ಪಿಎಸ್ಐ ಮೇಲೆ ಎಸ್ಪಿ ನಾರಂಗ್ ಹಲ್ಲೆ
ಬೆಳಗಾವಿ, ಜ. 19 : ಬೆಳಗಾವಿ ಜಿಲ್ಲಾ ವರಿಷ್ಠಾಧಿಕಾರಿ ಸೋನಿಯಾ ನಾರಂಗ್ ಗೊತ್ತಿರಬೇಕಲ್ಲ, ದಾವಣಗೆರೆ ಎಸ್ಪಿಯಾಗಿದ್ದ ಸಂದರ್ಭದಲ್ಲಿ ಹೊನ್ನಾಳಿ ಬಿಜೆಪಿ ಶಾಸಕ ರೇಣುಕಾಚಾರ್ಯ ಅವರಿಗೆ ಕಪಾಳಮೋಕ್ಷ ಮಾಡಿ ರಾಜಕಾರಣಿಗಳ ಕೆಂಗಣ್ಣಿಗೆ ಗುರಿಯಾಗಿದ್ದವರು. ಆ ಘಟನೆ ಹಸಿರಿರುವಾಗಾಲೇ ಬೆಳಗಾವಿ ಅಧಿವೇಶನದ ವೇಳೆ ಕರ್ತವ್ಯಲೋಪ ಎಸಗಿದ ಪಿಎಸ್ಐ ವಿಕಾಸ ಲಮಾಣಿ ಅವರನ್ನು ಎಸ್ಪಿ ನಾರಂಗ್ ಸಿಕ್ಕಾಪಟ್ಟೆ ಥಳಿಸಿದ ಪ್ರಕರಣ ಭಾನುವಾರ ನಡೆದಿದೆ.
ಮಹಾರಾಷ್ಟ್ರ ಏಕೀಕರಣ ಸಮಿತಿ ಜ.16 ರಂದು ಮಹಾಮೇಳಾವ ಸಮಾವೇಶ ನಡೆಸಲು ಉದ್ದೇಶಿತ್ತು. ಆದರೆ ಜಿಲ್ಲಾಡಳಿತ ತಾಲ್ಲೂಕಿನನಾದ್ಯಂತ ನಿಷೇಧಾಜ್ಞೆ ಜಾರಿಗೆ ತಂದ ಹಿನ್ನೆಲೆಯಲ್ಲಿ ಸಮಾವೇಶ ವಿಫಲಗೊಂಡಿತ್ತು. ನಗರದ ಕೆಲವಡೆ ಎಂಇಎಸ್ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿ ಅಧಿವೇಶನದ ಸ್ವಾಗತ ಫಲಕಗಳನ್ನು ಕಿತ್ತು ಹಾಕಿದ್ದರು. ಇದೇ ಸಂದರ್ಭದಲ್ಲಿ ಎಪಿಎಂಸಿ ಠಾಣೆಯ ವ್ಯಾಪ್ತಿಯಲ್ಲಿ ಎಂಇಎಸ್ ಕಿಡಿಗೇಡಿಗಳು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಬ್ಯಾನರ್ ಹರಿದು ಹಾಕಿದ್ದಾರೆ. ಈ ಘಟನೆ ಶನಿವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೋನಿಯಾ ನಾರಂಗ್ ಗಮನಕ್ಕೆ ಬಂದಿದೆ.
ಹಾಗಾಗಿ ಶನಿವಾರ ರಾತ್ರಿ ಅವರು ಎಪಿಎಂಸಿ ಠಾಣೆ ಪಿಎಸ್ಐ ವಿಕಾಸ ಲಮಾಣಿ ಅವರನ್ನು ಕರೆಸಿ ವಿಚಾರಣೆ ನಡೆಸಿದ್ದಾರೆ. ಬ್ಯಾನರ್ ಹರಿದು ಹಾಕುತ್ತಿದ್ದಾಗ ನೀವೇನು ಮಾಡುತ್ತಿದ್ದೀರಿ ಎಂದು ಪ್ರಶ್ನಿಸಿದಾಗ ಪಿಎಸ್ ಐ ಬೇಜವಾಬ್ದಾರಿ ಮಾತುಗಳನ್ನಾಡಿದ್ದಾರೆ. ಇದರಿಂದ ಕುಪಿತರಾದ ಎಸ್ಪಿ ನಾರಂಗ್ ಪಿಎಸ್ಐಯನ್ನು ಮನಬಂದಂತೆ ಥಳಿಸಿದ್ದಾರೆ. ತೀವ್ರವಾಗಿ ಗಾಯಗೊಂಡಿರುವ ಲಮಾಣಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಧೀರ್ಘಕಾಲದ ಅವಧಿಗೆ ರಜೆ ಮೇಲೆ ಕಳುಹಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
(ದಟ್ಸ್ ಕನ್ನಡ ವಾರ್ತೆ)
ಅಧಿವೇಶನ : ಹೊಸತನವಿಲ್ಲದ ರಾಜ್ಯಪಾಲ ಭಾಷಣ
-
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು












Click it and Unblock the Notifications