ಮರಾಠಿಗರ ಮೇಲೆ ದೌರ್ಜನ್ಯ ಖಂಡನೀಯ, ಠಾಕ್ರೆ
ಬೆಳಗಾವಿ, ಜ. 18 : ನಗರದಲ್ಲಿ ಮರಾಠಿಗರು ಆಯೋಜಿಸಿದ್ದ ಮಹಾಮೇಳಾವ ಕಾರ್ಯಕ್ರಮಕ್ಕೆ ಅವಕಾಶ ಮಾಡಿಕೊಡದಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಶಿವಸೇನೆ, ಯಾವುದೇ ಕಾರಣಕ್ಕೂ ಮರಾಠಿ ಭಾಷಿಕರ ನೆಲವನ್ನು ಬಿಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ. ಕರ್ನಾಟಕದಲ್ಲಿರುವ ಮರಾಠಿಗರ ಮೇಲೆ ದೌರ್ಜನ್ಯ ನಿಲ್ಲಿಸದಿದ್ದರೆ, ಮಹಾರಾಷ್ಟ್ರದಲ್ಲಿರುವ ಕನ್ನಡಿಗರ ವಿರುದ್ಧ ಹೋರಾಟ ನಡೆಸಲಾಗುವುದು ಎಂದು ಶಿವಸೇನೆ ಮುಖಂಡ ಬಾಳಾ ಠಾಕ್ರೆ ಎಚ್ಚರಿಕೆ ನೀಡಿದ್ದಾರೆ.
ಜ.16 ರಂದು ಅಧಿವೇಶನಕ್ಕೆ ಪ್ರತಿಯಾಗಿ ಮಹಾಮೇಳಾವ ಕಾರ್ಯಕ್ರಮ ತಡೆದಿರುವ ಬಿಜೆಪಿ ಸರ್ಕಾರದ ಕ್ರಮಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರಲ್ಲದೆ, ಮರಾಠಿಗರ ಮೇಲಿನ ಕಿರುಕುಳ ನಿಲ್ಲದಿದ್ದರೆ, ಮಹಾರಾಷ್ಟ್ರದಲ್ಲಿ ಬಿಜೆಪಿಯೊಂದಿಗಿನ ಮೈತ್ರಿ ಮುರಿದುಕೊಳ್ಳುವುದಾಗಿ ಹೇಳಿದರು. ಕೂಡಲೇ ಕರ್ನಾಟಕದ ಗಡಿಯಲ್ಲಿರುವ ಮರಾಠಿಗರ ಸಮಸ್ಯೆ ಮತ್ತು ಗಡಿ ವಿವಾದದ ಶೀಘ್ರ ಇತ್ಯರ್ಥಕ್ಕೆ ಆಗ್ರಹಿಸಿ ರಾಷ್ಟ್ರಪತಿ ಪ್ರತಿಬಾ ಪಾಟೀಲ್ ಹಾಗೂ ಬಿಜೆಪಿ ನಾಯಕ ಎಲ್ ಕೆ ಅಡ್ವಾಣಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸುವುದಾಗಿ ಠಾಕ್ರೆ ಹೇಳಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
ಪೂರಕ ಓದಿಗೆ:
ಭಗವಾಧ್ವಜ ತೆಗೆಯಲು ಕರವೇ ಯತ್ನ,: ಲಾಠಿ ಚಾರ್ಜ್
ಅಧಿವೇಶನ : ಹೊಸತನವಿಲ್ಲದ ರಾಜ್ಯಪಾಲ ಭಾಷಣ












Click it and Unblock the Notifications