ಖ್ಯಾತ ಗಾಯಕ ರಾಜು ಅನಂತಸ್ವಾಮಿ ನಿಧನ

ಜಿ.ಪಿ.ರಾಜರತ್ನಂ ಅವರ ರತ್ನನ ಪದಗಳನ್ನು ಸುಶ್ರಾವ್ಯವಾಗಿ ಹಾಡುವ ಮೂಲಕ ಕರ್ನಾಟಕದ ಮನೆಮಾತಾಗಿದ್ದರು. ಸುಗಮ ಸಂಗೀತದ ನಿರ್ದೇಶಕರಾಗಿ,ಸಂಯೋಜಕರಾಗಿ, ಗಾಯಕರಾಗಿ ಅವರ ತಂದೆ ಹಾಕಿಕೊಟ್ಟಿದ್ದ ಪರಂಪರೆಯನ್ನು ರಾಜು ಮುಂದುವರಿಸಿಕೊಂಡು ಬಂದಿದ್ದರು. ಸುಗಮ ಸಂಗೀತ ಕ್ಷೇತ್ರವನ್ನು ಕರ್ನಾಟಕದಲ್ಲಿ 15 ವರ್ಷಗಳಿಗೂ ಅಧಿಕ ಕಾಲ ಆಳಿದ ಘನತೆ ರಾಜು ಅವರಿಗೆ ಸಲ್ಲುತ್ತದೆ. ಆಕಾಶವಾಣಿ,ದೂರದರ್ಶನ, ಉದಯ ಟಿವಿ, ಈ ಟಿವಿ ಕನ್ನಡದಲ್ಲಿ ಅವರ ಹಲವಾರು ಕಾರ್ಯಕ್ರಮಗಳು ನಿರಂತರವಾಗಿ ಪ್ರಸಾರವಾಗುತ್ತಿದ್ದವು.
ವಿಪರೀತ ಮದ್ಯ ವ್ಯಸನಿಯಾಗಿದ್ದ ರಾಜು ಅನಂತಸ್ವಾಮಿ ಎರಡು ಬಾರಿ ಸಾವಿನ ಬಾಗಿಲನ್ನು ತಟ್ಟಿ ಬಂದಿದ್ದರು. ಕುಡಿತದ ಚಟದಿಂದಾಗಿ ಹಲವಾರು ಸಲ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಅವರು ಇತ್ತೀಚೆಗೆ ಕುಡಿತವನ್ನು ತ್ಯಜಿಸಿದ್ದರು. ಹಲವು ಚಿತ್ರಗಳಲ್ಲಿ ಹಾಸ್ಯ ನಟರಾಗಿಗೂ ರಾಜು ಅನಂತಸ್ವಾಮಿ ನಟಿಸಿದ್ದರು. ಪುನೀತ್ ರಾಜ್ ಕುಮಾರ್ ಅವರ 'ಅಭಿ' ಚಿತ್ರದಲ್ಲಿನ ನಟನೆಗಾಗಿ ಉತ್ತಮ ಹಾಸ್ಯ ನಟ ಪ್ರಶಸ್ತಿಯನ್ನು ಅವರು ಪಡೆದಿದ್ದರು.ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ 'ಅಮೃತ ಧಾರೆ' ಮತ್ತು ಜಾಕ್ ಪಾಟ್ ಚಿತ್ರಗಳಲ್ಲಿ ನಟಿಸಿದ್ದರು. ಅನಂತ ನಮನ, ಹೂವು, ದೀಪೋತ್ಸವ, ಹರಿ ನಿನ್ನ ಮುರಳಿ ಮುಂತಾದ ಆಲ್ಬಂಗಳನ್ನು ರಾಜು ಅನಂತಸ್ವಾಮಿ ತಂದಿದ್ದರು.
(ದಟ್ಸ್ ಕನ್ನಡ ವಾರ್ತೆ)
-
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei -
Shri Gandhada Gudi Serial: "ಶ್ರೀಗಂಧದಗುಡಿ" ಸೀರಿಯಲ್ಗೆ ಗುಡ್ಬೈ ಹೇಳಿದ ಸಂಜನಾ ಬುರ್ಲಿ, ಕಾರಣ ಇಲ್ಲಿದೆ












Click it and Unblock the Notifications