ತನ್ನಲ್ಲಿ ಪ್ರಧಾನಿ ಕಾಣದ ನರೇಂದ್ರ ಮೋದಿ
ಅಹ್ಮದಾಬಾದ್, ಜ. 17 : ಪ್ರಧಾನಿ ಪದವಿಗೆ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅರ್ಹ ಅಭ್ಯರ್ಥಿ ಎಂದು ಹುಯಿಲೆಬ್ಬಿಸಿದ್ದ ಕಾರ್ಪೊರೇಟ್ ದಿಗ್ಗಜರ ಆಸೆಗೆ ನರೇಂದ್ರ ಮೋದಿಯೇ ತಣ್ಣೀರು ಎರಚಿದ್ದಾರೆ. ತಾವು ಪ್ರಧಾನಿ ಗದ್ದುಗೆಯ ಆಕಾಂಕ್ಷಿಯಲ್ಲ, ಹಿರಿಯ ನಾಯಕ ಎಲ್ ಕೆ ಅಡ್ವಾಣಿಯೇ ಭಾರತೀಯ ಜನತಾ ಪಕ್ಷ ಪರ ಪ್ರಧಾನಿ ಅಭ್ಯರ್ಥಿ ಎಂದು ಹೇಳಿ ವಿವಾದಕ್ಕೆ ಮೋದಿ ತೆರೆ ಎಳೆದಿದ್ದಾರೆ.
"ನಾನು ಪ್ರಧಾನಿ ಪದವಿಯ ಸ್ಪರ್ಧೆಯಲ್ಲಿಲ್ಲ. ಗುಜರಾತ್ ಅಭಿವೃದ್ಧಿಯ ಪಥದಲ್ಲಿ ಸಾಗಿದಂತೆ ಅಡ್ವಾಣಿಯವರ ಸಮರ್ಥ ನಾಯಕತ್ವದಲ್ಲಿ ಭಾರತವೂ ಅಭಿವೃದ್ಧಿ ಹೊಂದಲಿದೆ" ಎಂದು ಮೋದಿ ಶನಿವಾರ ಮಧ್ಯ ಗುಜರಾತ್ ನ ಹಾಲೋಲ್ ನಗರದಲ್ಲಿ ಚತುಷ್ಪಥ ರಸ್ತೆಗೆ ಅಡಿಗಲ್ಲು ಹಾಕುವ ಸಂದರ್ಭದಲ್ಲಿ ಹೇಳಿದರು.
ಉದ್ಯಮಿಗಳಾದ ಅನಿಲ್ ಅಂಬಾನಿ ಮತ್ತು ಸುನೀಲ್ ಭಾರತಿ ಮಿತ್ತಲ್ ಅವರು, ಕಳೆದ ಬುಧವಾರ ಸಮಾರಂಭವೊಂದರಲ್ಲಿ, ಮೋದಿ ಭಾರತ ಮುನ್ನಡೆಸಲು ಸಮರ್ಥ ವ್ಯಕ್ತಿ. ಗುಜರಾತ್ ಮುನ್ನಡೆಸಿದಂತೆ ಭಾರತವನ್ನೂ ಅಭಿವೃದ್ಧಿಯತ್ತ ಮೋದಿ ಕೊಂಡೊಯ್ಯಬಲ್ಲರು ಎಂದು ನುಡಿದು ರಾಜಕೀಯ ಮತ್ತು ಕೈಗಾರಿಕಾ ವಲಯದಲ್ಲಿ ಅಚ್ಚರಿ ಮೂಡಿಸಿದ್ದರು ಮತ್ತು ವಿವಾದಕ್ಕೆ ಕಾರಣರಾಗಿದ್ದರು. ಬಿಜೆಪಿ ಪಕ್ಷ ಲಾಲ್ ಕೃಷ್ಣ ಅಡ್ವಾಣಿಯವರನ್ನು ಮೊದಲಿನಿಂದಲೂ ಪ್ರಧಾನಿ ಅಭ್ಯರ್ಥಿ ಎಂದು ಬಿಂಬಿಸಿಕೊಂಡು ಬಂದಿದೆ.
(ಏಜೆನ್ಸೀಸ್)
ಪೂರಕ ಓದಿಗೆ
ಮೋದಿಯಲ್ಲಿ ಪ್ರಧಾನಿ ಕಂಡ ಅನಿಲ್ ಅಂಬಾನಿ
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ












Click it and Unblock the Notifications