ಮುಂಬೈ ದಾಳಿ, ವಾಷಿಂಗ್ ಟನ್ ಚಲೋ ಬೆಂಬಲಿಸಿ
ಮುಂಬೈ, ಜ. 16 : ಮುಂಬೈ ಕೃತ್ಯವನ್ನು ಖಂಡಿಸಿ U.S.-India Political Action Committee (USINPAC) ಕಳೆದ ವರ್ಷ ಡಿಸೆಂಬರ್ ಒಂದರಿಂದ ವಾಷಿಂಗ್ ಟನ್ ಚಲೋ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಭಾರತೀಯರಿಗೆ ಆನ್ ಲೈನ್ ಮೂಲಕ ತಮ್ಮ ಬೆಂಬಲ ನೀಡಲು ಅವಕಾಶ ಕಲ್ಪಿಸಲಾಗಿದ್ದು, ಪಾಪಿ ಪಾಕಿ ವಿರುದ್ಧ ಹೋರಾಟ ನಡೆಸಲು ಇನ್ನಷ್ಟು ಶಕ್ತಿ ನೀಡಲು ಮನವಿ ಮಾಡಿಕೊಂಡಿದೆ. ಭಾರತೀಯರಾದ ನಾವೆಲ್ಲರೂ ಈ ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡಲೇಬೇಕು, ಅದು ಪ್ರತಿ ಭಾರತೀಯನ ಕರ್ತವ್ಯ ಕೂಡ ಹೌದು.
ಹೋರಾಟದ ಮುಖ್ಯ ಉದ್ದೇಶ ಪಾಕಿಸ್ತಾನದಲ್ಲಿರುವ ಉಗ್ರರನ್ನು ಉಗ್ರರ ನೆಲೆಯನ್ನು ನಾಶ ಮಾಡಬೇಕು. ಮುಂಬೈ ದಾಳಿಗೆ ಸಂಬಂಧಿಸಿದಂತೆ ಪಾಕಿಸ್ತಾನದಲ್ಲಿ ಸಿಕ್ಕಿಬಿದ್ದಿರುವ ಹಾಗೂ ಅಡಗಿಕೊಂಡಿರುವ ಉಗ್ರರನ್ನು ಕೂಡಲೇ ಭಾರತಕ್ಕೆ ಹಸ್ತಾಂತರಿಸಿಬೇಕು. 1993ರ ಸರಣಿ ಬಾಂಬ್ ಸ್ಫೋಟದ ಪ್ರಮುಖ ಪಾತಕಿ ದಾವೂದ್ ಇಬ್ರಾಹಿಂನನ್ನು ಕೂಡಲೇ ಭಾರತಕ್ಕೆ ಒಪ್ಪಿಸಬೇಕು ಎನ್ನುವುದು ಈ ಹೋರಾಟದ ಮೂಲ ಉದ್ದೇಶವಾಗಿದೆ.
ಮುಂಬೈ ಭಯೋತ್ಪಾದನೆ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ ಪೈಶಾಚಿಕೆ ಕೃತ್ಯ. ಸುಮಾರು 180ಕ್ಕೂ ಅಧಿಕ ಅಮಾಯಕ ಮಂದಿ ಪಾಕಿಸ್ತಾನ ಕೃಪಾಪೋಷಿತ ಉಗ್ರರು ನಡೆದ ವಿಧ್ವಂಸಕದಲ್ಲಿ ಪ್ರಾಣ ಕಳೆದುಕೊಂಡರು. ಸತತ ಮೂರು ದಿನಗಳ ಕಾರ್ಯಾಚರಣೆಯಲ್ಲಿ 10 ಉಗ್ರರಲ್ಲಿ ಒಂಬತ್ತು ಉಗ್ರರನ್ನು ಎನ್ ಕೌಂಟರ್ ನಲ್ಲಿ ಕೊಂದು ಹಾಕಲಾಯಿತು. ಮುಂಬೈ ಪೊಲೀಸ್ ಪಡೆ ಹಾಗೂ ರಾಷ್ಟ್ರೀಯ ಭದ್ರತಾ ಪಡೆ ವೀರಯೋಧರ ಸಾಹಸ ದೇಶದ ಸಾರ್ವಭೌಮತೆಯನ್ನು ಕಾಪಾಡಿತು. ಮಹಾರಾಷ್ಟ್ರ ಎಟಿಎಸ್ ಮುಖ್ಯಸ್ಥ ಹೇಮಂತ್ ಕರ್ಕರೆ, ಎನ್ ಕೌಂಟರ್ ತಜ್ಞ ವಿಜಯ್ ಸಲಸ್ಕರ್, ಡಿಸಿಪಿ ಅಶೋಕ್ ಕಾಮ್ಟೆ ಹಾಗೂ ರಾಷ್ಟ್ರೀಯ ಭದ್ರತಾ ಪಡೆಯ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಉಗ್ರರ ಗುಂಡಿಗೆ ಬಲಿಯಾಗಿದ್ದರು.
(ದಟ್ಸ್ ಕನ್ನಡ ವಾರ್ತೆ)
ಹೆಚ್ಚಿನ ಮಾಹಿತಿಗೆ : http://washingtonchalo.com/petition.html
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ












Click it and Unblock the Notifications