ಖ್ಯಾತ ಗಾಯಕ ರಾಜು ಅನಂತಸ್ವಾಮಿ ನಿಧನ

ಜಿ.ಪಿ.ರಾಜರತ್ನಂ ಅವರ ರತ್ನನ ಪದಗಳನ್ನು ಸುಶ್ರಾವ್ಯವಾಗಿ ಹಾಡುವ ಮೂಲಕ ಕರ್ನಾಟಕದ ಮನೆಮಾತಾಗಿದ್ದರು. ಸುಗಮ ಸಂಗೀತದ ನಿರ್ದೇಶಕರಾಗಿ,ಸಂಯೋಜಕರಾಗಿ, ಗಾಯಕರಾಗಿ ಅವರ ತಂದೆ ಹಾಕಿಕೊಟ್ಟಿದ್ದ ಪರಂಪರೆಯನ್ನು ರಾಜು ಮುಂದುವರಿಸಿಕೊಂಡು ಬಂದಿದ್ದರು. ಸುಗಮ ಸಂಗೀತ ಕ್ಷೇತ್ರವನ್ನು ಕರ್ನಾಟಕದಲ್ಲಿ 15 ವರ್ಷಗಳಿಗೂ ಅಧಿಕ ಕಾಲ ಆಳಿದ ಘನತೆ ರಾಜು ಅವರಿಗೆ ಸಲ್ಲುತ್ತದೆ. ಆಕಾಶವಾಣಿ,ದೂರದರ್ಶನ, ಉದಯ ಟಿವಿ, ಈ ಟಿವಿ ಕನ್ನಡದಲ್ಲಿ ಅವರ ಹಲವಾರು ಕಾರ್ಯಕ್ರಮಗಳು ನಿರಂತರವಾಗಿ ಪ್ರಸಾರವಾಗುತ್ತಿದ್ದವು.
ವಿಪರೀತ ಮದ್ಯ ವ್ಯಸನಿಯಾಗಿದ್ದ ರಾಜು ಅನಂತಸ್ವಾಮಿ ಎರಡು ಬಾರಿ ಸಾವಿನ ಬಾಗಿಲನ್ನು ತಟ್ಟಿ ಬಂದಿದ್ದರು. ಕುಡಿತದ ಚಟದಿಂದಾಗಿ ಹಲವಾರು ಸಲ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಅವರು ಇತ್ತೀಚೆಗೆ ಕುಡಿತವನ್ನು ತ್ಯಜಿಸಿದ್ದರು. ಹಲವು ಚಿತ್ರಗಳಲ್ಲಿ ಹಾಸ್ಯ ನಟರಾಗಿಗೂ ರಾಜು ಅನಂತಸ್ವಾಮಿ ನಟಿಸಿದ್ದರು. ಪುನೀತ್ ರಾಜ್ ಕುಮಾರ್ ಅವರ 'ಅಭಿ' ಚಿತ್ರದಲ್ಲಿನ ನಟನೆಗಾಗಿ ಉತ್ತಮ ಹಾಸ್ಯ ನಟ ಪ್ರಶಸ್ತಿಯನ್ನು ಅವರು ಪಡೆದಿದ್ದರು.ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ 'ಅಮೃತ ಧಾರೆ' ಮತ್ತು ಜಾಕ್ ಪಾಟ್ ಚಿತ್ರಗಳಲ್ಲಿ ನಟಿಸಿದ್ದರು. ಅನಂತ ನಮನ, ಹೂವು, ದೀಪೋತ್ಸವ, ಹರಿ ನಿನ್ನ ಮುರಳಿ ಮುಂತಾದ ಆಲ್ಬಂಗಳನ್ನು ರಾಜು ಅನಂತಸ್ವಾಮಿ ತಂದಿದ್ದರು.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications