Get Updates
Get notified of breaking news, exclusive insights, and must-see stories!

ಖ್ಯಾತ ಗಾಯಕ ರಾಜು ಅನಂತಸ್ವಾಮಿ ನಿಧನ

Raju Ananthaswamy passes away
ಬೆಂಗಳೂರು, ಜ.17: ಖ್ಯಾತ ಸುಗಮ ಸಂಗೀತ ಗಾಯಕ, ದಿವಂಗತ ಮೈಸೂರು ಅನಂತಸ್ವಾಮಿ ಅವರ ಪುತ್ರ ರಾಜು ಅನಂತಸ್ವಾಮಿ(37) ಶನಿವಾರ ಬೆಳಗ್ಗೆ ಬೆಂಗಳೂರಿನ ಅಪೊಲೋ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕೆಲ ದಿನಗಳಿಂದ ಮೂತ್ರಕೋಶ ತೊಂದರೆಯಿಂದ ಬಳಲುತ್ತಿದ್ದ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಜಿ.ಪಿ.ರಾಜರತ್ನಂ ಅವರ ರತ್ನನ ಪದಗಳನ್ನು ಸುಶ್ರಾವ್ಯವಾಗಿ ಹಾಡುವ ಮೂಲಕ ಕರ್ನಾಟಕದ ಮನೆಮಾತಾಗಿದ್ದರು. ಸುಗಮ ಸಂಗೀತದ ನಿರ್ದೇಶಕರಾಗಿ,ಸಂಯೋಜಕರಾಗಿ, ಗಾಯಕರಾಗಿ ಅವರ ತಂದೆ ಹಾಕಿಕೊಟ್ಟಿದ್ದ ಪರಂಪರೆಯನ್ನು ರಾಜು ಮುಂದುವರಿಸಿಕೊಂಡು ಬಂದಿದ್ದರು. ಸುಗಮ ಸಂಗೀತ ಕ್ಷೇತ್ರವನ್ನು ಕರ್ನಾಟಕದಲ್ಲಿ 15 ವರ್ಷಗಳಿಗೂ ಅಧಿಕ ಕಾಲ ಆಳಿದ ಘನತೆ ರಾಜು ಅವರಿಗೆ ಸಲ್ಲುತ್ತದೆ. ಆಕಾಶವಾಣಿ,ದೂರದರ್ಶನ, ಉದಯ ಟಿವಿ, ಈ ಟಿವಿ ಕನ್ನಡದಲ್ಲಿ ಅವರ ಹಲವಾರು ಕಾರ್ಯಕ್ರಮಗಳು ನಿರಂತರವಾಗಿ ಪ್ರಸಾರವಾಗುತ್ತಿದ್ದವು.

ವಿಪರೀತ ಮದ್ಯ ವ್ಯಸನಿಯಾಗಿದ್ದ ರಾಜು ಅನಂತಸ್ವಾಮಿ ಎರಡು ಬಾರಿ ಸಾವಿನ ಬಾಗಿಲನ್ನು ತಟ್ಟಿ ಬಂದಿದ್ದರು. ಕುಡಿತದ ಚಟದಿಂದಾಗಿ ಹಲವಾರು ಸಲ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಅವರು ಇತ್ತೀಚೆಗೆ ಕುಡಿತವನ್ನು ತ್ಯಜಿಸಿದ್ದರು. ಹಲವು ಚಿತ್ರಗಳಲ್ಲಿ ಹಾಸ್ಯ ನಟರಾಗಿಗೂ ರಾಜು ಅನಂತಸ್ವಾಮಿ ನಟಿಸಿದ್ದರು. ಪುನೀತ್ ರಾಜ್ ಕುಮಾರ್ ಅವರ 'ಅಭಿ' ಚಿತ್ರದಲ್ಲಿನ ನಟನೆಗಾಗಿ ಉತ್ತಮ ಹಾಸ್ಯ ನಟ ಪ್ರಶಸ್ತಿಯನ್ನು ಅವರು ಪಡೆದಿದ್ದರು.ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ 'ಅಮೃತ ಧಾರೆ' ಮತ್ತು ಜಾಕ್ ಪಾಟ್ ಚಿತ್ರಗಳಲ್ಲಿ ನಟಿಸಿದ್ದರು. ಅನಂತ ನಮನ, ಹೂವು, ದೀಪೋತ್ಸವ, ಹರಿ ನಿನ್ನ ಮುರಳಿ ಮುಂತಾದ ಆಲ್ಬಂಗಳನ್ನು ರಾಜು ಅನಂತಸ್ವಾಮಿ ತಂದಿದ್ದರು.

(ದಟ್ಸ್ ಕನ್ನಡ ವಾರ್ತೆ)

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+