ಭಗವಾಧ್ವಜ ಮುಟ್ಟಿದರೆ ಕೈ ಕಟ್ : ರಾಮದಾಸ್
ಬೆಂಗಳೂರು, ಜ. 18 : ಬೆಳಗಾವಿ ನಗರಪಾಲಿಕೆ ಮೇಲಿರುವ ಭಗವಾ ಧ್ವಜಕ್ಕೆ ಯಾರಾದರೂ ಕೈ ಹಾಕಿದರೆ ಅವರ ಕೈ ಕತ್ತರಿಸುವುದಾಗಿ ಮಹಾರಾಷ್ಟ್ರ ಪ್ರತಿಪಕ್ಷದ ನಾಯಕ ರಾಮದಾಸ್ ಎಚ್ಚರಿಕೆ ನೀಡಿದ್ದಾರೆ. ಕನ್ನಡದ ನೆಲೆ ಬೆಳಗಾವಿಯಲ್ಲಿ ನಿಂತುಕೊಂಡು ಕನ್ನಡಿಗರ ವಿರುದ್ಧ ಈ ರೀತಿಯ ಗುಟುರು ಹಾಕಿದ್ದಾರೆ.
ಕರ್ನಾಟಕ ಸರ್ಕಾರ ಇತ್ತೀಚೆಗೆ ಮರಾಠಿಗರ ಮೇಲೆ ದೌರ್ಜನ್ಯ ನಡೆಸತೊಡಗಿದೆ. ಅದರಲ್ಲೂ ಯುವಕರನ್ನು ಗುರಿಯಾಗಿಸಿಕೊಂಡು ಸುಳ್ಳು ಮೊಕದ್ದಮೆ ಹೂಡುವುದು ನಿಲ್ಲಿಸಬೇಕು ಎಂದು ರಾಮದಾಸ್ ಆಗ್ರಹಿಸಿದರು. ರಾಜ್ಯಸಭಾ ಸದಸ್ಯ ಭರತ್ ಕುಮಾರ್ ರಾವುತ್ ಮಾತನಾಡಿ, ಗಡಿ ಭಾಗ ಮರಾಠಿಗರ ಮೇಲೆ ಕಿರುಕುಳ ಹೀಗೆ ಮುಂದುವರಿದಲ್ಲಿ ಮಹಾರಾಷ್ಟ್ರದಲ್ಲಿರುವ ಕನ್ನಡಗರಿಗೆ ಏನು ಮಾಡುತ್ತೇವೆ ಎಂದು ಹೇಳುವುದಿಲ್ಲ, ಮಾಡಿ ತೋರಿಸಬೇಕಾಗುತ್ತದೆ ಎಂದು ಅವರು ಸ್ಪಷ್ಟ ಸೂಚನೆ ನೀಡಿದರು.
ಬಿಎಸ್ ವೈ ಖಂಡನೆ
ಮಹಾರಾಷ್ಟ್ರ ಪ್ರತಿಪಕ್ಷದ ನಾಯಕ ನೀಡಿರುವ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಇದೊಂದು ಖಂಡನೀಯ ಹೇಳಿಕೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಕನ್ನಡಿಗರು, ಮರಾಠಿಗರು ಒಂದೇ ತಾಯಿ ಮಕ್ಕಳಂತೆ ಬಾಳುತ್ತಿದ್ದೇವೆ. ನಮ್ಮ ನಡುವೆ ವಿಷ ಬೀಜ ಬಿತ್ತಲು ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ.
ರಾಮದಾಸ್ ಮಾಡಿರುವ ಆರೋಪವನ್ನು ಸಾರಾಸಗಟಾಗಿ ತಳ್ಳಿಹಾಕಿದ ಯಡಿಯೂರಪ್ಪ, ಮರಾಠಿಗರ ಮೇಲೆ ದೌರ್ಜನ್ಯ ನಡೆದಿಲ್ಲ, ನಡೆಯಲು ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಎಲ್ಲ ಭಾಷಿಕರಿಗೂ ಸಹಬಾಳ್ವೆಯಿಂದ ಗೌರವಯುತವಾಗಿ ಬಾಳಲು ಅವಕಾಶ ಮಾಡಿಕೊಡಲಾಗಿದೆ ಎಂದು ಅವರು ಹೇಳಿದರು.
(ದಟ್ಸ್ ಕನ್ನಡ ವಾರ್ತೆ)
ಮರಾಠಿಗರ ಮೇಲೆ ದೌರ್ಜನ್ಯ ಖಂಡನೀಯ, ಠಾಕ್ರೆ
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications