ಕರವೇ ಸಮಾವೇಶ: ಜ.18ರಂದು ಮಾರ್ಗ ಬದಲು
ಬೆಂಗಳೂರು, ಜ.17: ಕರ್ನಾಟಕ ರಕ್ಷಣಾ ವೇದಿಕೆಯ ಟಿ.ಎ.ನಾರಾಯಣ ಗೌಡ ಬಣ ಜ.18ರಂದು ಅರಮನೆ ಮೈದಾನದ ಗಾಯತ್ರಿ ವಿಹಾರ್ ಮೈದಾನದಲ್ಲಿ 'ವಿಶ್ವ ಕನ್ನಡ ಜಾಗೃತಿ ಸಮಾವೇಶ'ವನ್ನು ಹಮ್ಮಿಕೊಂಡಿದೆ. ಈ ಹಿನ್ನೆಲೆಯಲ್ಲಿ ವಾಹನ ಸವಾರರು ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಸಂಚಾರ ಪೊಲೀಸರು ಮನವಿ ಮಾಡಿಕೊಂಡಿದ್ದಾರೆ.
ರಮಣ ಮಹರ್ಷಿ ರಸ್ತೆ, ಮೇಖ್ರಿ ವೃತ್ತ, ಜಯಮಹಲ್ ರಸ್ತೆಗಳಲ್ಲಿ ಶನಿವಾರ (ಜ.17) ಸಂಚಾರ ದಟ್ಟಣೆ ಅಧಿಕವಾಗಿರುತ್ತದೆ. ಆದಕಾರಣ ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯವರೆಗೆ ಬದಲಿ ಮಾರ್ಗಗಳನ್ನು ಬಳಸುವಂತೆ ವಾಹನ ಸವಾರರಿಗೆ ಸೂಚಿಸಲಾಗಿದೆ.
ವಿಶ್ವ ಕನ್ನಡಿಗರ ಜಾಗೃತಿ ಸಮಾವೇಶಕ್ಕೆ ಆಗಮಿಸುವ ವಾಹನಗಳು ಹಳೆ ಮಾವಿನಕಾಯಿ ಮಂಡಿ, ಅಮಾನುಲ್ಲಾಖಾನ್ ಗೋದಾಮು ಗೇಟ್ ಹಾಗೂ ಐಸ್ ಗೇಟ್ ಗಳ ಮೂಲಕ ಪ್ರವೇಶಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
(ದಟ್ಸ್ ಕನ್ನಡ ವಾರ್ತೆ)











Click it and Unblock the Notifications