ಪತ್ರಕರ್ತರೆ ದೊಡ್ಡ ಭಯೋತ್ಪಾದಕರು, ಜರ್ದಾರಿ
ಇಸ್ಲಾಮಾಬಾದ್, ಜ. 19 : ಮುಂಬೈ ಭಯೋತ್ಪಾದನೆಗೆ ಸಂಬಂಧಿಸಿದಂತೆ ಪ್ರಥಮ ಬಾರಿಗೆ ಮಾಧ್ಯಮ ವಿರುದ್ಧ ಪಾಕ್ ಅಧ್ಯಕ್ಷ ಆಸೀಫ್ ಅಲೀ ಜರ್ದಾರಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮುಂಬೈ ದಾಳಿಯ ವಿಷಯದಲ್ಲಿ ಮಾಧ್ಯಮಗಳು ಹಾಗೂ ಕೆಲ ಪತ್ರಕರ್ತರ ಅನಾವಶ್ಯಕವಾಗಿ ಘಟನೆಯನ್ನು ವೈಭವೀಕರಿಸಿದರು. ನಿಜವಾದ ಉಗ್ರರಿಗಿಂತ ಪತ್ರಕರ್ತರೆ ದೊಡ್ಡ ಭಯೋತ್ಪಾದಕರು ಎಂದು ಅವರು ಜರಿದಿದ್ದಾರೆ.
ಕೈಗಾರಿಕೋಧ್ಯಮಿಗಳು ಏರ್ಪಡಿಸಿದ್ದ ಸಭೆಯಲ್ಲಿ ಪಾಲ್ಗೊಂಡು ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬೈ ದಾಳಿಯ ನಂತರ ಮಾಧ್ಯಮಗಳು ತಮ್ಮ ಜವಾಬ್ದಾರಿಯನ್ನು ಮರೆತು ವರದಿ ಮಾಡಿವೆ ಎಂದು ಖೇದ ವ್ಯಕ್ತಪಡಿಸಿದರು. ಮಾಧ್ಯಮಗಳ ವೈಭವೀಕರಣದ ವರದಿಯಿಂದಾಗಿ ಸರ್ಕಾರ ಅನೇಕ ಬಾರಿ ಇಕ್ಕಟ್ಟಿಗೆ ಸಿಲುಕುವಂತಾಗಿದೆ. ಇದರಿಂದಾಗಿ ದೇಶ ಅಂತಾರಾಷ್ಟ್ರೀಯ ಮಟ್ಟದಲ್ಲಿ ತೆಲೆ ತಗ್ಗಿಸುವಂತ ಘಟನೆಯೂ ನಡೆದಿದೆ. ಇದೆಲ್ಲವೂ ಮಾಧ್ಯಮಗಳು ಮಾಡಿದ ಅನಾವಶ್ಯಕ ವರದಿಯಿಂದಾಗಿ ಎಂದು ಅವರು ಕಿಡಿಕಾರಿದರು.
ಮಾಧ್ಯಮಗಳ ಮೇಲೆ ಅಪಾರ ಗೌರವವಿದೆ, ಆದರೆ ಹೊಣೆ ಅರಿತು ಕೆಲಸ ಮಾಡಿ, ಸತ್ಯಾಸತ್ಯತೆಗಳನ್ನು ತಿಳಿದುಕೊಂಡು ವರದಿ ಮಾಡಿದರೆ ಎಲ್ಲರಿಗೂ ಕ್ಷೇಮ. ಅದನ್ನು ಬಿಟ್ಟು ಸಾರ್ವಜನಿಕರ ಗಮನ ಸೆಳೆಯುವಂತ ಕಟ್ಟುಕತೆ ವರದಿ ಮಾಡುವುದು ಸಲ್ಲ ಎಂದು ಜರ್ದಾರಿ ಮಾಧ್ಯಮಗಳಿಗೆ ಕಿವಿ ಮಾತು ಹೇಳಿದ್ದಾರೆ.
(ಏಜನ್ಸೀಸ್)
ಪಾಕ್ ಗೆ ಉಗ್ರ ಕಸಬ್ ಡಿಎನ್ಎ ಸ್ಯಾಂಪಲ್
-
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು












Click it and Unblock the Notifications