಿಗೆ ಇದರ ತೊಂದರೆಯ ಅರಿವು ಹೆಚ್ಚು ತಟ್ಟಿರುತ್ತದೆ. ಅಕ್ಕಪಕ್ಕದ ಮನೆಯವರ ಗೋಳು ಹೇಳತೀರದು. ತೊಂದರೆಗಳ ಜತೆಗೆ ಜನರಿಗೆ ಏನೋ ಒಂದು ಬಗೆಯ ಭಯ.
ಮನೆ ಕಟ್ಟುವುದಕ್ಕೆ ಕಾರ್ಪೋರೇಷನ್ ವಿಧಿಸಿರುವ ನಿಯಮಗಳನ್ನು ಗಾಳಿಗೆ ತೂರಲಾಗಿದೆ ಎಂದೂ ಆಪಾದಿಸಲಾಗಿದೆ. ಅದರ ಬಗ್ಗೆ ವಿಚಾರಿಸಿದರೆ ತಮಗೆ ಮಾಹಿತಿ ಇಲ್ಲ ಎನ್ನುತ್ತಾರಂತೆ ಟೌನ್ ಪ್ಲಾನಿಂಗ್ ಇಲಾಖೆಯವರು. ಇನ್ನು ಟ್ರಾಫಿಕ್ ಜಾಮು, ಓಡಾಡುವವರಿಗೆ ತೊಂದರೆ ಬಗ್ಗೆ ಪೊಲೀಸರು ಏನು ಹೇಳುತ್ತಾರೆ ಎನ್ನುವುದನ್ನು ತಿಳಿಯಲು ಬೆಂಗಳೂರಿನಿಂದ ಪ್ರಕಟವಾಗುವ ಆಂಗ್ಲ ದೈನಿಕ ಮಿಡ್ ಡೇ ಪ್ರಕಟಿಸಿರುವ ವಿಸ್ತೃತ ವರದಿಯನ್ನು ನೀವು ಓದಬೇಕು.
(ಅಲ್ಲಿಂದ ಇಲ್ಲಿಂದ)
ಪತಿ, ಪತ್ನಿಗಿಲ್ಲ ಒಂದೆಡೆ ಕೂರಂಗಿಲ್ಲ: ಶೆಟ್ಟರ್
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications