ಪಿಎಸ್ಐ ಮೇಲೆ ಎಸ್ಪಿ ನಾರಂಗ್ ಹಲ್ಲೆ
ಬೆಳಗಾವಿ, ಜ. 19 : ಬೆಳಗಾವಿ ಜಿಲ್ಲಾ ವರಿಷ್ಠಾಧಿಕಾರಿ ಸೋನಿಯಾ ನಾರಂಗ್ ಗೊತ್ತಿರಬೇಕಲ್ಲ, ದಾವಣಗೆರೆ ಎಸ್ಪಿಯಾಗಿದ್ದ ಸಂದರ್ಭದಲ್ಲಿ ಹೊನ್ನಾಳಿ ಬಿಜೆಪಿ ಶಾಸಕ ರೇಣುಕಾಚಾರ್ಯ ಅವರಿಗೆ ಕಪಾಳಮೋಕ್ಷ ಮಾಡಿ ರಾಜಕಾರಣಿಗಳ ಕೆಂಗಣ್ಣಿಗೆ ಗುರಿಯಾಗಿದ್ದವರು. ಆ ಘಟನೆ ಹಸಿರಿರುವಾಗಾಲೇ ಬೆಳಗಾವಿ ಅಧಿವೇಶನದ ವೇಳೆ ಕರ್ತವ್ಯಲೋಪ ಎಸಗಿದ ಪಿಎಸ್ಐ ವಿಕಾಸ ಲಮಾಣಿ ಅವರನ್ನು ಎಸ್ಪಿ ನಾರಂಗ್ ಸಿಕ್ಕಾಪಟ್ಟೆ ಥಳಿಸಿದ ಪ್ರಕರಣ ಭಾನುವಾರ ನಡೆದಿದೆ.
ಮಹಾರಾಷ್ಟ್ರ ಏಕೀಕರಣ ಸಮಿತಿ ಜ.16 ರಂದು ಮಹಾಮೇಳಾವ ಸಮಾವೇಶ ನಡೆಸಲು ಉದ್ದೇಶಿತ್ತು. ಆದರೆ ಜಿಲ್ಲಾಡಳಿತ ತಾಲ್ಲೂಕಿನನಾದ್ಯಂತ ನಿಷೇಧಾಜ್ಞೆ ಜಾರಿಗೆ ತಂದ ಹಿನ್ನೆಲೆಯಲ್ಲಿ ಸಮಾವೇಶ ವಿಫಲಗೊಂಡಿತ್ತು. ನಗರದ ಕೆಲವಡೆ ಎಂಇಎಸ್ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿ ಅಧಿವೇಶನದ ಸ್ವಾಗತ ಫಲಕಗಳನ್ನು ಕಿತ್ತು ಹಾಕಿದ್ದರು. ಇದೇ ಸಂದರ್ಭದಲ್ಲಿ ಎಪಿಎಂಸಿ ಠಾಣೆಯ ವ್ಯಾಪ್ತಿಯಲ್ಲಿ ಎಂಇಎಸ್ ಕಿಡಿಗೇಡಿಗಳು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಬ್ಯಾನರ್ ಹರಿದು ಹಾಕಿದ್ದಾರೆ. ಈ ಘಟನೆ ಶನಿವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೋನಿಯಾ ನಾರಂಗ್ ಗಮನಕ್ಕೆ ಬಂದಿದೆ.
ಹಾಗಾಗಿ ಶನಿವಾರ ರಾತ್ರಿ ಅವರು ಎಪಿಎಂಸಿ ಠಾಣೆ ಪಿಎಸ್ಐ ವಿಕಾಸ ಲಮಾಣಿ ಅವರನ್ನು ಕರೆಸಿ ವಿಚಾರಣೆ ನಡೆಸಿದ್ದಾರೆ. ಬ್ಯಾನರ್ ಹರಿದು ಹಾಕುತ್ತಿದ್ದಾಗ ನೀವೇನು ಮಾಡುತ್ತಿದ್ದೀರಿ ಎಂದು ಪ್ರಶ್ನಿಸಿದಾಗ ಪಿಎಸ್ ಐ ಬೇಜವಾಬ್ದಾರಿ ಮಾತುಗಳನ್ನಾಡಿದ್ದಾರೆ. ಇದರಿಂದ ಕುಪಿತರಾದ ಎಸ್ಪಿ ನಾರಂಗ್ ಪಿಎಸ್ಐಯನ್ನು ಮನಬಂದಂತೆ ಥಳಿಸಿದ್ದಾರೆ. ತೀವ್ರವಾಗಿ ಗಾಯಗೊಂಡಿರುವ ಲಮಾಣಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಧೀರ್ಘಕಾಲದ ಅವಧಿಗೆ ರಜೆ ಮೇಲೆ ಕಳುಹಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
(ದಟ್ಸ್ ಕನ್ನಡ ವಾರ್ತೆ)
ಅಧಿವೇಶನ : ಹೊಸತನವಿಲ್ಲದ ರಾಜ್ಯಪಾಲ ಭಾಷಣ
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications